Rajasthan Assembly Election 2023: ರಾಜಸ್ಥಾನ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಪ್ರಮುಖ ಅಭ್ಯರ್ಥಿಗಳಾದ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್ ಮತ್ತು ವಸುಂಧರಾ ರಾಜೆ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಗೆಹ್ಲೋಟ್ ಸರ್ದಾರ್ಪುರದಿಂದ ಕಣದಲ್ಲಿದ್ದರೆ, ಪೈಲಟ್ ಟೊಂಕ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
Rajasthan Election Result 2023: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸರ್ದಾರ್ಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರವು ಗೆಹ್ಲೋಟ್ ಅವರ ಕಾರ್ಯಕ್ಷೇತ್ರವಾಗಿದ್ದು, ಅವರು 25 ವರ್ಷಗಳಿಂದ ನಿರಂತರವಾಗಿ ಇಲ್ಲಿಂದ ಚುನಾವಣೆಯಲ್ಲಿ ಗೆದ್ದಿದ್ದಾರೆ.
ಜೂನ್ 11 ರಂದು ತನ್ನ ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿಯಂದು ತನ್ನ ನಾಯಕ ಸಚಿನ್ ಪೈಲಟ್ ಪ್ರತ್ಯೇಕ ಪಕ್ಷವನ್ನು ಘೋಷಿಸಬಹುದು ಎಂಬ ವದಂತಿಗಳನ್ನು ಕಾಂಗ್ರೆಸ್ ಶುಕ್ರವಾರದಂದು ತಳ್ಳಿಹಾಕಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಪಕ್ಷವು ಒಗ್ಗಟ್ಟಾಗಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.
Rajasthan Politics: ಇದೇ ವರ್ಷ ರಾಜಸ್ಥಾನದ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮತ್ತು ಸಿಎಂ ಅಶೋಕ್ ಗೆಹ್ಲೋಟ್ ನಡುವಿನ ವೈಮನಸ್ಸನ್ನು ಹೋಗಲಾಡಿಸುವುದು ತುಂಬಾ ಮುಖ್ಯವಾದ ಸಂಗತಿಯಾಗಿದೆ. ಅಶೋಕ್ ಗೆಹ್ಲೋಟ್ ಅವರಿಗೆ ಸಚಿನ್ ಪೈಲಟ್ ಬಗ್ಗೆ ಪ್ರಶ್ನೆ ಕೇಳಿದಾಗ, ಅವರಿಗೆ ಪಕ್ಷದ ಹೈಕಮಾಂಡ್ ಸೋನಿಯಾ ಗಾಂಧಿಯವರ ಒಂದು ಮಾತು ನೆನಪಿಗೆ ಬಂದಿದೆ.
ರಾಜಸ್ತಾನದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಿದ್ದ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲೆಟ್ ನಡುವಿನ ಸಂಘರ್ಷಕ್ಕೆ ವಿರಾಮ ಹಾಡುವಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಯಶಸ್ವಿಯಾಗಿದೆ.
ಇಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆಯಾಗಿದೆ. ಇದು ಬಿಜೆಪಿ ಸರ್ಕಾರದ ವಿದಾಯದ ಬಜೆಟ್ ಆಗಿದೆ. ಕರ್ನಾಟಕ ರಾಜ್ಯ ಸರ್ಕಾರ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ದುರಾಡಳಿತದ ಮೂಲಕ 40% ಕಮಿಷನ್ ಸರ್ಕಾರ ಎಂದು ರಾಷ್ಟ್ರ ಮಟ್ಟದಲ್ಲಿ ಕುಖ್ಯಾತಿ ಪಡೆದಿದೆ ಎಂದು ರಾಜಸ್ಥಾನದ ಕಾಂಗ್ರೆಸ್ ನಾಯಕ ಸಚಿನ್ ಪೈಲೆಟ್ ಅವರು ಟೀಕಾಪ್ರಹಾರ ನಡೆಸಿದ್ದಾರೆ.ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ನ ಚುಕ್ಕಾಣಿ ಹಿಡಿಯುವುದರೊಂದಿಗೆ, ಅಕ್ಟೋಬರ್ 26, 2022 ರಂದು ಬುಧವಾರ ಸಚಿನ್ ಪೈಲಟ್, ಉದಯಪುರ ಘೋಷಣೆಯ ಪ್ರಕಾರ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪಕ್ಷದ ಕಾರ್ಯಕರ್ತರಿಗೆ ಪಕ್ಷದ ಶೇಕಡಾ 50 ರಷ್ಟು ಹುದ್ದೆಗಳನ್ನು ನೀಡಲಾಗುವುದು ಎಂದು ಹೇಳಿದರು.
