ಭಾರತದ ಮಾಜಿ ನಾಯಕ ಮತ್ತು ಪ್ರಸ್ತುತ ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ಅವರು ನಿವೃತ್ತಿ ಹೊಂದುತ್ತಿರುವ ಭಾರತೀಯ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರನ್ನು ಶುಕ್ರವಾರದಂದು ಗಮನಾರ್ಹ ವೃತ್ತಿಜೀವನಕ್ಕೆ ಅಭಿನಂದಿಸಿದ್ದಾರೆ.
ಟೀಂ ಇಂಡಿಯಾಗೆ ಇತ್ತೀಚೆಗೆ ರಾಹುಲ್ ದ್ರಾವಿಡ್ ರೂಪದಲ್ಲಿ ಹೊಸ ಕೋಚ್ ಸಿಕ್ಕಿದ್ದಾರೆ. ಟಿ-20 ವಿಶ್ವಕಪ್ ಮುಗಿದ ಕೂಡಲೇ ರವಿಶಾಸ್ತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಇನ್ನೊಬ್ಬ ಅನುಭವಿ ಈ ಸ್ಥಾನವನ್ನು ಅಲಂಕರಿಸಲು ಬಯಸಿದ್ದರಂತೆ.
Sourav Ganguly On Virat Kohli:BCCI ಅಧ್ಯಕ್ಷ ಸೌರವ್ ಗಂಗೂಲಿ ಟೀಂ ಇಂಡಿಯಾ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಕುರಿತು ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. 'ನನಗೆ ವಿರಾಟ್ ಕೊಹ್ಲಿ ಅವರ ಆಟಿಟ್ಯೂಡ್ ತುಂಬಾ ಇಷ್ಟ, ಆದರೆ ಅವರು ತುಂಬಾ ಜಗಳವಾಡುತ್ತಾರೆ' ಎಂದು ಗಂಗೂಲಿ ಹೇಳಿದ್ದಾರೆ.
ಭಾರತೀಯ ಕ್ರಿಕೆಟ್ನ ಮತ್ತೊಬ್ಬ ಲೆಜೆಂಡ್ ಆಟಗಾರ ಗಂಗೂಲಿ, ಪತ್ರಕರ್ತ ಬೋರಿಯಾ ಮಜುಂದಾರ್ ಅವರ ಶೋನಲ್ಲಿ ಈ ವಿಷಯ ಬಾಯಿ ಬಿಟ್ಟಿದ್ದಾರೆ, ವಿವಿಎಸ್ ಲಕ್ಷ್ಮಣ್ ಅವರು ಟೀಮ್ ಇಂಡಿಯಾದ ಕೋಚ್ ಹುದ್ದೆ ಅಲಂಕರಿಸುವ ಇಂಗಿತು ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ರೋಹಿತ್ ಶರ್ಮಾ ಅವರನ್ನು ಇತ್ತೀಚೆಗೆ ಸೀಮಿತ ಓವರ್ಗಳ ಸ್ವರೂಪಗಳಲ್ಲಿ ಟೀಮ್ ಇಂಡಿಯಾದ ನಾಯಕತ್ವವನ್ನು ಹಸ್ತಾಂತರಿಸಲಾಯಿತು ಮತ್ತು ಈ ನಿರ್ಧಾರಕ್ಕೆ ಇಲ್ಲಿಯವರೆಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ಬುಧವಾರ ವಿರಾಟ್ ಸುದ್ದಿಗೋಷ್ಠಿ ನಡೆಸಿ ಏಕದಿನ ತಂಡದ ನಾಯಕತ್ವ ತೊರೆಯಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಇದಲ್ಲದೇ ಟಿ20 ನಾಯಕತ್ವದ ಬಗ್ಗೆಯೂ ಅವರು ದೊಡ್ಡ ಹೇಳಿಕೆಗಳನ್ನು ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ಆಘಾತಕಾರಿ ಪ್ರತಿಕ್ರಿಯೆ ನೀಡಿದ್ದಾರೆ.
