ವಿರಾಟ್ ಕೊಹ್ಲಿ ಅವರ ಕಳಪೆ ಫಾರ್ಮ್ ಈ ಸಮಯದಲ್ಲಿ ಪ್ರತಿಯೊಬ್ಬ ಭಾರತೀಯ ಅಭಿಮಾನಿಗಳಿಗೆ ಕಳವಳದ ವಿಷಯವಾಗಿದೆ. ಹಲವು ಮಾಜಿ ಹಿರಿಯ ಕ್ರಿಕೆಟಿಗರು ಕೊಹ್ಲಿ ಫಾರ್ಮ್ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇದೀಗ ಈ ಪಟ್ಟಿಗೆ ಭಾರತದ ದಿಗ್ಗಜ ಸುನಿಲ್ ಗವಾಸ್ಕರ್ ಹೆಸರೂ ಸೇರ್ಪಡೆಯಾಗಿದೆ. ಸುನಿಲ್ ಗವಾಸ್ಕರ್ ಅವರು ವಿರಾಟ್ ಕೊಹ್ಲಿಗೆ ಕೇವಲ 20 ನಿಮಿಷಗಳು ಬೇಕು. ಆ ಮೂಲಕ ಅವರು ಹೋರಾಡುತ್ತಿರುವ ಸಮಸ್ಯೆಯ ಬಗ್ಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದ್ದಾರೆ.
ಟೀಂ ಇಂಡಿಯಾ ಜೂನ್ 9 ರಿಂದ 5 ಪಂದ್ಯಗಳ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಈ ಸರಣಿಯಲ್ಲಿ ಹಲವು ಆಟಗಾರರ ಪ್ರದರ್ಶನಕ್ಕೆ ವಿಶೇಷ ಗಮನ ನೀಡಲಾಗುವುದು. ಈ ವರ್ಷಾಂತ್ಯದಲ್ಲಿ ಟಿ20 ವಿಶ್ವಕಪ್ ಕೂಡ ನಡೆಯಲಿದ್ದು, ಕೆಲ ಆಟಗಾರರಿಗೆ ಅವಕಾಶ ಸಿಗಲಿದೆ ಎಂಬುದು ಇದರ ಹಿಂದಿನ ಕಾರಣ. ಈ ನಡುವೆ ಭಾರತದ ಮಾಜಿ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ಇಬ್ಬರು ಆಟಗಾರರನ್ನು ಹಾಡಿ ಹೊಗಳಿದ್ದಾರೆ. ಆ ತಗಾರರು ಯಾರು? ಯಾಕೆ ಹೊಗಳಿದ್ದಾರೆ? ಇಲ್ಲಿದೆ ನೋಡಿ.
ಇದೇ ವೇಳೆ ಮುಂಬರುವ ಟಿ20 ವಿಶ್ವಕಪ್ಗೆ ಭಾರತ ತಂಡವನ್ನು ಆಯ್ಕೆ ಮಾಡಬೇಕಿದೆ. ಈ ನಡುವೆ ಟೀಂ ಇಂಡಿಯಾದ ದಿಗ್ಗಜ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ಹೇಳಿಕೆಯೊಂದನ್ನು ನೀಡಿದ್ದಾರೆ. ಮುಂಬರುವ ವಿಶ್ವಕಪ್ನಲ್ಲಿ ಟೀಂ ಇಂಡಿಯಾದಲ್ಲಿ ನೋಡಲು ಬಯಸುವ ಆಟಗಾರನನ್ನು ಗವಾಸ್ಕರ್ ಹೆಸರಿಸಿದ್ದಾರೆ.
ಹಾರ್ದಿಕ್ ಪಾಂಡ್ಯ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿನ ಪ್ರದರ್ಶನದ ಕುರಿತಾಗಿ ಮೆಚ್ಚುಗೆಯ ಸುರಿಮಳೆಗಳೇ ಹರಿದು ಬರುತ್ತಿವೆ.ಗಾಯಗೊಂಡು ಟೀಮ್ ಇಂಡಿಯಾದಿಂದ ಹೊರಗೆ ಉಳಿದಿದ್ದ ಹಾರ್ದಿಕ್ ಪಾಂಡ್ಯ ಅವರು ಈಗ ಐಪಿಎಲ್ ಮೂಲಕ ಭರ್ಜರಿ ಕಮ್ ಬ್ಯಾಕ್ ಮಾಡಿದ್ದಾರೆ.ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ಗುಜರಾತ್ ಟೈಟಾನ್ಸ್ ತಂಡದ ನೇತೃತ್ವವನ್ನು ವಹಿಸಿಕೊಂಡಿರುವ ಅವರು ಈಗ ನಾಯಕತ್ವದ ಜೊತೆಗೆ ತಮ್ಮ ಆಟದ ಮೂಲಕವೂ ಮಿಂಚುತ್ತಿದ್ದಾರೆ.
