ಕಳೆದ ತಿಂಗಳು ಕಂಪನಿಯ ಕಾನೂನು ನ್ಯಾಯಮಂಡಳಿ ಎನ್ಸಿಎಲ್ಎಟಿ ಈ ಗುಂಪಿನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಸೈರಸ್ ಮಿಸ್ತ್ರಿ ಅವರನ್ನು ಪುನಃಸ್ಥಾಪಿಸುವುದನ್ನು ಪ್ರಶ್ನಿಸಿ ಟಾಟಾ ಸನ್ಸ್ ಇಂದು ಸುಪ್ರೀಂಕೋರ್ಟ್ಗೆ ಮೊರೆಹೋಗಿದೆ
ನಿರ್ಭಯಾ ಪ್ರಕರಣದ ತೀರ್ಪಿನಲ್ಲಿ ಆಗುತ್ತಿರುವ ವಿಳಂಬದ ಹಿನ್ನೆಲೆ ಮಾತನಾಡಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ದೆ, ದೇಶಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ಅಪರಾಧಗಳ ಕುರಿತು ಚಿಂತನೆ ನಡೆಸಿದ್ದಾರೆ.
ನಿರ್ಭಯಾ ಪ್ರಕರಣದಲ್ಲಿ ದೋಷಿ ಅಕ್ಷಯ್ ಸಿಂಗ್ ದಾಖಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಅಕ್ಷಯಗೂ ಸಹ ಗಲ್ಲು ಶಿಕ್ಷೆ ಖಾಯಂಗೊಳಿಸಿ ತೀರ್ಪು ಪ್ರಕಟಿಸಿದೆ.
ಅನೇಕ ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದು, ಅಂತಹ ರಾಜ್ಯಗಳಲ್ಲಿ ವಾಸಿಸುವ ಹಿಂದೂಗಳಿಗೆ ಅಲ್ಪಸಂಖ್ಯಾತರಿಗೆ ನೀಡಲಾಗುವ ಪ್ರಯೋಜನಗಳನ್ನು ನೀಡಬೇಕು ಎಂದು ಅರ್ಜಿದಾರರು ಮನವಿ ಸಲ್ಲಿಸಿದ್ದರು.
ಹೈದ್ರಾಬಾದ್ ಎನ್ಕೌಂಟರ್ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಆಯೋಗವೊಂದನ್ನು ರಚಿಸಿದೆ. ನಿವೃತ್ತ ನ್ಯಾಯಮೂರ್ತಿ ವಿ.ಎಸ್. ಸಿರ್ಪುರ್ಕರ್ ಅವರ ಅಧ್ಯಕ್ಷತೆಯಲ್ಲಿ ಸರ್ವೋಚ್ಛ ನ್ಯಾಯಾಲಯ ಈ ಆಯೋಗ ರಚಿಸಿದೆ.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದು ಹೊರಬಂದಿರುವ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, ಸರ್ಕಾರಕ್ಕೆ ನನ್ನ ದನಿ ಅಡಗಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಪ್ರಜಾಪ್ರಭುತ್ವದಲ್ಲಿ ರಾಜಕೀಯ ಪಕ್ಷಗಳ ನಡುವಿನ ಮೈತ್ರಿಗಳಿಗೆ ನಿರ್ಬಂಧಗಳಿಲ್ಲ, ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್ಸಿಪಿ ಮತ್ತು ಕಾಂಗ್ರೆಸ್ ನಡುವಿನ ಮತದಾನದ ನಂತರದ ಮೈತ್ರಿಯನ್ನು ಪ್ರಶ್ನಿಸಿದ ಹಿಂದೂ ಮಹಾಸಭಾ ಮುಖಂಡರ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಬುಧವಾರ ಸಂಜೆ 5 ಗಂಟೆಗೂ ಮೊದಲು ವಿಧಾನಸಭೆಯಲ್ಲಿ ತಮ್ಮ ಬಹುಮತವನ್ನು ಸಾಬೀತುಪಡಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಆದೇಶಿಸಿ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ.
ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳ ಕುರಿತು ಸೋಮವಾರ ಎರಡೂ ಕಡೆಯ ವಾದ-ವಿವಾದ ಆಲಿಸಿದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಮಹಾರಾಷ್ಟ್ರ ಸರ್ಕಾರದ ಬಿಕ್ಕಟ್ಟಿಗೆ ಸಂಬಂಧಿಸಿದ ಪ್ರಕರಣದ ತನ್ನ ಆದೇಶವನ್ನು ಇಂದು ಬೆಳಿಗ್ಗೆ 10.30 ಕ್ಕೆ ಕಾಯ್ದಿರಿಸಿತ್ತು. ತೀರ್ಪು ಓದಿದ ನ್ಯಾಯಮೂರ್ತಿ ಎನ್.ವಿ.ರಮಣ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಿಕೊಳ್ಳಬೇಕು. ಹಾಗಾಗಿ ಆದಷ್ಟು ಬೇಗ ಬಹುಮತ ಸಾಬೀತು ಪಡಿಸಬೇಕು ಎಂಬ ಮಹತ್ವದ ಆದೇಶ ಹೊರಡಿಸಿದರು.
ರಾತ್ರೋರಾತ್ರಿ ಏನೆಲ್ಲಾ ಬೆಳವಣಿಗೆಗಳಾಗಬಹುದು. ನಸುಕಿನಲ್ಲೇ ಸರ್ಕಾರವೊಂದು ಕಣ್ಣು ಬಿಡಬಹುದು. ಚುನಾವಣಾ ಪೂರ್ವ ಮೈತ್ರಿ ಪುಡಿಪುಡಿಯಾಗಬಹುದು. ಚುನಾವಣೋತ್ತರ ಮೈತ್ರಿ ಹತ್ತಿಕ್ಕಲು ಷಡ್ಯಂತ್ರ ನಡೆಯಬಹುದು. ಈ ಎಲ್ಲಾ ಚಮತ್ಕಾರಗಳ ನಡುವೆಯೂ ದೇಶದ ಜನ ನಿರೀಕ್ಷೆ ಇಟ್ಟುಕೊಂಡಿರುವುದು ನ್ಯಾಯಾಂಗದ ಮೇಲೆ.
ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳ ಕುರಿತು ಎರಡನೇ ದಿನ ಸುಪ್ರೀಂ ಕೋರ್ಟ್ನಲ್ಲಿ ವಾದ-ವಿವಾದ ಮಂಡನೆಯಾಯಿತು. ಅರ್ಜಿ ವಿಚಾರಣೆಯನ್ನು ಆಲಿಸಿದ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠವು ನಾಳೆಗೆ ತೀರ್ಪು ಕಾಯ್ದಿರಿಸಿದೆ.
ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಹೊಸ ಸರ್ಕಾರ ರಚಿಸುವುದರ ವಿರುದ್ಧ ಶಿವಸೇನೆ, ಕಾಂಗ್ರೆಸ್ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ. ಇದೇ ವೇಳೆ ಮಹಾರಾಷ್ಟ್ರ ಸರ್ಕಾರ ರಚಿಸಲು ಬಿಜೆಪಿಯನ್ನು ಆಹ್ವಾನಿಸುವ ರಾಜ್ಯಪಾಲರ ಪತ್ರವನ್ನು ತೋರಿಸಿ ಎಂದು ಸುಪ್ರೀಂಕೋರ್ಟ್ ಕೇಂದ್ರಕ್ಕೆ ಸೂಚಿಸಿದೆ.
ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ನಿಯಮವನ್ನು ಕೊನೆಗೊಳಿಸುವ ಕೇಂದ್ರದ ಕ್ರಮ ಮತ್ತು ರಾಜ್ಯ ಸರ್ಕಾರ ರಚನೆಗೆ ದೇವೇಂದ್ರ ಫಡ್ನವೀಸ್ ಅವರನ್ನು ಆಹ್ವಾನಿಸುವ ರಾಜ್ಯಪಾಲರ ಕ್ರಮದ ವಿರುದ್ಧ ಶಿವಸೇನೆ, ಕಾಂಗ್ರೆಸ್ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ಬೆಳಿಗ್ಗೆ ವಿಚಾರಣೆ ನಡೆಸಲಿದೆ.
370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕಾಶ್ಮೀರದಲ್ಲಿ ವಿಧಿಸಲಾಗಿರುವ ನಿರ್ಬಂಧಗಳ ಕುರಿತು ಎದ್ದಿರುವ ಪ್ರತಿಯೊಂದು ಪ್ರಶ್ನೆಗೆ ಸ್ಪಂದಿಸಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ಗುರುವಾರ ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.