ಬಿಹಾರ ವಿಧಾನಸಭಾ ಚುನಾವಣೆಗೆ (Bihar Election) ವೇದಿಕೆ ಸಜ್ಜಾಗಿದೆ. ಬುಧವಾರ ಮೊದಲ ಹಂತದ ಚುನಾವಣೆಯ ಮತದಾನ (voting) ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದ್ದು, ಜನರು ಸರತಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.
ಮುಂಬರುವ ಬಿಹಾರ ಚುನಾವಣೆಯಲ್ಲಿ ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾದಳ 230 ರಲ್ಲಿ 144 ಸ್ಥಾನಗಳಿಗೆ ಸ್ಪರ್ಧಿಸಲಿದ್ದು, ಕಾಂಗ್ರೆಸ್ 70 ಮತ್ತು ಎಡ ಪಕ್ಷಗಳಿಗೆ 29 ಸ್ಥಾನಗಳನ್ನು ನೀಡಲಿದೆ ಎಂದು ರಾಜ್ಯದ ಪ್ರಮುಖ ವಿರೋಧ ಪಕ್ಷಗಳು ಶನಿವಾರ ಪ್ರಕಟಿಸಿವೆ.
ಬಿಹಾರ ವಿಧಾನಸಭಾ ಚುನಾವಣೆಗಳಿಗೆ ದಿನಾಂಕವನ್ನು ಘೋಷಣೆಯಾದ ಕೂಡಲೇ , ಎಲ್ಲಾ ಪಕ್ಷಗಳು ಗೆಲುವಿಗಾಗಿ ತಮ್ಮ ತಮ್ಮ ಹಕ್ಕು ಸಾಧಿಸುತ್ತಿದ್ದರೆ, ಮತದಾರರನ್ನು ಸೆಳೆಯಲು ಹೊಸ ಹೊಸ ಘೋಷಣೆಗಳು ಮೊಳಗಲಾರಂಭಿಸಿವೆ.
ರಾಷ್ಟ್ರೀಯ ಜನತಾದಳ (ಆರ್ಜೆಡಿ) ಬಿಹಾರದಲ್ಲಿ ಸರ್ಕಾರ ರಚಿಸಿದರೆ, ಮೊದಲ ಕ್ಯಾಬಿನೆಟ್ ಸಭೆಯಲ್ಲಿ 10 ಲಕ್ಷ ಉದ್ಯೋಗಗಳಿಗೆ ಅನುಮೋದನೆ ನೀಡಲಾಗುವುದು ಎಂದು ಆರ್ಜೆಡಿ ಮುಖಂಡ ತೇಜಶ್ವಿ ಯಾದವ್ ಭಾನುವಾರ ಹೇಳಿದರು.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ರಾಜ್ಯ ಚುನಾವಣೆಗಾಗಿ ತಮ್ಮ ಅಭಿಯಾನವನ್ನು ಪ್ರಾರಂಭಿಸುತ್ತಿದ್ದಂತೆ, ಲೋಕ ಜನಶಕ್ತಿ ಪಕ್ಷ ಅಥವಾ ಚಿರಾಗ್ ಪಾಸ್ವಾನ್ ನೇತೃತ್ವದ ಎಲ್ಜೆಪಿ ಅವರೊಂದಿಗಿನ ಪ್ರಮುಖ ಮೈತ್ರಿಯ ಮೇಲೆ ಅನಿಶ್ಚಿತತೆಯ ಕರಿನೆರಳು ಆವರಿಸಿದೆ.
ಬಿಹಾರದಲ್ಲಿ ವಿಧಾನ ಪರಿಷತ್ ಚುನಾವಣೆಗೆ ಮುನ್ನ ಮಂಗಳವಾರ (ಜೂನ್ 23) ರಾಷ್ಟ್ರೀಯ ಜನತಾದಳ (ಆರ್ಜೆಡಿ) ಗೆ ದೊಡ್ಡ ಹೊಡೆತ ಬಿದ್ದಿದ್ದು, ಅದರ ಎಂಟು ಎಂಎಲ್ಸಿಗಳಲ್ಲಿ ಐವರು ಪಕ್ಷವನ್ನು ತೊರೆದು ನಿತೀಶ್ ಕುಮಾರ್ ಅವರ ಜನತಾದಳ (ಸಂಯುಕ್ತ) ಗೆ ಸೇರ್ಪಡೆಗೊಂಡರು.
