SC Ruling on Women Army Officers: ನಮ್ಮ ಸಾಮಾಜಿಕ ವ್ಯವಸ್ಥೆ ಪುರುಷರಿಂದ ಪುರುಷರಿಗಾಗಿ ರಚಿಸಲಾಗಿದೆ. ಇದರಲ್ಲಿ ಸಮಾನತೆಯ ಕೊರತೆ ಇದೆ. ಇದನ್ನು ನಾವು ಬದಲಿಸಬೇಕಿದೆ ಎಂದು ಸುಪ್ರೀಂ ಹೇಳಿದೆ. ಮುಂದಿನ ಒಂದು ತಿಂಗಳಲ್ಲಿ ಮಹಿಳಾ ಶಾಶ್ವತ ಕಮಿಷನ್ ಒದಗಿಸುವುದರ ಮೇಲೆ ಯೋಚನೆ ನಡೆಸುವಂತೆ ಭಾರತೀಯ ಸೇನೆಗೆ ಹೇಳಿದ್ದು, ಮುಂದಿನ ಎರಡು ತಿಂಗಳಿನಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲು ಸರ್ವೋಚ್ಛ ನ್ಯಾಯಾಲಯ ಸೂಚಿಸಿದೆ.
ನೆಟ್ಫ್ಲಿಕ್ಸ್ ಮತ್ತು ಅಮೆಜಾನ್ ಪ್ರೈಮ್ ಸೇರಿದಂತೆ ಓವರ್-ದಿ-ಟಾಪ್ (ಒಟಿಟಿ) ಪ್ಲಾಟ್ಫಾರ್ಮ್ಗಳಲ್ಲಿನ ವಿಷಯವನ್ನು ನಿಯಂತ್ರಿಸುವಂತೆ ಕೋರಿ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಡೆಹಿಡಿದಿದೆ. ವಿವಿಧ ಹೈಕೋರ್ಟ್ಗಳಲ್ಲಿ ಸಲ್ಲಿಸಲಾದ ಈ ಎಲ್ಲಾ ಅರ್ಜಿಗಳನ್ನು ಕ್ಲಬ್ ಮಾಡಲು ಕೇಂದ್ರವು ವರ್ಗಾವಣೆ ಮಾಡಿದ ಮನವಿಯ ಮೇರೆಗೆ ಈ ಆದೇಶ ಬಂದಿದೆ.
Loan Moratorium ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಮೊರಟೋರಿಯಂ ಅವಧಿಯನ್ನು ಆಗಸ್ಟ್ 31 ರ ನಂತರ ವಿಸ್ತರಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದೆ ವೇಳೆ ಈ ಆರು ತಿಂಗಳ ಅವಧಿಯಲ್ಲಿ ಯಾವುದೇ ಸಾಲಗಾರರಿಂದ ಪಡೆದ ಬಡ್ಡಿಗೆ ಮೇಲೆ ಯಾವುದೇ ಬಡ್ಡಿ ವಿಧಿಸಲಾಗುವುದಿಲ್ಲ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ ಸುಭಾಷ್ ರೆಡ್ಡಿ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ಪ್ರಕಟಿಸಿದೆ.
ಭಾರತದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ದೆ ಅವರ ನಿವೃತ್ತಿಗೆ ಇನ್ನೂ ಒಂದು ತಿಂಗಳವಷ್ಟೇ ಬಾಕಿ ಇರುವ ಬೆನ್ನಲ್ಲಿ ತಮ್ಮ ಮುಂದಿನ ಉತ್ತರಾಧಿಕಾರಿಯನ್ನು ಸೂಚಿಸಲು ಸರ್ಕಾರ ಕೇಳಿದೆ ಎಂದು ಮೂಲಗಳು ತಿಳಿಸಿವೆ.
Maratha Quota - ಮರಾಠಾ ಕೋಟಾ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ಶುಕ್ರವಾರ ಎಷ್ಟು ತಲೆಮಾರುಗಳ ಮೀಸಲಾತಿ ಮುಂದುವರೆಯಲಿದೆ ಎಂಬುದನ್ನು ತಿಳಿಯಲು ಬಯಸಿದೆ. ಶೇಕಡಾ 50 ರ ಮಿತಿಯನ್ನು ತೆಗೆದುಹಾಕಿದ ಸಂದರ್ಭದಲ್ಲಿ ಉಂಟಾಗುವ ಅಸಮಾನತೆಯ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.