ಭಾರತದ ಶ್ರೇಷ್ಠ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ಐಪಿಎಲ್ಗೂ ಮುನ್ನ ಭವಿಷ್ಯ ನುಡಿದಿದ್ದಾರೆ. ಈ ವರ್ಷ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರನನ್ನು ಗವಾಸ್ಕರ್ ಹೆಸರಿಸಿದ್ದಾರೆ.
ಭಾರತದ ಮಾಜಿ ಬ್ಯಾಟ್ಸ್ ಮನ್ ಸಂಜಯ್ ಮಂಜ್ರೇಕರ್ ಅವರು ವಿರಾಟ್ ಕೊಹ್ಲಿಯನ್ನು ಶ್ರೇಷ್ಠ ನಾಯಕರ ಪಟ್ಟಿಯಲ್ಲಿ ಉಳಿಸಿಕೊಂಡಿಲ್ಲ. ಇದಕ್ಕೆ ಕಾರಣವನ್ನೂ ಮಂಜ್ರೇಕರ್ ನೀಡಿದ್ದಾರೆ. ಭಾರತದ ಶ್ರೇಷ್ಠ ನಾಯಕರ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಅವರನ್ನು ಅಗ್ರಸ್ಥಾನದಲ್ಲಿ ಇಡಬೇಕು ಎಂದು ಸಂಜಯ್ ಮಂಜ್ರೇಕರ್ ಹೇಳಿದ್ದಾರೆ.
ಟೀಮ್ ಇಂಡಿಯಾದಲ್ಲಿ ಸಧ್ಯ ಭಾರೀ ಅಲ್ಲೋಲ ಕಲ್ಲೋಲ ಸೃಷ್ಠಿಯಾಗಿದೆ. ಮೊದಲಿಗೆ, ವಿರಾಟ್ ಕೊಹ್ಲಿ ಎಲ್ಲಾ ಮೂರು ಸ್ವರೂಪಗಳ ನಾಯಕತ್ವವನ್ನು ತ್ಯಜಿಸಿದರು, ಇದನ್ನು ಹೊರತುಪಡಿಸಿ ಭಾರತವು ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1 ಸೋಲನ್ನು ಎದುರಿಸಬೇಕಾಯಿತು. ಇದಾದ ಬಳಿಕ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿಯೂ ಟೀಂ ಇಂಡಿಯಾ 31 ರನ್ಗಳಿಂದ ಸೋಲು ಕಂಡಿತ್ತು. ವಿರಾಟ್ ಕೊಹ್ಲಿ ಪರಿಸ್ಥಿತಿಯೂ ಇದೇ ಆಗಿದೆ. ಕೊಹ್ಲಿ 2 ವರ್ಷಗಳಿಂದ ಗ್ರೌಂಡ್ ಅಲ್ಲಿ ಯಾವುದೇ ಶತಕ ಬಾರಿಸಿಲ್ಲ, ಅದರ ಹೊರತಾಗಿ ಅವರು ಎಲ್ಲಾ ಮೂರು ಸ್ವರೂಪಗಳ ನಾಯಕತ್ವವನ್ನೂ ಕಳೆದುಕೊಂಡರು. ಇದೀಗ ವಿರಾಟ್ ಮಾಡಿದ ತಪ್ಪನ್ನು ಮಾಜಿ ಹಿರಿಯ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಇಷ್ಟವಾಗಿಲ್ಲ, ಈ ಬಗ್ಗೆ ವಿರಾಟ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ನಿರ್ಧಾರದ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಇಡೀ ಭಾರತ ತಂಡವು ಕೋಪಗೊಂಡಿತು ಮತ್ತು ಮೈದಾನದಲ್ಲಿಯೇ ತೀವ್ರ ವಿವಾದವನ್ನು ಸೃಷ್ಟಿಸಿತು. ಆದರೆ ಈ ಮಧ್ಯೆ, ಮಾಜಿ ಆಟಗಾರರೊಬ್ಬರು ಈ ಸಂಪೂರ್ಣ ವಿವಾದದ ನಂತರ ವಿರಾಟ್ ಕೊಹ್ಲಿಯನ್ನ ಕ್ರಿಕೆಟ್ನಿಂದ ಅಮಾನತುಗೊಳಿಸುವಂತೆ ಮತ್ತು ದಂಡ ವಿಧಿಸುವಂತೆ ಕೇಳಿಕೊಂಡಿದ್ದಾರೆ.
