ಅನೇಕ ಟ್ವಿಟ್ಟರ್ ಬಳಕೆದಾರರ ಸಂಭ್ರಮಕ್ಕೆ ತಕ್ಕಂತೆ, ಸೂಪರ್ ಸ್ಟಾರ್ ಶಾರುಖ್ ಖಾನ್ ಬುಧವಾರ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯಿಂದ ತಮ್ಮ ಅಭಿಮಾನಿಗಳೊಂದಿಗೆ ಚಾಟ್ ಮಾಡಲು ಸ್ವಲ್ಪ ಸಮಯವನ್ನು ತೆಗೆದುಕೊಂಡರು. ಕೆಲವು ಗಂಟೆಗಳ ಹಿಂದೆ, ಅವರು '#AskSRK' ಅಧಿವೇಶನದ ಬಗ್ಗೆ ಟ್ವೀಟ್ ಮಾಡಿದ್ದಾರೆ ಮತ್ತು ಅವರು ಸುಮಾರು 20 ಪ್ರಶ್ನೆಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದರು.
ಅಮೆಜಾನ್ ಜಾಗತಿಕ ಸಿಇಒ ಜೆಫ್ ಬೆಜೋಸ್ ಅವರೊಂದಿಗಿನ ಸಂಭಾಷಣೆಯ ಸಂದರ್ಭದಲ್ಲಿ ಶಾರುಖ್ ಖಾನ್ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ನಿದ್ದೆ ಮಾಡುವುದರಿಂದ ಸಮಯ ವ್ಯರ್ಥ ಎಂದು ನಾನು ಭಾವಿಸುತ್ತೇನೆ. ಅದಕ್ಕಾಗಿಯೇ ನಾನು ಹೆಚ್ಚು ನಿದ್ರೆ ಮಾಡುವುದನ್ನು ಇಷ್ಟಪಡುವುದಿಲ್ಲ ಎಂದು ಅವರು ಹಂಚಿಕೊಂಡಿದ್ದಾರೆ.
'ದಿ ಗ್ರೇ ಪಾರ್ಟ್ ಆಫ್ ಬ್ಲೂ' (The Grey Part of Blue) ಕಿರುಚಿತ್ರ ಬಿಡುಗಡೆಯಾಗಿದೆ. ಇದರೊಂದಿಗೆ ಶಾರುಖ್ ಅವರ ಲಾಡೋ ಸುಹಾನಾ ಖಾನ್(Suhana Khan) ನಟನಾ ಜಗತ್ತಿನಲ್ಲಿ ಪ್ರವೇಶಿಸಿದ್ದಾರೆ ...
ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಅವರಿಗೆ ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಿದ್ದು, ಮಹಾತ್ಮ ಗಾಂಧಿಯವರ ಸಂದೇಶವನ್ನು ಕಾರ್ಯರೂಪಕ್ಕೆ ತರುವಲ್ಲಿ ಪ್ರತಿಯೊಬ್ಬ ನಾಗರಿಕರ 'ದಿಲ್ ಸೆ' ಭಾಗವಹಿಸುವಿಕೆಯ ಮಹತ್ವವನ್ನು ಒತ್ತಿ ಹೇಳಿದ್ದಾರೆ.
ಬಾಲಿವುಡ್ನಲ್ಲಿ ಶಾರುಖ್ ಖಾನ್ 27 ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಶಾರುಖ್ ಖಾನ್ ಅವರು ಮೊದಲ ಬಾರಿಗೆ 1992 ರ ದಿವಾನ ಚಿತ್ರದಲ್ಲಿ ಅಭಿನಯಿಸುವ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ್ದರು.
ಅಭಿಮಾನಿಗಳು ಶಾರುಖ್ ಖಾನ್ ರನ್ನು ಮತ್ತೆ ಬೆಳ್ಳಿ ಪರದೆ ಮೇಲೆ ನೋಡಲು ಕುತೂಹಲದಿಂದ ಕಾಯುತ್ತಿದ್ದಾರೆ. ಆದರೆ ಇದಕ್ಕೆ ಅವರು ಇನ್ನು ಸ್ವಲ್ಪ ಕಾಯಬೇಕಾಗುತ್ತದೆ. ಏಕೆಂದರೆ ಈಗ ಈ ವಿಷಯವನ್ನು ಸ್ವತ ಬಾಲಿವುಡ್ ಬಾದಷಾ ಸ್ಪಷ್ಟ ಪಡಿಸಿದ್ದಾರೆ.
ಶುಕ್ರವಾರ ರಾತ್ರಿ ನಡೆದ ಐಪಿಲ್ ಪಂದ್ಯದಲ್ಲಿ ಕೊಲ್ಕತ್ತಾ ತಂಡವು ಡೆಲ್ಲಿ ತಂಡದ ವಿರುದ್ಧ ಸೋಲನ್ನು ಅನುಭವಿಸಿದೆ.ಈ ಸಂದರ್ಭದಲ್ಲಿ ಶಾರುಖ್ ಖಾನ್ ಅವರು ಸೌರವ್ ಗಂಗೂಲಿ ಗೆ ವಿಶೇಷ ಟ್ವಿಟ್ಟರ್ ಮೂಲಕ ವಿಶೇಷ ಸಂದೇಶ ರವಾನಿಸಿದ್ದಾರೆ.
ಶಾರುಖ್ ಖಾನನ್ನು ಫೌಜಿ ಮೂಲಕ ಕಿರುತೆರೆಗೆ ಪರಿಚಯಿಸಿದ ನಿರ್ದೇಶಕ ಕರ್ನಲ್ ರಾಜ್ ಕಪೂರ್ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 87 ವರ್ಷ ವಯಸ್ಸಾಗಿತ್ತು.
ತಮ್ಮ 53ನೇ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದ ಬಾಲಿವುಡ್ ಬಾದಷಾ ಶಾರುಖ್ ಖಾನ್ ಗೆ ಪೊಲೀಸರು ತಡೆಯೊಡ್ಡಿದ ಘಟನೆ ನಡೆದಿದೆ. ಝೀರೋ ಚಿತ್ರದ ಟ್ರೈಲರ್ ಬಿಡುಗಡೆ ಸಂತಸದಲ್ಲಿರುವ ಕಿಂಗ್ ಖಾನ್ ಬಾಂದ್ರಾದಲ್ಲಿರುವ ನೈಟ್ ಕ್ಲಬ್ 'ಅರ್ಥ'ನಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ತಡೆಯೊಡ್ಡಿದ್ದಾರೆ.
ಶಾರುಖ್ ಖಾನ್ ಬೆಳ್ಳಿ ತೆರೆಯ ಮೇಲೆ ಕೋಟ್ಯಾಂತರ ಅಭಿಮಾನಿಗಳಿಗೆ ತಮ್ಮ ಅಭಿನಯದಿಂದಲೇ ಮೋಡಿ ಮಾಡಿದ್ದಾರೆ.ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ರಾಜಕೀಯಕ್ಕೆ ಪ್ರವೇಶಿಸುವ ಬಗ್ಗೆ ಕೇಳಿದಾಗ ತಮಗೆ ಅಷ್ಟು ರಾಜಕೀಯ ಜ್ಞಾನವಿಲ್ಲ ಅದಕ್ಕೆ ವಿಶೇಷ ಜ್ಞಾನದ ಅವಶ್ಯಕತೆ ಇದೆ ಎಂದು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.