Lok Sabha Election 2024: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ. ಬಿಜೆಪಿಯವರು 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿಕೊಳ್ಳುತ್ತಿದ್ದು, ಜೆಡಿಎಸ್ ಕೂಡ ಅದಕ್ಕೆ ಧ್ವನಿಗೂಡಿಸುತ್ತಿದೆ.
ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆ ಶಾಸಕರು. ಅವರು ಅಲ್ಲೇ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಬಹುದಿತ್ತು. ಆದರೆ ಸೋಲಿನ ಭಯದಿಂದ ಇಲ್ಲಿಗೆ ಬಂದು NDA ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇಲ್ಲೂ ಖಚಿತವಾಗಿ ಸೋಲಿಸಲು ಮಂಡ್ಯ ಜಿಲ್ಲೆಯ ಜನತೆ ನಿರ್ಧರಿಸಿದ್ದಾರೆ. ಹೀಗಾಗಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಸ್ಪಷ್ಟವಾಗಿ ನುಡಿದರು.
ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಇನ್ನು ಒಂದು ವರ್ಷದಲ್ಲಿ ಶಾಸಕರಿಗೆ ಸಂಬಳ ಸಿಗದಂತಹ ಪರಿಸ್ಥಿರಿ ಬರುತ್ತದೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ನವರು ಬೇರೆ ರೀತಿಯಲ್ಲಿ ಮಾತನಾಡಲು ಶುರು ಮಾಡುತ್ತಾರೆ ಅಂತಾ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
Loksabha election 2024: ಡಾ.ಬಿ.ಆರ್.ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂಬುದು ಪ್ರಧಾನಿ ಮೋದಿಯವರ ಮನಸಿನ ಮಾತಾಗಿದ್ದರೆ ಸಂವಿಧಾನ ಬದಲಿಸುತ್ತೇವೆಂದ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Lok Sabha Elections 2024: ಬಿಜೆಪಿಗೆ ಮೈಸೂರು-ಕೊಡಗಿನ ಜನತೆ ಅವಕಾಶ ಕೊಟ್ಟಾಗ ಬಿಜೆಪಿ ಸಂಸದರು, ಶಾಸಕರು, ಮುಖ್ಯಮಂತ್ರಿಗಳು, ಪ್ರಧಾನಮಂತ್ರಿಗಳು ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಲಿಲ್ಲ. ಈಗ ಕೇವಲ ಅಭ್ಯರ್ಥಿಯನ್ನು ಬದಲಾಯಿಸಿ ಮತ ಕೇಳುತ್ತಿದ್ದಾರೆ. ಇದು ಹೊಣೆಗೇಡಿತನ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ʼಪ್ರಧಾನಿ ಮೋದಿ ಅವರಾಗಲೀ, ಬಿಜೆಪಿಯವರಾಗಲೀ ಇವತ್ತಿನವರೆಗೆ ಯುವಕರು, ಮಹಿಳೆಯರು, ಶೂದ್ರರು, ದಲಿತರು, ಶ್ರಮಿಕರು, ದುಡಿಯುವವರ ಪರವಾಗಿ ಒಂದೇ ಒಂದು ಸರಿಯಾದ ಕಾರ್ಯಕ್ರಮ ಜಾರಿ ಮಾಡಲಿಲ್ಲ. ಇದೇನಾ ಅಚ್ಛೆ ದಿನ್? ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ ಕಾಳು, ಅಡುಗೆ ಎಣ್ಣೆ ಬೆಲೆ ಆಕಾಶಕ್ಕೆ ಏರಿಸಿದ್ದೀರಲ್ಲಾ ಮೋದಿಯವರೇ? ಇದಾ ನಿಮ್ಮ ಅಭಿವೃದ್ಧಿ?ʼ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Unemployment Rate In India: ಕೇಂದ್ರ ಸರ್ಕಾರವೇ ಪ್ರತಿ ೩ ತಿಂಗಳಿಗೊಮ್ಮೆ ನಡೆಸುವ ಪೀರಿಯಾಡಿಕ್ ಲೇಬರ್ ಫೋರ್ಸ್ ಸರ್ವೇ (PLFS) ಪ್ರಕಾರ, 2019ರಿಂದ 2022ರವರೆಗಿನ ಅವಧಿಯಲ್ಲಿ ದೇಶದ ನಿರುದ್ಯೋಗ ಪ್ರಮಾಣ 22.9%ಕ್ಕೆ ಏರಿಕೆಯಾಗಿದೆ. ಹೆಚ್ಚಾಗಿರುವುದು ಉದ್ಯೋಗಗಳ ಸಂಖ್ಯೆಯೇ? ಇಲ್ಲವೇ ನೀವು ಹೇಳುತ್ತಿರುವ ಸುಳ್ಳುಗಳ ಸಂಖ್ಯೆಯೇ ಪ್ರಧಾನಿಗಳೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Minister Muniyappa: ನಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಾವು ನೀಡಿದ್ದ ಎಲ್ಲಾ 5 ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.
ಮಳವಳ್ಳಿ ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಚಾರಕ್ಕೆ ಹೋದಕಡೆಯಲೆಲ್ಲ ಜನರು ತೋರುತ್ತಿರುವ ಪ್ರೀತಿ, ಅಭಿಮಾನ ನನ್ನ ಗೆಲುವಿನ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು.
