CCTV Footage: ತೀರ್ಥಹಳ್ಳಿಯ ಮುಖ್ಯ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ನಿಂತಿತ್ತು. ಡ್ರೈವರ್ ಬಸ್ ನಿಲ್ಲಿಸಿ ಕೆಳಕ್ಕಿಳಿದಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ಬಸ್ ಇದ್ದಕ್ಕಿದ್ದಂತೆ ಮುಂದಕ್ಕೆ ಚಲಿಸಿದೆ.
ಮುಂಜಾನೆ ತಾಳಿಕಟ್ಟಿಸಿಕೊಂಡ ನವವಿವಾಹಿತ ಪರೀಕ್ಷಾ ಕೊಠಡಿಗೆ ಬಂದು ಡಿಗ್ರಿ ಪರೀಕ್ಷೆ ಬರೆಯುವ ಮೂಲಕ ಅಚ್ಚರಿ ಮೂಡಿಸಿದ್ದಾಳೆ. ಶಿವಮೊಗ್ಗ ಭರ್ಮಪ್ಪ ನಗರದ ಸತ್ಯವತಿ ಎಂಬ ಯುವತಿ ತನ್ನ ಪ್ರಿಯಕರನೊಂದಿಗೆ ಬೈಕ್ ನಲ್ಲಿ ಪರೀಕ್ಷಾ ಕೊಠಡಿಗೆ ಬಂದು ಪರೀಕ್ಷೆ ಬರೆದಿದ್ದಾಳೆ.
ಬಿಜೆಪಿಗೆ ಉತ್ತರ ಕರ್ನಾಟಕದ ಜನರ ಬಗ್ಗೆ, ದಲಿತರ ಬಗ್ಗೆ, ಕಪ್ಪುವರ್ಣದವರ ಬಗ್ಗೆ ನಿಜಕ್ಕೂ ಗೌರವ ಇದ್ದಿದ್ದೇ ಆದರೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆಯವರನ್ನು, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರನ್ನು ಹಾಗೂ ಉತ್ತರ ಕರ್ನಾಟಕದ ಜನತೆಯನ್ನು ಅತ್ಯಂತ ಕೀಳು ಅಭಿರುಚಿಯ ಮಾತುಗಳಿಂದ ಅವಮಾನಿಸಿದ ಆರಗ ಜ್ಞಾನೇಂದ್ರ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ಶೃಂಗೇರಿ ಕೊಪ್ಪ ತೀರ್ಥಹಳ್ಳಿ ಭಾಗದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು ತುಂಗಾ ಡ್ಯಾಂ ನಿಂದ ನೀರನ್ನು ಹೊರಕ್ಕೆ ಬಿಡಲಾಗಿದೆ. ಬತ್ತಿ ಹೋಗಿದ್ದ ತುಂಗಾ ನದಿ ತುಂಬಿ ಹರಿಯುತ್ತಿದೆ. ಶರಾವತಿ ಕಣಿವೆ ಯೋಜನಾ ಪ್ರದೇಶದಲ್ಲೂ ವ್ಯಾಪಕವಾಗಿ ಮಳೆ ಸುರಿಯುತ್ತಿರುವುದರಿಂದ ಹೊಳ ಹರಿವು ಹೆಚ್ಚ ತೊಡಗಿದೆ. ಮಳೆಯಿಂದಾಗಿ ಜೋಗ ಜಲಪಾತದಜ ಸೌಂದರ್ಯ ಕಳೆಕಟ್ಟಿದೆ.
ಶಿವಮೊಗ್ಗ: ಶಿವಮೊಗ್ಗದ ತುಂಗಾ ತೀರದಲ್ಲಿ ನಡೆದ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಪೂರಕ ಚಾರ್ಜ್ ಶೀಟ್ ನ್ನು ಸಲ್ಲಿಸಿದ್ದಾರೆ.
ಐಸಿಸ್ ನೊಂದಿಗೆ ನಂಟು ಹೊಂದಿದ್ದ ಮೊಹಮ್ಮದ್ ಶಾರಿಕ್, ಮಾಜ್ ಮುನೀರ್ ಅಹ್ಮದ್, ಸೈಯದ್ ಯಾಸೀನ್, ರಿಶಾನ್ ತಾಜುದ್ದೀನ್ ಶೇಕ್, ಹುಜೈರ್ ಪರ್ಹಾನ್ ಬೇಗ್, ಮಾಜೀನ್ ಅಬ್ದುಲ್ ರೆಹಮಾನ್, ನದೀಂ ಅಹ್ಮದ್, ಜಬೀವುಲ್ಲಾ, ಮತ್ತು ನದೀಂ ಪೈಜಲ್ ಎನ್ನುವ ಒಂಭತ್ತು ಮಂದಿ ಶಂಕಿತರ ವಿರುದ್ಧ ಚಾರ್ಜ್ ಶೀಟ್ ನ್ನು ಸಲ್ಲಿಸಲಾಗಿದೆ.ಈ ಒಂಬತ್ತು ಮಂದಿ ಶಂಕಿತರ ವಿರುದ್ಧ ಯುಎಪಿಎ, ಐಪಿಸಿ, ಕೆಪಿ ಆಕ್ಟ್ ಅಡಿಯಲ್ಲಿ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ.