Rajasthan Politics: ನಮ್ಮ ಬಾಗಿಲು ಸಂಪೂರ್ಣವಾಗಿ ತೆರೆದಿದೆ'' ಎಂದು ರಾಜಸ್ಥಾನದ ಬಿಜೆಪಿ ಶಾಸಕರೊಬ್ಬರು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಬಿದ್ದು ಬಿಜೆಪಿಗೆ ಆ ಸರ್ಕಾರ ಬೀಳಿಸಲು ಯಾರಾದರೂ ಸಹಾಯ ಮಾಡಿದರೆ ಅಂತಹ ವ್ಯಕ್ತಿಗೆ ನಾವು ಸಹಕಾರ ನೀಡುತ್ತೇವೆ. ಕಾಂಗ್ರೆಸ್ ನ ಈ ನಾಟಕದಲ್ಲಿ ಬಿಜೆಪಿ ಪಾತ್ರವಿಲ್ಲ. ಇದು ಅವರ ಆಂತರಿಕ ವಿಚಾರ' ಅವರು ಹೇಳಿದ್ದಾರೆ.
ಶನಿವಾರದಂದು ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಅವರು ತಮ್ಮ ರಾಜ್ಯದಲ್ಲಿನ ರಾಜಕೀಯ ಬಿಕ್ಕಟ್ಟಿನ ನೈತಿಕ ಹೊಣೆಗಾರಿಕೆಯನ್ನು ವಹಿಸಿಕೊಂಡ ಕೆಲವು ದಿನಗಳ ನಂತರ ರಾಜಸ್ಥಾನದ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಸುಳಿವು ನೀಡಿದ್ದಾರೆ.
Ashok Gehlot: ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯ ಜೊತೆಗೆ ಇತ್ತೀಚಿನ ದಿನಗಳಲ್ಲಿ ರಾಜಸ್ಥಾನದ ಕಾಂಗ್ರೆಸ್ ಪಾಳೆಯದಲ್ಲಿ ಭಾರಿ ಬಿರುಗಾಳಿಯೇ ಎದ್ದಿದೆ. ಏತನ್ಮಧ್ಯೆ ರಾಜಸ್ಥಾನದ ಮುಖ್ಯಮಂತ್ರಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಭೇಟಿಯ ಬಳಿಕ ಅವರ ಕೈಯಲ್ಲಿ ಪತ್ರವೊಂದು ಕಂಡುಬಂದಿದ್ದು, ಪತ್ರದಲ್ಲಿ ಪೈಲಟ್ ಬಣದ ವಿರುದ್ಧ ದೂರುಗಳಿದ್ದವು ಎನ್ನಲಾಗಿದೆ.
Rajasthan Political Crisis: ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆ ದೆಹಲಿ ದರ್ಬಾರ್ನಲ್ಲಿ ರಾಜ್ಯದ ಪ್ರಮುಖ ನಾಯಕರ ಹಾಜರಾತಿ ಮುಂದುವರೆದಿದೆ. ಈ ಹಿನ್ನೆಲೆ ಇಂದು ಸಚಿನ್ ಪೈಲಟ್ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. ಸಂಜೆ 7 ರಿಂದ 8 ರ ನಡುವೆ ಈ ಭೇಟಿ ನಡೆಯಲಿದೆ.