ಕೊಹ್ಲಿ ಅವರು ಇನ್ನು ಮುಂದೆ ODI ತಂಡದ ನಾಯಕತ್ವವನ್ನು ವಹಿಸುವುದಿಲ್ಲ ಎಂದು ಹೇಗೆ ತಿಳಿಸಲಾಯಿತು ಎಂಬುದನ್ನೂ ಒಳಗೊಂಡಂತೆ ವಿವಿಧ ವಿಷಯಗಳ ಬಗ್ಗೆ ಪ್ರಾಮಾಣಿಕವಾಗಿ ವಿವರಿಸಿದ್ದಾರೆ ಮತ್ತು ಹೊಸ ODI ಕ್ಯಾಪ್ಟನ್ ರೋಹಿತ್ ಶರ್ಮಾ ಅವರೊಂದಿಗಿನ ಭಿನ್ನಾಭಿಪ್ರಾಯದ ಬಗ್ಗೆ ನಡೆಯುತ್ತಿರುವ ಊಹಾಪೋಹಗಳನ್ನು ಸಹ ವಿವರಿಸಿದ್ದಾರೆ.
ರಾಹುಲ್ ದ್ರಾವಿಡ್ ಈಗ ತಂಡದ ಕೋಚ್ ಆಗಿ ನೇಮಕಗೊಂಡಿರುವ ಬೆನ್ನಲ್ಲೇ ಅವರ ಮೇಲಿನ ನಿರೀಕ್ಷೆಯ ಭಾರ ಅಧಿಕಗೊಂಡಿದೆ.ಇದರ ಬೆನ್ನಲ್ಲೇ ಈಗ ಭಾರತದ ಮಾಜಿ ದಂತಕಥೆ ಸುನಿಲ್ ಗವಾಸ್ಕರ್ ಅವರು ರಾಹುಲ್ ದ್ರಾವಿಡ್ ಗೆ ಬ್ಯಾಟ್ಸ್ಮನ್ ಆಗಿ ಯಶಸ್ವಿ ಕಂಡಂತೆ ಇಲ್ಲಿಯೂ ಅದೇ ರೀತಿ ಕಾರ್ಯನಿರ್ವಹಿಸಿ ಎಂದು ಅವರು ಹೇಳಿದ್ದಾರೆ.
ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಅವರು ಭಾನುವಾರದಂದು ಐಸಿಸಿ ಟಿ 20 ವಿಶ್ವಕಪ್ 2021 ರಲ್ಲಿ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ಪಂದ್ಯಕ್ಕೂ ಮುನ್ನ ಭಾರತೀಯ ದಂತಕಥೆಗಳಾದ ಸುನಿಲ್ ಗವಾಸ್ಕರ್ ಮತ್ತು ಕಪಿಲ್ ದೇವ್ ಅವರೊಂದಿಗೆ ಚಿಲ್ ಮಾಡುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಬ್ಯಾಟಿಂಗ್ ದಂತಕಥೆ ಸುನಿಲ್ ಗವಾಸ್ಕರ್ ಅವರು ಕೆಎಲ್ ರಾಹುಲ್ ಕ್ಯಾಪ್ಟನ್ ಮೆಟೀರಿಯಲ್ ಎಂದು ಭಾವಿಸಿದ್ದಾರೆ ಮತ್ತು ಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನಾಗಿ ರೂಪುಗೊಳ್ಳಬೇಕು ಎಂದು ಹೇಳಿದ್ದಾರೆ.
