ಎಲ್ಲಾ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 854 ಕೋಟಿ ರೂ. ಲಭ್ಯವಿದೆ. ಪ್ರತಿ ಜಿಲ್ಲೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ಕರೆದು ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Rameswaram Cafe Blast Case: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಸಮರ್ಥ ಆಡಳಿತ ಮತ್ತು ರಾಜ್ಯ ಗೃಹ ಇಲಾಖೆಯ ವೈಫಲ್ಯಕ್ಕೆ ಈ ಎರಡೂ ಪ್ರಕರಣಗಳು ಕೈಗನ್ನಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
Congress guarantee schemes: 1.56 ಕೋಟಿ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್ ನೀಡುವುದರ ಜೊತೆಗೆ 1.50 ರೂ. ವಿದ್ಯುತ್ ದರ ಇಳಿಸಿದ್ದೇವೆ. ಇದಕ್ಕೆ ವಿರೋಧ ಪಕ್ಷಗಳು ಏನು ಹೇಳುತ್ತವೆ? ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಇದಕ್ಕೆ ಉತ್ತರಿಸಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
ಹಿಂದುಳಿದವರಲ್ಲಿ ಅತಿ ಹಿಂದುಳಿದ ಕಟ್ಟ ಕಡೆಯ ಸಮುದಾಯಗಳಿಗೆ ಮೀಸಲಾತಿ ಪ್ರಯೋಜನ ಸಿಗುತ್ತಿಲ್ಲ. ಅವರಿಗೆ ಸೌಲಭ್ಯ ಸಿಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ʼನಿಗಮ / ಮಂಡಳಿ / ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ನೇಮಕಗೊಂಡ ಎಲ್ಲರಿಗೂ ಅಭಿನಂದನೆಗಳು. ನಮ್ಮ ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಮತ್ತು ನಾಡಿನ ಸರ್ವಾಂಗೀಣ ಪ್ರಗತಿಯ ನಮ್ಮ ಪ್ರಯತ್ನಕ್ಕೆ ತಾವೆಲ್ಲರೂ ಬೆಂಬಲವಾಗಿ ನಿಲ್ಲಲಿದ್ದೀರೆಂದು ನಂಬಿದ್ದೇನೆʼ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. NPS ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯ 15 ಬಾರಿ ಬಜೆಟ್ ಮಂಡಿಸಿದಂತಹ ರಾಜಕಾರಣಿ. ಕರ್ನಾಟಕದ ಜನ ನಿಮ್ಮನ್ನು ಒಬ್ಬ ಪ್ರಭುದ್ದ ನಾಯಕ, ರಾಜಕಾರಣಿಯಾಗಿ ನೋಡಿದ್ದಾರೆ. ಜನರು ಬೇರೆ ದೃಷ್ಟಿಕೋನದಿಂದ ನೋಡುವಂತೆ ಮಾಡಿಕೊಳ್ಳಬೇಡಿ ಎಂದು ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು
ನಿರುದ್ಯೋಗಿ ಯುವಕರಿಗೆ ಯುವ ನಿಧಿ ಕೊಡುವ ಜತೆಗೆ ಇವರಿಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ.
ಸಿದ್ದರಾಮಯ್ಯ ಅವರಷ್ಟು ನೀಚತನಕ್ಕೆ ನಾವು ಇಳಿಯುವುದಿಲ್ಲ. ನೀವು ಹೇಗೆ ಪ್ರಮಾಣವಚನ ಸ್ವೀಕರಿಸಿದದ್ದೀರಿ. ಹಾಗೆಯೇ ನಾನು ಕೂಡ ಪ್ರಮಾಣವಚನ ಸ್ವೀಕಾರ ಮಾಡಿರುವೆ. ಆಡಳಿತ, ಅಧಿಕಾರ ನಿಮಗೆ ಜಾಸ್ತಿ ಇರಬಹುದು. ಆದರೆ, ಸಂವಿಧಾನದಲ್ಲಿ ಕೇಂದ್ರ ಸರ್ಕಾರದ ಒಬ್ಬ ಮಂತ್ರಿ ಹಾಗೂ ರಾಜ್ಯದ ಮುಖ್ಯ ಮಂತ್ರಿ ಸಮಾನರು. ನಾನು ಮಾನ ಮರ್ಯಾದೆ ಬಿಟ್ಟು ವರ್ತನೆ ಮಾಡುವುದಿಲ್ಲ ಎಂದು ಆಕ್ರೋಷ ವ್ಯಕ್ತಪಡಿಸಿದರು.