Rajasthan Politics: ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ಬಿಕ್ಕಟ್ಟು ಮತ್ತು ಸಿಎಂ ಅಶೋಕ್ ಗೆಹ್ಲೋಟ್, ಸ್ಪೀಕರ್ ಸಿ.ಪಿ. ಜೋಷಿ ಅವರ 92 ಶಾಸಕರ ರಾಜೀನಾಮೆ ಕುರಿತಾದ ಮೌನ ಇದೀಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
Congress News: ರಾಜಸ್ಥಾನದಲ್ಲಿ ಗೆಹಲೋಟ್ ಬೆಂಬಲಿಗ ಶಾಸಕರ ಬಂಡಾಯದ ಬಳಿಕ, ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೆಸ್ ನಿಂದ ಅಶೋಕ್ ಗೆಹಲೋಟ್ ಅವರ ಹೆಸರನ್ನು ಹೊರಗಿಡಲಾಗಿದೆ ಎನ್ನಲಾಗುತ್ತಿದೆ.
ರಾಜಸ್ಥಾನ ಕಾಂಗ್ರೆಸ್ನಲ್ಲಿ ಈಗ ಭಾರೀ ಸುಂಟರಗಾಳಿ ಎದ್ದಿದೆ. ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಸಿಎಂ ಅಶೋಕ್ ಗೆಹ್ಲೋಟ್ ತಮ್ಮ ಸ್ಥಾನದಲ್ಲಿ ತಮ್ಮ ಕ್ಯಾಂಪ್ನ ಅಭ್ಯರ್ಥಿಯನ್ನೇ ಕೂರಿಸಲು ಲಾಬಿ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಈಗ ಒಬ್ಬ ವ್ಯಕ್ತಿ, ಒಂದು ಹುದ್ದೆ ನಿಯಮ ಈಗ ನಿಜಕ್ಕೂ ಕಗ್ಗಂಟಾಗಿ ಪರಿಣಮಿಸಿದೆ.ಅದರಲ್ಲೂ ರಾಜಸ್ತಾನದ ವಿಚಾರದಲ್ಲಿ ಇದು ನಿಜಕ್ಕೂ ತಲೆನೋವಾಗಿ ಪರಿಣಮಿಸಿದೆ ಎಂದು ಹೇಳಬಹುದು.
ಮುಖ್ಯಮಂತ್ರಿ ಅಶೋಕ್ ಗೆಹಲೋಟ್ ಅವರು ಹೊಸ ಪೀಳಿಗೆಗೆ ಮುನ್ನೆಡೆಸಲು ಅವಕಾಶ ಸಿಗಬೇಕು ಎಂದು ಹೇಳಿರುವ ಬೆನ್ನಲ್ಲೇ ಈಗ ರಾಜಸ್ತಾನದ ನೂತನ ಮುಖ್ಯಮಂತ್ರಿ ಪಟ್ಟಕ್ಕೆ ಸಚಿನ್ ಪೈಲೆಟ್ ಮುಂಚೂಣಿ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ.
Rajasthan Congress: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಅಶೋಕ್ ಗೆಹಲೋಟ್ ಘೋಷಿಸಿದ ಬಳಿಕ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ರಾಜಕೀಯ ಕಸರತ್ತು ತೀವ್ರಗೊಂಡಿದೆ. ಸಿಎಂ ಸ್ಥಾನದ ಆಕಾಂಕ್ಷಿ ಎಂದೇ ಪರಿಗಣಿಸಲಾಗುವ ಸಚಿಕ್ ಪೈಲಟ್ ಸಕತ್ ಹಲ್ಚಲ್ ನಡೆಸಿದ್ದಾರೆ.
ಇಡಿ ಇಕ್ಕಳದಲ್ಲಿ ಸಿಲಿಕೊಕೊಂಡಿರೊ ರಾಷ್ಟ್ರ ನಾಯಕ ರಾಹುಲ್ ಗಾಂಧಿಗೆ ಮೂರನೇ ದಿನವೂ ಜಾರಿ ನಿರ್ದೇಶನಾಲಯ ಫುಲ್ ಡ್ರಿಲ್ ನಡೆಸಿದೆ. ಅತ್ತ ರಾಹುಲ್ ಗಾಂಧಿ ಇಡಿ ವಿಚಾರಣೆ ಎದುರಿಸುತ್ತಿದ್ರೆ, ಇತ್ತ ಕಾಂಗ್ರೆಸ್ ನಾಯಕರು ರಾಷ್ಟ್ರ ರಾಜ್ಯಧಾನಿಯಲ್ಲಿ ಮತ್ತೆ ದೊಡ್ಡ ಹೈಡ್ರಾಮವೇ ಸೃಷ್ಟಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.