India vs South Africa: ಟೆಸ್ಟ್ ಸರಣಿಯ ಬಳಿಕ ಭಾರತ 3 ಪಂದ್ಯಗಳ ಏಕದಿನ ಸರಣಿಯನ್ನೂ ಆಡಬೇಕಿದೆ. ಜನವರಿ 19ರಿಂದ ಏಕದಿನ ಸರಣಿ ಆರಂಭವಾಗಲಿದೆ. ಭಾರತೀಯ ಕ್ರಿಕೆಟಿಗರು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುತ್ತಿರುವ ಫೋಟೋವನ್ನು ಬಿಸಿಸಿಐ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನಾಯಕ ವಿರಾಟ್ ಕೊಹ್ಲಿಯ ಫೋಟೋ ಶೇರ್ ಮಾಡದಿರುವುದು ಅತ್ಯಂತ ಅಚ್ಚರಿಯ ಸಂಗತಿಯಾಗಿದೆ.
Rahul Dravid: ಭಾರತ ತಂಡದ ನೂತನ ಕೋಚ್ ರಾಹುಲ್ ದ್ರಾವಿಡ್ ತಂಡದ ಅಭ್ಯಾಸದ ನಂತರ ಸ್ಟಂಪ್ಗಳು, ಚೆಂಡುಗಳು ಮತ್ತು ಕೋನ್ಗಳನ್ನು ಸ್ವತಃ ಎತ್ತಿಕೊಂಡು ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ಯುತ್ತಾರೆ. ಇದು ಅವರ ನಮ್ರತೆಯನ್ನು ತೋರಿಸುತ್ತದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಗುರುವಾರ, ಮಂಡಳಿ ಮತ್ತು ಆಯ್ಕೆಗಾರರು ಒಟ್ಟಾಗಿ ರೋಹಿತ್ ಶರ್ಮಾ ಅವರನ್ನು ತಂಡದ ಪೂರ್ಣಾವಧಿಯ ನಾಯಕರನ್ನಾಗಿ ನೇಮಕ ಮಾಡುವ ವಿಚಾರವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ಕೊಹ್ಲಿ ಇಷ್ಟೊಂದು ದೊಡ್ಡ ನಿರ್ಧಾರ ತೆಗೆದುಕೊಂಡಿದ್ದು ಏಕೆ ಎಂಬ ಪ್ರಶ್ನೆಗಳು ನಿರಂತರವಾಗಿ ಕೇಳಿ ಬರುತ್ತಿವೆ. ಇದೀಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.
ವಿರಾಟ್ ಕೊಹ್ಲಿ ನೇತೃತ್ವದ ಭಾರತೀಯ ಕ್ರಿಕೆಟ್ ತಂಡವು 2021 ಟಿ 20 ವಿಶ್ವಕಪ್ಗೆ ಸೂಕ್ತ ಸ್ಪರ್ಧಿ ಎಂದು ಪರಿಗಣಿಸುವ ಎಲ್ಲಾ ಪ್ರತಿಭೆಗಳನ್ನು ಹೊಂದಿದೆ, ಆದರೆ ಅದು ಟ್ರೋಫಿಯನ್ನು ಗೆಲ್ಲಲು ಸ್ವಲ್ಪ ಪ್ರಬುದ್ಧತೆಯನ್ನು ತೋರಿಸಬೇಕು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಮತ್ತು ಮಾಜಿ ನಾಯಕ ಸೌರವ್ ಗಂಗೂಲಿ ಶನಿವಾರದಂದು ಹೇಳಿದ್ದಾರೆ.
ಮುಂಬರುವ ಅಕ್ಟೋಬರ್-ನವೆಂಬರ್ನಲ್ಲಿ ಮುಂಬರುವ ಟಿ 20 ವಿಶ್ವಕಪ್ ನಂತರ ರವಿಶಾಸ್ತ್ರಿಯವರ ಅವಧಿ ಮುಗಿಯುತ್ತದೆ ಮತ್ತು ಅವರು ಒಪ್ಪಂದವನ್ನು ವಿಸ್ತರಿಸಲು ಇಚ್ಛಿಸುವುದಿಲ್ಲ ಎಂದು ವರದಿಗಳು ಹೇಳುತ್ತಿದ್ದರೆ,ಇನ್ನೊಂದೆಡೆಗೆ ರಾಹುಲ್ ದ್ರಾವಿಡ್ ತಂಡದ ಕೋಚ್ ಜವಾಬ್ದಾರಿಯನ್ನು ವಹಿಸಿಕೊಳ್ಳಬಹುದು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.