Schools Reopening News: ಶೀಘ್ರದಲ್ಲೇ ದೇಶಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ತೆರೆಯಲಿದ್ದು, ಕೇಂದ್ರ ಸರ್ಕಾರವು ರಾಜ್ಯ ಸರಕಾರಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಬಹುದು ಎಂದು ಹೇಳಲಾಗುತ್ತಿದೆ.
ಜನವರಿ 12 ರಂದು ಧಾರವಾಡ ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲ್ಲೂಕಿನಾದಾದ್ಯಂತ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ದಿನಾಂಕ 13-01-2022 ರಿಂದ ಮುಂದಿನ ಆದೇಶವಾಗುವವರೆಗೆ ಶಾಲೆಗಳನ್ನು ತೆರೆಯದಂತೆ ಆದೇಶಿಸಿರುವದನ್ನು ಹಿಂಪಡೆಯಲಾಗಿದೆ. ಜನೆವರಿ 24 ರ ಸೋಮವಾರದಿಂದ ಶಾಲೆಗಳನ್ನು ಪುನರ್ ಆರಂಭಿಸಲು ಜಿಲ್ಲಾಧಿಕಾರಿಗಳು ನಿರ್ದೇಶಿಸಿದ್ದಾರೆ.
ಬಿಹಾರದಲ್ಲಿ ಹೊಸ ಕರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ 1 ನೇ ತರಗತಿಯಿಂದಲೂ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಜೊತೆಗೆ ಚಿತ್ರಮಂದಿರಗಳು ಮತ್ತು ಶಾಪಿಂಗ್ ಮಾಲ್ಗಳನ್ನು ತೆರೆಯಲು ಆದೇಶಿಸಲಾಗಿದೆ.
School Reopening News: ಶಾಲೆಯನ್ನು ತೆರೆಯುವ ಮೊದಲು, ಸರ್ಕಾರವು ಮಾರ್ಗಸೂಚಿಗಳನ್ನು ಸಹ ಹೊರಡಿಸಿದೆ, ಅದರ ಪ್ರಕಾರ ಶಾಲೆಗಳ ಸಂಪೂರ್ಣ ನೈರ್ಮಲ್ಯೀಕರಣದ ಅವಶ್ಯಕತೆಯಿದೆ ಮತ್ತು ಸ್ಯಾನಿಟೈಜರ್ ನಂತರವೇ ವಿದ್ಯಾರ್ಥಿಗಳಿಗೆ ಶಾಲೆಗೆ ಪ್ರವೇಶವನ್ನು ನೀಡಲಾಗುತ್ತದೆ.
Schools Reopen: ಕರೋನಾವೈರಸ್ ಪ್ರಕರಣಗಳು ಕಡಿಮೆಯಾಗಿರುವ ಹಿನ್ನಲೆಯಲ್ಲಿ ಬಿಹಾರದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕರೋನಾ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ.
ಶುಲ್ಕ ಪಾವತಿಸಲು ಸಾಧ್ಯವಿಲ್ಲ ಎಂದು ಪೋಷಕರು. ಇನ್ನೊಂದೆಡೆ ಇದೇ ಕೋವಿಡ್ ಮತ್ತು ಲಾಕ್ಡೌನ್ ನಡುವೆಯೂ ಶಾಲೆ ನಿರ್ವಹಣೆ ಮಾಡಬೇಕಿರುವುದರಿಂದ ಶುಲ್ಕ ಪಾವತಿ ಅನಿವಾರ್ಯ ಎಂದು ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳು ವಾದ ಮಾಡುತ್ತಿದ್ದವು.
ಕಳೆದ ವಾರವೇ ಜನವರಿ 1ರಿಂದ ಶಾಲಾ-ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಿತ್ತು. ಆದರೆ ಈ ನಡುವೆ ಮ್ಯೂಟಂಟ್ ಕೊರೋನಾ ವೈರಸ್ ಪತ್ತೆಯಾದ ಹಿನ್ನಲೆಯಲ್ಲಿ ಮತ್ತೆ ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕಾಯಿತು.
ಇಡೀ ಜಗತ್ತನ್ನೇ ತತ್ತರಗೊಳಿಸಿರುವ ಕೊರೊನಾವೈರಸ್ನಿಂದಾಗಿ 2020 ರಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಆದಾಗ್ಯೂ ಅನೇಕ ರಾಜ್ಯಗಳು ಹೊಸ ವರ್ಷದಲ್ಲಿ ಶಾಲಾ-ಕಾಲೇಜುಗಳನ್ನು ತೆರೆಯಲು ಸಿದ್ಧತೆ ನಡೆಸಿವೆ.
ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕೇಬಲ್ ಮೂಲಕ ಹೈ ಸ್ಪೀಡ್ ಇಂಟರ್ನೆಟ್ ಸೌಲಭ್ಯ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಭಾರತ್ ನೆಟ್ ಸಹಯೋಗದಲ್ಲಿ ಈ ಕೆಲಸ ಆಗಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ತಾಂತ್ರಿಕ ಸಲಹಾ ಸಮಿತಿಯು ಜನವರಿ 1ರಿಂದ 10 (SSLC) ಮತ್ತು 12ನೇ (II PUC) ತರಗತಿಗಳನ್ನು ಆರಂಭಿಸುವುದರ ಜೊತೆಗೆ ಇದರ ಅನುಭವವನ್ನು ಆಧರಿಸಿ ಜನವರಿ 15ರಿಂದ 11ನೇ ತರಗತಿ (I PUC) ಯನ್ನೂ ಆರಂಭಿಸಬಹುದೆಂದು ಹೇಳಿದೆ. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದೆ.
ತಾಂತ್ರಿಕ ಸಲಹಾ ಸಮಿತಿ ಕೊಟ್ಟ ವರದಿ ಹಾಗೂ ತಜ್ಞರು ಕೊಟ್ಟ ಸಲಹೆ ಮೇರೆಗೆ ಜನವರಿ 1ರಿಂದ ಮೊದಲ ಹಂತದಲ್ಲಿ 10 ಮತ್ತು 12ನೇ ತರಗತಿಗಳು ಹಾಗೂ ಎರಡನೇ ಹಂತದಲ್ಲಿ ಹಂತದಲ್ಲಿ 9 ಮತ್ತು 11ನೇ ತರಗತಿಗಳನ್ನು ಆರಂಭಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ನಾಳಿನ ಸಭೆಯಲ್ಲಿ ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ, ಗೃಹ ಇಲಾಖೆಗಳಿಂದ ಹಾಗೂ ಶಾಲೆಗಳನ್ನು ಆರಂಭಿಸುವ ವಿಷಯಕ್ಕೆ ಸಂಬಂಧಿಸಿದಂತೆ ರಚಿಸಿರುವ ತಾಂತ್ರಿಕ ಸಮಿತಿಯ ಸಲಹೆಗಳನ್ನು ಪರಿಶೀಲಿಸಲಾಗುತ್ತದೆ.
ಶಾಲೆಗಳನ್ನು ಆರಂಭಿಸುವ ವಿಷಯಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಮಿತಿಯ ಸಲಹೆ ಮೇರೆಗೆ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಪತ್ರ ಬರೆದಿದ್ದು ಆರೋಗ್ಯ ಇಲಾಖೆ ವತಿಯಿಂದ ಶಾಲೆಗಳನ್ನು ಆರಂಭಿಸುವ ಬಗ್ಗೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.
ಶಾಲಾ-ಕಾಲೇಜುಗಳ ಆರಂಭ ಮತ್ತು SSLC ಪರೀಕ್ಷೆ ನಡೆಸುವುದು ಆಯಾ ರಾಜ್ಯಗಳಿಗೆ ಬಿಟ್ಟಿದ್ದು ಎಂದು ಕೇಂದ್ರ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಂಡಿತ್ತು. ಜಿಜ್ಞಾಸೆಗೆ ಸಿಲುಕಿದ್ದ ರಾಜ್ಯ ಸರ್ಕಾರ ಪೋಷಕರ ತೀವ್ರ ವಿರೋಧದ ನಡುವೆಯೂ SSLC ಪರೀಕ್ಷೆ ನಡೆಸಿತ್ತು. ಈಗ ಮತ್ತೆ ಶಾಲಾ-ಕಾಲೇಜುಗಳ ಆರಂಭಿಸುವ ಬಗ್ಗೆ ಅದರಲ್ಲೂ SSLC ತರಗತಿಗಳನ್ನು ಆರಂಭಿಸುವ ಬಗ್ಗೆ 'ಏನು ಮಾಡಬೇಕೆಂದು' ತಿಳಿಯದೆ ಕಂಗಾಲಾಗಿದೆ.
ಸಭೆಯಲ್ಲಿ ಬಹಳ ಪ್ರಮುಖವಾಗಿ ರಾಜ್ಯ ಸರ್ಕಾರಕ್ಕೆ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯು ನೀಡಿದ್ದ 'ಡಿಸೆಂಬರ್ ತಿಂಗಳಲ್ಲಿ ಶಾಲೆಗಳನ್ನು (Schools) ತೆರೆಯುವುದು ಕೂಡ ಸೂಕ್ತವಲ್ಲ" ಎಂಬ ಶಿಫಾರಸ್ಸಿನ ಬಗ್ಗೆ ಸಮಾಲೋಚನೆ ನಡೆಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.