BSNL 4G Services: ಈ ಬಾರಿಯ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಸರ್ಕಾರವು ಖಾಸಗೀಕರಣದ ಬಗ್ಗೆ ತನ್ನ ನಿಲುವನ್ನು ತೆರವುಗೊಳಿಸುವ ಕಾರ್ಯದಲ್ಲಿ ನಿರತವಾಗಿದೆ. ಸರ್ಕಾರಿ ಬ್ಯಾಂಕುಗಳು, ರೈಲ್ವೆಗಳ ನಂತರ, ಈಗ ಸರ್ಕಾರಿ ಟೆಲಿಕಾಂ ಕಂಪನಿ ಬಿಎಸ್ಎನ್ಎಲ್ (BSNL) ಅನ್ನು ಖಾಸಗೀಕರಣಗೊಳಿಸುವ ಬಗ್ಗೆ ಸರ್ಕಾರ ಮಾಹಿತಿ ನೀಡಿದ್ದು ಬಿಎಸ್ಎನ್ಎಲ್ ಅನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದೆ.
ಆಧಾರ್ ಕಾರ್ಡ್ನೊಂದಿಗೆ ಸಂಪರ್ಕ ಹೊಂದಿಲ್ಲದ ಕಾರಣ ಕೇಂದ್ರವು ಸುಮಾರು ಮೂರು ಕೋಟಿ ಪಡಿತರ ಚೀಟಿಗಳನ್ನು ರದ್ದುಪಡಿಸಿರುವುದು ಗಂಭೀರ ವಿಷಯ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಅಷ್ಟೇ ಅಲ್ಲದೆ ಈ ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯಗಳಿಂದ ಪ್ರತಿಕ್ರಿಯೆ ಕೋರಿದೆ.
Supreme Court - ಕೇವಲ ದೆಹಲಿಯಲ್ಲಿ ಮಾತ್ರ ಸುಪ್ರೀಂ ಕೋರ್ಟ್ ಇರುವುದರಿಂದ ದೂರದ ಪ್ರದೇಶಗಳಲ್ಲಿ ವಾಸಿಸುವ ಬಡ ಜನರು ಸುಪ್ರೀಂ ಕೋರ್ಟ್(SC) ವರೆಗೆ ಬರಲಾಗುವುದಿಲ್ಲ ಎಂದು ಸಂಸದೀಯ ಸಮೀತಿ ಅಭಿಪ್ರಾಯಪಟ್ಟಿದೆ.
ಚುನಾವಣೆಯಲ್ಲಿ ನೋಟಾಗೆ ಅಧಿಕ ಮತಗಳು ಬಂದಲ್ಲಿ ಅಂತಹ ಕ್ಷೇತ್ರಗಳಲ್ಲಿ ಹೊಸದಾಗಿ ಚುನಾವಣೆ ನಡೆಸಲು ಕೋರಿ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ.ಈಗ ಈ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.
Cheque Bounce Cases: ಹೆಚ್ಚುತ್ತಿರುವ ಚೆಕ್ ಬೌನ್ಸ್ ಪ್ರಕರಣಗಳನ್ನು ಹೇಗೆ ಎದುರಿಸುವುದು ಎಂಬುದರ ಕುರಿತು ಸುಪ್ರೀಂ ಕೋರ್ಟ್, ಹೈಕೋರ್ಟಿನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ.
ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೇವಲ ಶಾಸನಬದ್ಧವಾಗಿದೆ, ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಇರುವ ಸಾಂವಿಧಾನಿಕ ಮೀಸಲಾತಿಗಿಂತ ಭಿನ್ನವಾಗಿದೆ, ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಹಿಂದಿನವರಿಗೆ ನೀಡಲಾದ ಮೀಸಲಾತಿಯ ವ್ಯಾಪ್ತಿಯು ಎಸ್ಸಿ, ಎಸ್ಟಿ ಹಾಗೂ ಒಬಿಸಿ ಸೇರಿ ಒಟ್ಟು ಮೀಸಲಾತಿ ಶೇಕಡಾ 50 ರ ಮಿತಿಯನ್ನು ಮೀರಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದೆ.
