ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಪತ್ರಕರ್ತ ವಿನೋದ್ ದುವಾ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
45 ಕ್ಕಿಂತ ಹೆಚ್ಚು ವಯಸ್ಸಿನವರಿಗೆ ಉಚಿತ ವ್ಯಾಕ್ಸಿನೇಷನ್ ನೀಡುವ ಮತ್ತು ಅದಕ್ಕಿತ ಕಡಿಮೆ ವಯಸ್ಸಿನವರಿಗೆ ಹಣ ಪಾವತಿಸುವ ಕೇಂದ್ರದ ವ್ಯವಸ್ಥೆಯನ್ನು ಪ್ರೈಮಾ ಫೇಸಿ, ನಿರಂಕುಶ ಮತ್ತು ತರ್ಕಹೀನವಾಗಿದೆ ಎಂದು ಸುಪ್ರೀಂ ಕೋರ್ಟ್ ಗರಂ ಆಗಿದೆ.
ಕೋವಿಡ್ ಅನಾಥ ಮಕ್ಕಳ ರಕ್ಷಣೆಗಾಗಿ ಕೇಂದ್ರ ಸರ್ಕಾರ ಘೋಷಿಸಿರುವ ಯೋಜನೆಗಳ ವಿವರಗಳನ್ನು ಇಂದು ಸುಪ್ರೀಂ ಕೋರ್ಟ್ ಕೋರಿದೆ.ಫಲಾನುಭವಿಗಳ ಗುರುತಿಸುವಿಕೆ, ಯೋಜನೆಯ ಮೇಲ್ವಿಚಾರಣೆಯ ಕಾರ್ಯವಿಧಾನ ಮತ್ತು ಇತರ ಸಂಬಂಧಿತ ವಿಷಯಗಳ ಬಗ್ಗೆ ವಿವರಗಳನ್ನು ಸಲ್ಲಿಸುವಂತೆ ನ್ಯಾಯಾಲಯ ಕೇಂದ್ರವನ್ನು ಕೇಳಿದೆ.
Bank Locker - ಒಂದು ವೇಳೆ ನೀವೂ ಕೂಡ ಬ್ಯಾಂಕ್ ನಲ್ಲಿ ಲಾಕರ್ ಹೊಂದಿಲ್ಲ ಎಂದಾದಲ್ಲಿ ಅದಕ್ಕಾಗಿ ಇಂದೇ ಅಪ್ಲೈ ಮಾಡಿ. ಏಕೆಂದರೆ Locker Facility ಕುರಿತು ಶೀಘ್ರದಲ್ಲಿಯೇ ಮಹತ್ವದ ನಿರ್ಣಯವೊಂದು ಹೊರಬೀಳುವ ಸಾಧ್ಯತೆ ಇದೆ.
'ಕರ್ನಾಟಕದ ವಿಚಾರದಲ್ಲಿ ಹೇಳತೀರದ ತಾರತಮ್ಯ ಮಾಡುತ್ತಿರುವ ಕೇಂದ್ರ ಸರ್ಕಾರ ಒಂದು ವಿಷಯ ಸ್ಪಷ್ಟವಾಗಿ ಅರಿಯಬೇಕು. ಇದು ಒಕ್ಕೂಟ ವ್ಯವಸ್ಥೆ. ಒಕ್ಕೂಟ ಸರ್ಕಾರ ನಡೆಸುತ್ತಿರುವವರು ಎಲ್ಲ ರಾಜ್ಯಗಳಿಗೂ ಸಮಾನ ಆದ್ಯತೆ ನೀಡಬೇಕು. ಅನಿವಾರ್ಯದಲ್ಲಿರುವವರ ಅಗತ್ಯಗಳನ್ನು ಮೊದಲು ಪೂರೈಸಬೇಕು. ಅದನ್ನು ಬಿಟ್ಟು ತಾತ್ಸಾರ ಮಾಡಿದರೆ ಜನ ದಂಗೆ ಎದ್ದಾರು'- ಎಚ್ಡಿ ಕುಮಾರಸ್ವಾಮಿ
ಸುಪ್ರೀಂಕೋರ್ಟ್ ನ್ಯಾಯಾಧೀಶ ಡಿ.ವೈ.ಚಂದ್ರಚೂಡ್ ಅವರಿಗೆ ಕೊರೊನಾ ಸೋಂಕು ಇರುವುದು ಧೃಡಪಟ್ಟಿದೆ ಎಂದು ಬಾರ್ & ಬೆಂಚ್ ಬುಧವಾರ ವರದಿ ಮಾಡಿದೆ. ಅವರ ಸಿಬ್ಬಂದಿಯೊಬ್ಬರು ಸಹ ಕೊರೊನಾ ಪಾಸಿಟಿವ್ ಗೆ ಪರೀಕ್ಷೆ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.
ಏಕರೂಪದ ಲಸಿಕೆ ನೀತಿ ಇರಬೇಕು ಮತ್ತು ಇತ್ತೀಚಿನ ಹಂತದ ನೂತನ ಭೇದಾತ್ಮಕ ಬೆಲೆ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಇಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.ಲಸಿಕೆಗಳು ಲಭ್ಯವಾಗುವಂತೆ ಮತ್ತು ರಾಜ್ಯಗಳಿಗೆ ಉಚಿತವಾಗಿ ನೀಡುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರವು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಬಂಗಾಳ ಹೇಳಿದೆ.
ಸುಪ್ರೀಂಕೋರ್ಟ್ ಇಂದಿನ ಐತಿಹಾಸಿಕ ತೀರ್ಪಿನಲ್ಲಿ 102 ನೇ ಸಂವಿಧಾನ ತಿದ್ದುಪಡಿಯು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು (ಎಸ್ಇಬಿಸಿ) ಗುರುತಿಸುವ ರಾಜ್ಯಗಳ ಅಧಿಕಾರವನ್ನು ರದ್ದುಗೊಳಿಸಿದೆ ಎಂದು ತನ್ನ 3:2 ರ ಬಹುಮತದ ತೀರ್ಪಿನಲ್ಲಿ ಹೇಳಿದೆ.
SC Asks For National Plan - ದೇಶಾದ್ಯಂತ ಕೊರೊನಾ ವೈರಸ್ ನ ಎರಡನೇ ಅಲೆಯ ಹಿನ್ನೆಲೆ ಉದ್ಭವಿಸಿರುವ ಗಂಭೀರ ಪರಿಸ್ಥಿತಿಯ ಹಿನ್ನೆಲೆ Suo Moto Cognizance ತೆಗೆದುಕೊಂಡಿರುವ ಸರ್ವೋಚ್ಛ ನ್ಯಾಯಾಲಯ, ಆಕ್ಸಿಜನ್ ಸಪ್ಲೈ, ಚಿಕಿತ್ಸೆಗಾಗಿ ಬೇಕಾಗುವ ಅತ್ಯಾವಶ್ಯಕ ಔಷಧಿಗಳು ಸೇರಿದಂತೆ ಇತರೆ ವಿಷಯಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ನೀತಿ ಸಾದರುಪಡಿಸಲು ಕೇಂದ್ರ ಸರ್ಕಾರವನ್ನು ಕೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.