Ind Vs Eng Test Series - ಇತ್ತೀಚಿಗೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯ ಫಾರ್ಮ್ ಕಳವಳಕಾರಿ ಸಂಗತಿಯಾಗಿದೆ. ವಿರಾಟ್ ನವೆಂಬರ್ 2019 ರಿಂದ ಶತಕ ಗಳಿಸಿಲ್ಲ ಮತ್ತು ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ, ಅವರು ಮತ್ತೊಮ್ಮೆ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಅವರ ಎಸೆತಗಳನ್ನು ಎದುರಿಸುವಲ್ಲಿ ಹೆಣಗಾಡುತ್ತಿರುವುದು ಕಂಡುಬಂದಿದೆ.
ರಾಜಸ್ತಾನ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ ನ ದೇವದತ್ ಪಡಿಕ್ಕಲ್ ಸಿಡಿಸಿದ ಭರ್ಜರಿ ಶತಕ ಈಗ ಕ್ರಿಕೆಟ್ ನ ದಂತಕಥೆಗಳ ಮೆಚ್ಚುಗೆ ಗಳಿಸಿದೆ.ಅದರಲ್ಲೂ ಭಾರತದ ಮಾಜಿ ನಾಯಕ ಮತ್ತು ಬ್ಯಾಟಿಂಗ್ ದಂತಕಥೆ ಸುನಿಲ್ ಗವಾಸ್ಕರ್ ಅವರು ಗುರುವಾರ ಪಡಿಕ್ಕಲ್ ಅವರ ಪ್ರದರ್ಶನದಿಂದ ಪ್ರಭಾವಿತರಾಗಿ ಪಡಿಕಲ್ ಟೀಮ್ ಇಂಡಿಯಾ ಪರ 'ಶೀಘ್ರದಲ್ಲೇ' ಆಡಬಹುದು ಎಂದು ಹೇಳಿದ್ದಾರೆ.
ಸದ್ಯ ಬಾಕ್ಸಿಂಗ್ ದಿನದ ಟೆಸ್ಟ್ನಲ್ಲಿ ಅಜಿಂಕ್ಯ ರಹಾನೆ ಅವರ ಶತಕ ಗಳಿಸಿದ ಮೊತ್ತವು ಭಾರತೀಯ ಕ್ರಿಕೆಟ್ ಇತಿಹಾಸದ ಪ್ರಮುಖ ಶತಕಗಳಲ್ಲಿ ಒಂದಾಗಿದೆ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಭಾರತೀಯ ತಂಡಕ್ಕೆ ಸಮಸ್ಯೆಗಳು ಹೆಚ್ಚಾಗಿದ್ದು, ಅಡಿಲೇಡ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ನಂತರ ನಾಯಕ ವಿರಾಟ್ ಕೊಹ್ಲಿ ಸ್ವದೇಶಕ್ಕೆ ಮರಳಲಿದ್ದಾರೆ ಜೊತೆಗೆ ಶಮಿ ಗಾಯಗೊಂಡಿರುವುದು ಈಗ ತಂಡವನ್ನು ಚಿಂತೆಗೀಡು ಮಾಡಿದೆ. ಜೊತೆಗೆ ಎರಡನೇ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ಕುಸಿದ ನಂತರ ಭಾರತ ತಂಡದಲ್ಲಿ ಏಕಾಏಕಿ ಎಲ್ಲವೂ ಬದಲಾಗುತ್ತಿದೆ.
Flashback 2020: Cricket Controversies 2020 - ಕ್ರಿಕೆಟ್ ಅನ್ನು 'ಜಂಟಲ್ಮ್ಯಾನ್ಸ್ ಗೇಮ್' ಎಂದು ಕರೆಯಲಾಗುತ್ತದೆ ಆದರೆ ಕ್ರಿಕೆಟ್ ಮತ್ತು ವಿವಾದಗಳು ಏಕಕಾಲದಲ್ಲಿ ಮುನ್ನಡೆಯುತ್ತವೆ. ಕರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಈ ವರ್ಷದಲ್ಲಿ ಹೆಚ್ಚು ಕ್ರಿಕೆಟ್ ಪಂದ್ಯಾವಳಿಗಳು ನಡೆದಿಲ್ಲ ಆದರೆ ಅನೇಕ ವಿವಾದಗಳು ಸೃಷ್ಟಿಯಾದವು ಮತ್ತು ಅವು ಕ್ರಿಕೆಟ್ ಅನ್ನು ಹೆಡ್ಲೈನ್ ನಲ್ಲಿರಿಸಿದವು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.