ಭಾರತ ಮತ್ತು ಚೀನಾ ನಡುವೆ ಉದ್ವಿಗ್ನತೆಯ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸರ್ವಪಕ್ಷ ಸಭೆ ಕರೆದಿದ್ದಾರೆ. ವರ್ಚುವಲ್ ಸಭೆ ಇಂದು ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಲಿದೆ.
ಬಿಹಾರ ರಾಜಧಾನಿ ಪಾಟ್ನಾದಲ್ಲಿ ಮತ್ತೊಮ್ಮೆ ರಾಜಕೀಯ ಪೋಸ್ಟರ್ಗಳು ರಾರಾಜಿಸುತ್ತಿವೆ. ಈ ಬಾರಿ ಜೆಡಿಯು ಪೋಸ್ಟರ್ಗಳನ್ನು ಹಾಕಿದೆ. ಜೆಡಿಯು ಲಾಲು ಯಾದವ್ ಹಗರಣದ ಕಥೆಯನ್ನು ಪೋಸ್ಟರ್ಗಳ ಮೂಲಕ ತೋರಿಸಿದೆ.
2020 ರಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಬಿಹಾರದಲ್ಲಿ ಅಧಿಕಾರದಿಂದ ಕಿತ್ತೊಗೆಯಲು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಶನಿವಾರ ಕರೆ ನೀಡಿದ್ದು, ಜೆಡಿಯು ಸರ್ಕಾರದ ಮೇಲೆ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಲಾಲು ಪ್ರಸಾದ್ ಯಾದವ್ ಅವರು 11 ನೇ ಬಾರಿಗೆ ಮಂಗಳವಾರ (ಡಿಸೆಂಬರ್ 3) ರಾಷ್ಟ್ರೀಯ ಜನತಾದಳ (ಆರ್ಜೆಡಿ) ಮುಖ್ಯಸ್ಥರಾಗಿ ಅವಿರೋಧವಾಗಿ ಆಯ್ಕೆಯಾದರು. ಬಹು ಕೋಟಿ ಮೇವು ಹಗರಣ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಅವರನ್ನು ಡಿಸೆಂಬರ್ 23, 2017 ರಂದು ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು.
ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಯಾದವ್ ಅವರಿಗೆ ಮೂತ್ರಪಿಂಡದಲ್ಲಿ ಸಮಸ್ಯೆ ಉಂಟಾಗಿದ್ದರಿಂದಾಗಿ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದೆ. ಲಾಲು ಅವರನ್ನು ಪ್ರಸ್ತುತ ಜಾರ್ಖಂಡ್ನ ರಾಂಚಿಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಮೇವು ಹಗರಣ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ 14 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಆರ್ಜೆಡಿ ಹೀನಾಯ ಸೋಲಿನಿಂದ ಕಂಗೆಟ್ಟಿದೆ.ಅದರಲ್ಲೂ ಈಗ ತೇಜ್ ಪ್ರತಾಪ್ ಮತ್ತು ತೇಜಸ್ವಿ ಯಾದವ್ ನಡುವಿನ ಶೀತಲ ಸಮರ ನಿಜಕ್ಕೂ ತಲೆ ನೋವಾಗಿ ಪರಿಣಮಿಸಿದೆ.ಈ ಹಿನ್ನಲೆಯಲ್ಲಿ ಈಗ ಮಾಜಿ ಮುಖ್ಯಮಂತ್ರಿ ರಾಬ್ಡಿದೇವಿ ಪಕ್ಷವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ.
ಐದು ಹಂತದ ಮತದಾನದ ನಂತರ ಎನ್ಡಿಎ ಕಥೆ ಮುಗಿದಿದೆ. ಇದಕ್ಕೆ ಪ್ರಮುಖ ಕಾರಣ ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ನಡುವಿನ ಸಂಘರ್ಷ ಎಂದು ಆರ್ಜೆಡಿ ನಾಯಕ ತೇಜಶ್ವಿ ಯಾದವ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.