ಟಿಕೆಟ್ ಆಕಾಂಕ್ಷಿಗಳು ಶಿಕ್ಷಕ ಸದಸ್ಯರು ಮತ್ತು ಪದವೀಧರ ಸದಸ್ಯರ ಜತೆ ನಿರಂತರ ಸಂಪರ್ಕದಲ್ಲಿದ್ದು ಅವರ ಮಾತು ಮತ್ತು ಬೇಡಿಕೆಗಳನ್ನು ಕೇಳಿಸಿಕೊಂಡು ನಮಗೆ ತಿಳಿಸಿ. ನಾಡಿನ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದಕ್ಕಾಗಿ ಪಕ್ಷ ಮತ್ತು ಸರ್ಕಾರ ಶ್ರಮಿಸಲಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಕಾಂಗ್ರೆಸ್ ಪಕ್ಷದ ನಾಯಕ ಮತ್ತು ದೇಶದ ಭರವಸೆಯ ಆಶಾಕಿರಣ ರಾಹುಲ್ ಗಾಂಧಿಯವರ ಜೊತೆ ಭಾರತ್ ಜೋಡೊ ಎಂಬ ಐತಿಹಾಸಿಕ ಪಾದಯಾತ್ರೆ ಶುರುವಾಗಿ ಇಂದಿಗೆ ಒಂದು ವರ್ಷ.
ದ್ವೇಷ ಮಾರಾಟದ ಸಂತೆಯಲ್ಲಿ ಪ್ರೀತಿ ಹಂಚುವ ಅಂಗಡಿ ತೆರೆಯುತ್ತೇನೆ ಎಂಬ ಸಂದೇಶದೊಂದಿಗೆ ಕನ್ಯಾಕುಮಾರಿಯಿಂದ ರಾಹುಲ್ ಗಾಂಧಿಯವರು ಶುರುಮಾಡಿದ್ದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಅವಕಾಶ ನನಗೂ ಒದಗಿಬಂದಿರುವುದು ನನ್ನ ಬದುಕಿನ ಭಾಗ್ಯ.
CM Siddaramaiah: ದೌರ್ಜನ್ಯ ತಡೆಗೆ ಪೊಲೀಸು-ಕಾನೂನು-ಸಮಾಜ ಕಲ್ಯಾಣ ಮತ್ತು ಕಂದಾಯ ಇಲಾಖೆ ನಡುವೆ ಸಮನ್ವಯ ಇರಲಿ. ಕರ್ನಾಟಕ ಪ್ರಜ್ಞಾವಂತರ ನಾಡು: ಜಾತಿ ದೌರ್ಜನ್ಯಗಳಿಗೆ ಕಡಿವಾಣ ಅತ್ಯಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
Hindu Rashtra: ಹಿಂದೂ ಧರ್ಮದ ಅಸ್ತಿತ್ವ, ಮೂಲದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಉದ್ಧಟತನದ ಹೇಳಿಕೆ ಅತ್ಯಂತ ಖಂಡನೀಯ ಮಾತ್ರವಲ್ಲ, ಅವರ ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.
Kaveri River water dispute: KRS ಡ್ಯಾಂನಲ್ಲಿ 5 ಟಿಎಂಸಿ ನೀರು ಡೆಡ್ ಸ್ಟೋರೇಜ್ ಇದ್ದು, ಇನ್ನುಳಿದ 12 ಟಿಎಂಸಿ ನೀರು ಮಾತ್ರ ಕುಡಿಯಲು ಬಳಕೆಗೆ ಯೋಗ್ಯವಾಗಿರಲಿದೆ. ಕನಿಷ್ಠ ಮಟ್ಟದಲ್ಲಿರುವ ನೀರನ್ನು ತಮಿಳುನಾಡಿಗೆ ಹರಿಬಿಟ್ಟರೆ ಬೆಂಗಳೂರಿಗೆ ಕಾವೇರಿ ನೀರಿನ ಅಭಾವ ಫಿಕ್ಸ್ ಆಗಲಿದೆ.
Ksheera Bhagya: ಬಡವರು, ಮಧ್ಯಮ ವರ್ಗದವರ ಬದುಕಿಗೆ ಅನುಕೂಲ ಆಗುವ ಕಾರ್ಯಕ್ರಮವನ್ನು ನಾವು ರೂಪಿಸಿದರೆ ಬಿಜೆಪಿ ಯವರು ಅಡ್ಡಗಾಲು ಹಾಕಿ ಕಾರ್ಯಕ್ರಮ ವಿಫಲಗೊಳಿಸಲು ಯತ್ನಿಸಿದರು. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಬಡವರ ಪರ ಕಾರ್ಯಕ್ರಮ ನೀಡಿದ್ದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಅಪ್ಪಟ ಸುಳ್ಳು ಹೇಳಿದರು ಎಂದು ಟೀಕಿಸಿದರು.