ಸರ್ಕಾರದ ಅಭಿಪ್ರಾಯಕ್ಕಿಂತ ಭಿನ್ನವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದರಿಂದ ಅದು ದೇಶದ್ರೋಹದ ಅಪರಾಧವಾಗುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಸಂಸದ ಫಾರೂಕ್ ಅಬ್ದುಲ್ಲಾ ವಿರುದ್ಧದ ಅರ್ಜಿಯನ್ನು ವಜಾಗೊಳಿಸಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಚೆಕ್ ಬೌನ್ಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬುಧವಾರ (ಮಾರ್ಚ್ 3) ಸುಪ್ರೀಂ ಕೋರ್ಟ್ ಸುಯೊ ಮೋಟೋ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಬೊಬ್ಡೆ ಅವರು ಸಮಿತಿಯನ್ನು ರಚಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.ಈ ಸಮಿತಿಯು ನಿವೃತ್ತ ನ್ಯಾಯಾಧೀಶರ ನೇತೃತ್ವ ವಹಿಸಲಿದ್ದು, ಹೆಚ್ಚುತ್ತಿರುವ ಚೆಕ್ ಬೌನ್ಸ್ ಪ್ರಕರಣಗಳನ್ನು ಎದುರಿಸಲು ಈ ಸಮಿತಿಯು ತನ್ನ ಸಲಹೆಗಳನ್ನು ನೀಡುತ್ತದೆ.
Hindu Marriage Act - ಸುಪ್ರೀಂ ಕೋರ್ಟ್ ಮಂಗಳವಾರ, ಪ್ರಕರಣದ ವಿಚಾರಣೆಯೊಂದರ ಸಮಯದಲ್ಲಿ, ಹೆಂಡತಿ ತನ್ನ ಗಂಡನ ಗುಲಾಮ ಅಥವಾ (Wife Is Not Property Or Chattel) ಅಲ್ಲ ಎಂದು ಹೇಳಿದೆ.
ಒಟ್ಟಿಗೆ ವಾಸಿಸುವ ದಂಪತಿಗಳ ನಡುವಿನ ಒಮ್ಮತದ ಲೈಂಗಿಕತೆಯ ವಿಷಯವನ್ನು ಪರಿಶೀಲಿಸುವಾಗ, ಅವರ ನಡುವಿನ ಲೈಂಗಿಕ ಸಂಭೋಗವನ್ನು 'ಅತ್ಯಾಚಾರ' ಎಂದು ಕರೆಯಬಹುದೇ ಎಂದು ಸುಪ್ರೀಂ ಪ್ರಶ್ನಿಸಿದೆ.
How to open Locker in Bank: ಒಂದು ವೇಳೆ ನೀವೂ ಕೂಡ ಬ್ಯಾಂಕ್ ನಲ್ಲಿ ಲಾಕರ್ ಹೊಂದಿಲ್ಲ ಎಂದಾದಲ್ಲಿ ಅದಕ್ಕಾಗಿ ಇಂದೇ ಅಪ್ಲೈ ಮಾಡಿ. ಏಕೆಂದರೆ Locker Facility ಕುರಿತು ಶೀಘ್ರದಲ್ಲಿಯೇ ಮಹತ್ವದ ನಿರ್ಣಯವೊಂದು ಹೊರಬೀಳುವ ಸಾಧ್ಯತೆ ಇದೆ.
WhatsApp Privacy Policy:ಜನರ ಸಂದೇಶಗಳನ್ನು ಓದಲಾಗುವುದಿಲ್ಲ ಎಂದು ಲಿಖಿತವಾಗಿ ನೀಡುವಂತೆ ಸುಪ್ರೀಂ ಕೋರ್ಟ್ ವಾಟ್ಸಾಪ್ / ಫೇಸ್ಬುಕ್ಗೆ ಸೂಚಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಮುಂದಿನ ನಾಲ್ಕು ವಾರಗಳ ನಂತರ ನಡೆಯಲಿದೆ. ಯುರೋಪ್ ಮತ್ತು ಭಾರತಕ್ಕೆ ವಿಭಿನ್ನ ಮಾಪಕಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಅರ್ಜಿಯಲ್ಲಿ ಅರ್ಜಿದಾರದು ವಾದಿಸಿದ್ದರು. ಭಾರತದಲ್ಲಿ ಡೇಟಾ ಸಂರಕ್ಷಣಾ ಕಾಯ್ದೆ ಬರುವ ಮೊದಲೇ ವಾಟ್ಸ್ ಆಪ್ ತನ್ನ ನೂತನ ನೀತಿ ಪ್ರಕಟಿಸಿದೆ ಎಂದು ಅರ್ಜಿದಾರರು ಸುಪ್ರೀಂಗೆ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.