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೇರೆ ಪ್ರದೇಶಗಳಿಗೆ ವಿಮಾನ ಸಂಚಾರ ಕುರಿತಂತೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಂಸದ ಬಿ.ವೈ. ವಿಜಯೆಂದ್ರ, ಶಿವಮೊಗ್ಗದಿಂದ ಇನ್ನೂ ನಾಲ್ಕು ಮಾರ್ಗಗಳಲ್ಲಿ ವಿಮಾನ ಸಂಚಾರಕ್ಕೆ ಉಡಾನ್ ಯೋಜನೆಯಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ 5,800 ರೂ. ಮೌಲ್ಯದ 227 ಗ್ರಾಂ ಒಣ ಗಾಂಜಾ, 30 ಸಾವಿರ ರೂ. ಮೌಲ್ಯದ 1.53 ಕೆಜಿ ಹಸಿ ಗಾಂಜಾ, 10 ಗ್ರಾಂ ಚರಸ್, ಗಾಂಜಾ ಬೀಜ, ಕೆನಾಬಿಸ್ ಎಣ್ಣೆ, ಗಾಂಜಾ ಪುಡಿ ಮಾಡಲು ಬಳಸುವ 2 ಡಬ್ಬಿಗಳು, ಎಲೆಕ್ಟ್ರಾನಿಕ್ ತೂಕದ ಯಂತ್ರ, ಫ್ಯಾನ್, 6 ಟೇಬಲ್, ರೋಲಿಂಗ್ ಪೇಪರ್, 2 ಸ್ಟೆಬಿಲೈಸರ್, LED ದೀಪ, ಹುಕ್ಕಾ ಕೊಳವೆ ಹಾಗೂ 19 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ.
Kuvempu University: ಸರ್ಕಾರದ ಲೆಟರ್ ಹೆಡ್ ನ್ನು ದುರ್ಬಳಿಕೆ ಮಾಡಿಕೊಳ್ಳುವುದಿಲ್ಲ. ಆದರೆ ಇಲ್ಲೊಂದು ವಿಶ್ವವಿದ್ಯಾನಿಲಯದ ಕುಲಪತಿ ಸರ್ಕಾರದ ಲೆಟರ್ ಹೆಡ್ ನಲ್ಲಿ ಆಹ್ವಾನಿಸಲು ಸುತ್ತೋಲೆ ಹೊರಡಿಸುವ ಮೂಲಕ ಎಡವಟ್ಟು ಮಾಡಿದ್ದಾರೆ.
ನಿನ್ನೆ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಕಚೇರಿ ಬಳಿ ಆಟೋದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ, ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದಿದ್ದ ಈಶ್ವರಪ್ಪನವರ ಬಳಿ ತನ್ನ ಆಟೋ ಜಖಂ ಮಾಡಿದ್ದು ಹಾಗೂ ತನಗೆ ಹಲ್ಲೆ ಮಾಡಿದ್ದರ ಬಗ್ಗೆ ಅಳಲು ತೋಡಿಕೊಂಡಿದ್ದ.
Karnataka Assembly Election 2023: ಬರ್ತಿದೆ… ಬರ್ತಿದೆ.. ಬರ್ತಿದೆ… ಬರ್ತಿಲ್ಲ… ಬರ್ತಿಲ್ಲ ಎನ್ನುವ ಟ್ರೋಲ್ ಒಂದು ಹರಿದಾಡುವಷ್ಟರ ಮಟ್ಟಿಗೆ ಶಿವಮೊಗ್ಗ ಸಿಟಿ ಕ್ಷೇತ್ರ ಕುತೂಹಲ ಮೂಡಿಸಿದೆ. ಬರೋಬ್ಬರಿ 222 ಕ್ಷೇತ್ರಗಳಿಗೂ ಅಳೆದು ಮೊಗೆದು ಟಿಕೆಟ್ ಕೊಟ್ಟಿರುವ ಬಿಜೆಪಿಗೆ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲವೇ ? ಈ ಪ್ರಶ್ನೆಗೆ ಬಿಜೆಪಿ ಮೂಲಗಳಲ್ಲಿ ಬೇರೆಯದ್ದೆ ವಿಚಾರ ಕೇಳಿಬರುತ್ತಿದೆ.
Karnataka Assembly Elections 2023: ಏಪ್ರಿಲ್ 1ರಂದು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು 10 ಲಕ್ಷ ರೂ. ಮೌಲ್ಯದ ಅಕ್ಕಿ, ಬೇಳೆ, ಎಣ್ಣೆ, ಶಾವಿಗೆ, ಸಕ್ಕರೆ ಮತ್ತು ಇತರೆ ವಸ್ತುಗಳಿದ್ದ 500 ಬ್ಯಾಗ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇನ್ನೂ ಎಷ್ಟೊತ್ತಾದರೂ ಕಾಳಿಂಗ ತನ್ನ ಜಾಗ ಕದಲಿಸದ ಹಿನ್ನೆಲೆಯಲ್ಲಿ ಸ್ಥಳೀಯರು ಆಗುಂಬೆ ಮಳೆಕಾಡು ಸಂಶೋಧನಾಲಯದ (arrs) ಅಜಯಗಿರಿಯವರಿಗೆ ಫೋನಾಯಿಸಿದ್ದಾರೆ. ವಿಷಯ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿಯ ಜೊತೆಗೆ ಸ್ಥಳಕ್ಕೆ ಬಂದ ಅವರು, ಕೆಲ ಹೊತ್ತು ಕಾರ್ಯಾಚರಣೆ ನಡೆಸಿ ಕಾಳಿಂಗವನ್ನು ಹಿಡಿದರು.
ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಮುಸ್ಲಿಂ ಯುವಕ ಆಜಾನ್ ಕೂಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಆಜಾನ್ ಹಾಗು ಅಲ್ಲಾಹು ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಅವಹೇಳನ ಆರೋಪ ಹಿನ್ನೆಲೆ, ಜಿಲ್ಲಾಧಿಕಾರಿ ಕಚೇರಿ ಮೇಲೆ ಹತ್ತಿ ಆಜಾನ್ ಕೂಗಿ ವಿರೋಧ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.