Gruha Lakshmi Scheme: 17,500 ರೂ. ಬೆಲೆಯ ಫ್ರಿಡ್ಜ್ ಖರೀದಿಸಿ ಲತಾ ಅವರು ಜನರ ಗಮನ ಸೆಳೆದಿದ್ದಾರೆ. ಯುಗಾದಿ ಹಬ್ಬಕ್ಕೆ ಸಂಗ್ರಹಿಸಿ ಇಟ್ಟಿದ್ದ ಒಟ್ಟು ಹಣದಲ್ಲಿ ಫ್ರಿಡ್ಜ್ ಖರೀದಿಸಿ ಖುಷಿಪಟ್ಟಿದ್ದಾರೆ.
Lok Sabha Election 2024: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು ಹೋದ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.
ಕೇಂದ್ರ ಸರ್ಕಾರ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಯೋಜನೆಗೆ ಅನುಮತಿ ಕೊಡಲಿಲ್ಲ. ಮೋದಿಯವರೂ ಬೆಂಗಳೂರಿನ ಜನತೆಗೆ ಕುಡಿಯುವ ನೀರು ಕೊಡುವ ಯೋಜನೆಗೆ ಬೆಂಬಲ ಘೋಷಿಸುತ್ತಿಲ್ಲ. ಕಪ್ಪುಹಣ ತಂದು ಎಲ್ಲರ ಖಾತೆಗೆ ₹15 ಲಕ್ಷ ಹಾಕ್ತೀವಿ ಅಂದ ಮೋದಿಯವರು 15 ರೂಪಾಯಿಯನ್ನೂ ಹಾಕಿಲ್ಲ. ಮೋದಿಯವರು ಹೇಳಿದ ಯಾವುದನ್ನೂ ಜಾರಿ ಮಾಡಿಲ್ಲ. ಹೀಗಾಗಿ ಅವರ ಮುಖ ನೋಡಿ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ ಬರುತ್ತದಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Lok Sabha Election 2024: ಪ್ರೊ.ರಾಜೀವ್ ಗೌಡ ಸಮರ್ಥ ಸಂಸದ ಆಗುವ, ನಾಡಿನ ಜನತೆಯ ಧ್ವನಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಸೂರ್ಯ ಪೂರ್ವದಲ್ಲಿ ಹುಟ್ಟೋದು ಎಷ್ಟು ಸತ್ಯವೋ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಪ್ರೊ.ರಾಜೀವ್ ಗೌಡ ಗೆಲ್ಲೋದು ಅಷ್ಟೇ ಸತ್ಯವೆಂದು ಸಿಎಂ ಸಿದ್ದರಾಮಯ್ಯನವರು ಭವಿಷ್ಯ ನುಡಿದಿದ್ದಾರೆ.
Lok Sabha Elections 2024: ಉಚಿತ ಬಸ್ ಪ್ರಯಾಣ , ವಿದ್ಯುತ್, ತಿಂಗಳಿಗೆ ೨ ಸಾವಿರ ಹಣ ಸಿಗುತ್ತಿರುವುದರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಅಭಿನಂದನೆಗಳು ಸಲ್ಲಿಸುವುದರ ಜೊತೆಗೆ ಕಾಂಗ್ರೆಸ್ ಬೆಂಬಲಿಸುವ ಭರವಸೆ ನೀಡುತ್ತಿದ್ದಾರೆ ಎಂದು ಸ್ಟಾರ್ ಚಂದ್ರು ಹೇಳಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬರ ಪರಿಹಾರಕ್ಕೂ ಚುನಾವಣೆಗೂ ಏನು ಸಂಬಂಧ? ಈ ಹೇಳಿಕೆ ಮೂಲಕ ರಾಜ್ಯಕ್ಕೆ ಬರ ಪರಿಹಾರ ಬರುವುದು ವಿಳಂಬವಾಗಿದ್ದು, ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ ಅವರಿಗೆ ಧನ್ಯವಾದಗಳು ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
CM Siddaramaiah: ಈಗಲೂ ಕಾಲ ಮಿಂಚಿಲ್ಲ, ಸನ್ಮಾನ್ಯ ನಿರ್ಮಲಾ ಸೀತಾರಾಮನ್ ಅವರೇ, ದಯವಿಟ್ಟು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಕರ್ನಾಟಕಕ್ಕೆ ನ್ಯಾಯಯುತವಾಗಿ ನೀಡಬೇಕಾಗಿರುವ ಬರಪರಿಹಾರ ಮತ್ತು ತೆರಿಗೆ ಪಾಲನ್ನು ಕೊಟ್ಟು ಬಿಡಿ. ಮತ್ತೆ ಮತ್ತೆ ಸುಳ್ಳುಗಳ ಮೂಲಕ ನಿಮ್ಮ ವೈಫಲ್ಯವನ್ನು ಸಮರ್ಥಿಸಿಕೊಳ್ಳಲು ಹೋಗಬೇಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
Lok Sabha election 2024: ಅವರು ಇಂದು ಮುಳಬಾಗಿಲು ನಗರದಲ್ಲಿ ಲೋಕಸಭಾ ಅಭ್ಯರ್ಥಿಯಾದ ಡಾ|| ಕೆವಿ ಗೌತಮ್ ಅವರ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು
Lok Sabha Election 2024: ಗ್ಯಾರಂಟಿ ಗ್ಯಾರಂಟಿ ಎನ್ನುತ್ತಾ ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ. ಕಡೇ ಪಕ್ಷ ರಸ್ತೆಗಳಿಗೆ ಒಂದು ಬುಟ್ಟಿ ಮಣ್ಣು ಸಹ ಹಾಕಿಲ್ಲವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.