ಈಗಾಗಲೇ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ಕಾವೇರಿ ನೀರನ್ನ ಬೇಕಾಬಿಟ್ಟಿ ತಮಿಳುನಾಡಿಗೆ ಹರಿಸಿದ ನಾಡದ್ರೋಹಿ ಸರ್ಕಾರ ಈಗ ಬೆಂಗಳೂರಿನ ಜನತೆ ಖಾಸಗಿ ಟ್ಯಾಂಕರ್ ಗಳಿಗೆ ಸಾವಿರಾರು ರೂ. ತೆತ್ತುವ ಪರಿಸ್ಥಿತಿ ತಂದಿಟ್ಟಿದೆ ಎಂದು ವಿಪಕ್ಷ ನಾಯಕ ಆರ್. ಆಶೋಕ್ ಹೇಳಿದರು.
ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರೀಕ್ಷೆಯಂತೆ ಸಿಬಿಐ ತನಿಖೆ ಮೂಲಕ ಚಿತ್ರಹಿಂಸೆ ನೀಡಲು ಹೊರಟಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
State funds allocation dispute Karnataka: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ನಮ್ಮ ಹಣ ವಾಪಾಸ್ ಕೊಡಿಸಿ. ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ ಎಂದು ಸಿಎಂ ಸಿದ್ದರಾಮಯ್ಯ, ಬಿಜೆಪಿ ಸದಸ್ಯರಿಗೆ ಸವಾಲು ಹಾಕಿದರು.
CM Siddaramaiah: ಮೋದಿ ಅವರು ಸಿ.ಎಂ ಆಗಿದ್ದಾಗ ಗುಜರಾತ್ ರಾಜ್ಯಕ್ಕೆ ಶೇ50 ರಷ್ಟು ತೆರಿಗೆ ಪಾಲು ಕೇಳಿದ್ದರು. ಈಗ ಅವರು ಪ್ರಧಾನಿ ಆಗಿ ಕರ್ನಾಟಕ ರಾಜ್ಯಕ್ಕೆ ಕೇವಲ ಶೇ 12 ರಷ್ಟು ವಾಪಾಸ್ ಕೊಡುತ್ತಿದ್ದಾರೆ: ಮೋದಿ ಅವರ ಮಾತು ಮತ್ತು ವರ್ತನೆಗೆ ಅಂಕಿ ಅಂಶಗಳ ಕನ್ನಡಿ ಹಿಡಿದ ಸಿ.ಎಂ.ಸಿದ್ದರಾಮಯ್ಯ
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದವರು ರಾಷ್ಟ್ರೀಯವಾದಿಗಳಲ್ವಾ? ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದೆ ಸುಮ್ಮನಿದ್ದವರು ರಾಷ್ಟ್ರೀಯವಾದಿಗಳಾ- ಸಿಎಂ ಸಿದ್ದರಾಮಯ್ಯ
ಕಳೆದ ಬಜೆಟ್ನಲ್ಲಿ ನೀರಾವರಿ, ಲೋಕೋಪಯೋಗಿ ಇಲಾಖೆಯಿಂದ ಹಣ ಕಡಿತಗೊಳಿಸಲಾಗಿದೆ. ಈ ಬಗ್ಗೆಯೂ ಸರ್ಕಾರ ಉತ್ತರ ನೀಡಿಲ್ಲ. ರೈತರಿಗೆ ನೀಡುವ ಸಹಾಯಧನದ ಬಗ್ಗೆಯೂ ಪ್ರತಿಕ್ರಿಯೆ ನೀಡದೆ ಕಾಗೆ ಗುಬ್ಬಕ್ಕ ಕಥೆ ಹೇಳಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.