ಈಗಾಗಲೇ ಕಲುಷಿತ ನೀರಿಗೆ ಸಾಕಷ್ಟು ಜೀವಗಳು ಬಲಿಯಾಗಿವೆ, ಹೀಗಿರುವಾಗಲೂ ಎಲ್ಲಾ ಇಲಾಖೆಯ ಒಳಗೂ ಮೂಗು ತೂರಿಸುವ ನೀವು ಜಿಲ್ಲಾ ಸಿಇಒಗಳಿಗೆ ಸೂಚನೆ ನೀಡಿ ಕೈ ತೊಳೆದುಕೊಂಡರೆ ಸಾಕೇ? ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಮುಂದಿನ ಚುನಾವಣೆಯಲ್ಲಿ ಸೋಲನ್ನು ನೋಡುತ್ತಿರುವುದನ್ನು ಈ ಸಮಯದಲ್ಲಿ ಗಮನಿಸಬಹುದು. ನಮ್ಮ ದೇಶದ ನಗದಿನ ಮೇಲೆ ಇಂಡಿಯಾ ಅಂತಾ ಇದೆ. ಇದನ್ನು ಬದಲಿಸಲು ಹೊರಟಿದ್ದಾರೆ’ ಎಂದು ಡಿಕೆಶಿ ಕುಟುಕಿದ್ದಾರೆ.
ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳನ್ನು ಪರಿಹರಿಸದೆ ಜನರ ಗಮನ ಬೇರೆಡೆ ಸೆಳೆದು ಕಣ್ಕಟ್ಟು ಮಾಡುವುದು, ಮತ್ತೊಬ್ಬರ ಸಾಧನೆಯನ್ನು ತನ್ನದೆಂದು ಹೇಳಿಕೊಂಡು ತಿರುಗಾಡುವುದು, ಕೋಮುದ್ವೇಷದ ವಿಷಬೀಜ ಬಿತ್ತಿ ನೀರೆರೆಯುವುದು ಮತ್ತು ದಿಟ್ಟ ಪ್ರಶ್ನೆಗಳು ಎದುರಾದಾಗ ಜಾಗ ಖಾಲಿ ಮಾಡುವುದು. ಇವು ಸಿದ್ದರಾಮಯ್ಯರವರ ಐದು ಗ್ಯಾರಂಟಿ ಗುಣಗಳು ಎಂದು ಬಿಜೆಪಿ ಟೀಕಿಸಿದೆ.
Kaveri River water dispute: ಭತ್ತ ನಾಟಿ ಮಾಡಿರುವ ಕಾವೇರಿ ಕೊಳ್ಳದ ರೈತರು ಒಣಗುತ್ತಿರುವ ಬೆಳೆ ನೋಡಿ ಕಣ್ಣೀರು ಸುರಿಸುತ್ತಿದ್ದಾರೆ. ಇದಲ್ಲದೆ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಗೇ 30 ಟಿಎಂಸಿ ನೀರು ಬೇಕು. ಈ ಯಾವ ಅಂಶಗಳನ್ನೂ ಕಾಂಗ್ರೆಸ್ ಸರ್ಕಾರ ಸಮರ್ಥವಾಗಿ ನ್ಯಾಯಾಧಿಕರಣಕ್ಕೆ ಅರಿಕೆ ಮಾಡುವಲ್ಲಿ ಸೋತು ಕನ್ನಡಿಗರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಬಿಜೆಪಿ ಕುಟುಕಿದೆ.
ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನವಾಗಿದೆ. ತಂತ್ರಜ್ಞಾನದ ಅಭಿವೃದ್ಧಿ ಎಲ್ಲರನ್ನು ಒಳಗೊಂಡು ಎಲ್ಲರಿಗೂ ದೊರೆಯುವಂತೆ ಮಾಡುವುದು ನಮ್ಮ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಮ್ಮ ನೆಚ್ಚಿನ ನಾಯಕರಾದ ರಾಹುಲ್ ಗಾಂದಿಯವರ ಕ್ರಿಯಾತ್ಮಕ ಸಲಹೆಗಳು ವಿರೋಧಪಕ್ಷಗಳ ಸಂಘಟನೆಯ ಪ್ರಯತ್ನಕ್ಕೆ ಬಲ ತುಂಬಿದೆ. ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನಿಂದಾಗಿ ಕೇಂದ್ರದಲ್ಲಿನ ಭ್ರಷ್ಟ ಬಿಜೆಪಿ ಸರ್ಕಾರ ಭೀತಿಗೊಳಗಾಗಿರುವುದು ಅದರ ಇತ್ತೀಚಿನ ನಡವಳಿಕೆಯಿಂದ ಸ್ಪಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಮಾಲೀಕರಿಗೆ ತೊಂದರೆಯಾಗಿರುವುದು ನನ್ನ ಗಮನಕ್ಕೂ ಬಂದಿದೆ. ನಾನು ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರನ್ನು ಭೇಟಿಯಾಗಿ ಇದಕ್ಕೆ ಪರಿಹಾರ ಕಂಡು ಹಿಡಿಯುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.