ನ್ಯಾಯಮೂರ್ತಿ ರಂಜನ್ ಗೊಗೊಯ್ ಮುಖ್ಯ ನ್ಯಾಯಮೂರ್ತಿಯಾಗಿ, ಅವರು ತಮ್ಮ ಅಧಿಕೃತ ಬಂಗಲೆ 5 ಕೃಷ್ಣ ಮೆನನ್ ಮಾರ್ಗ(5 Krishna Menon Marg)ದಲ್ಲಿ ವಾಸಿಸುತ್ತಿದ್ದರು. ಅವರು ನವೆಂಬರ್ 17 ರಂದು ನಿವೃತ್ತರಾದರು.
ನಿರ್ಗಮಿತ ಸಿಜೆಐ ರಂಜನ್ ಗೊಗೊಯ್ ಅವರು ಅಕ್ಟೋಬರ್ 18 ರಂದು ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಅವರ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ನ್ಯಾಯಮೂರ್ತಿ ಬೊಬ್ಡೆ ಸುಪ್ರೀಂ ಕೋರ್ಟ್ನ ಎರಡನೇ ಹಿರಿಯ-ನ್ಯಾಯಾಧೀಶರು. ಸಂಪ್ರದಾಯದ ಪ್ರಕಾರ, ಮುಂದಿನ ಮುಖ್ಯ ನ್ಯಾಯಮೂರ್ತಿ ಅವರ ಉತ್ತರಾಧಿಕಾರಿಯ ಹೆಸರನ್ನು ಸರ್ಕಾರಕ್ಕೆ ಬರೆದು ಶಿಫಾರಸು ಮಾಡಬೇಕು.
ಅಯೋಧ್ಯೆ ದೇವಾಲಯ-ಮಸೀದಿ ವಿವಾದ ಪ್ರಕರಣದಲ್ಲಿ ತನ್ನ ಐತಿಹಾಸಿಕ ತೀರ್ಪನ್ನು ಮರುಪರಿಶೀಲಿಸುವಂತೆ ಸುಪ್ರೀಂಕೋರ್ಟ್ಗೆ ಕೋರಲಾಗುವುದು ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ, ಒಂದು ತಿಂಗಳೊಳಗೆ ಪರಿಶೀಲನಾ ಅರ್ಜಿ ಸಲ್ಲಿಸಲಾಗುವುದು ಎಂದು ಪ್ರಕಟಿಸಿದೆ.
ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಾಯಾನಂದ್ ಅವರು ಮೇಲೆ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದ ಆರೋಪಗಳನ್ನು ಹೊರಿಸಿದ್ದ ಶಹಜಹಾನಪುರ ಕಾನೂನು ವಿದ್ಯಾರ್ಥಿನಿ ದಾಖಲಿಸಿದ ಹೇಳಿಕೆಯ ಪ್ರಮಾಣೀಕೃತ ನಕಲನ್ನು ಪಡೆಯುವ ಅಲಹಾಬಾದ್ ಹೈಕೋರ್ಟ್ನ ಆದೇಶಕ್ಕೆ ಸುಪ್ರೀಂ ಕೋರ್ಟ್ ಶನಿವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಕನ್ನಡಿಗ ಹಾಗೂ ಸುಪ್ರೀಂಕೋರ್ಟ್ ವಕೀಲರಾದ ಸಂಜಯ್ ಹೆಗ್ಡೆ ಅವರ ಖಾತೆಯನ್ನು ಅಮಾನತುಗೊಳಿಸಿದ್ದಕ್ಕಾಗಿ ಈಗ ಭಾರತದಲ್ಲಿ ಅನೇಕರು ಟ್ವಿಟ್ಟರ್ ನ್ನು ಬಹಿಷ್ಕರಿಸುತ್ತಿದ್ದಾರೆ. ಅದರ ಬದಲಾಗಿ ಜರ್ಮನಿಯ ಮೂಲದ ಓಪನ್ ಸೋರ್ಸ್ ಸೋಷಿಯಲ್ ನೆಟ್ವರ್ಕ್ ಸೈಟ್ ಮಾಸ್ಟೊಡಾನ್ ಬಳಸಲು ಪ್ರಾರಂಭಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ತನ್ನ ಡಿಸೆಂಬರ್ 14, 2018 ರ ವಿರುದ್ಧ ಸಲ್ಲಿಸಿದ ಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಿ, ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ರಫೇಲ್ ಫೈಟರ್ ಜೆಟ್ಗಳ ಖರೀದಿಯಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ.
ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶದ ನೀಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರವಾಗಿ ತೀರ್ಪು ನೀಡಿದ ಸುಪ್ರೀಂಕೋರ್ಟ್ ವಿಸ್ತೃತ ಏಳು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸುವುದಾಗಿ ಹೇಳಿದೆ.
ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನಡಿಯಲ್ಲಿ ಮಸೀದಿ ನಿರ್ಮಿಸಲು ಐದು ಎಕರೆ ಭೂಮಿಯನ್ನು ಅಯೋಧ್ಯೆಯಲ್ಲಿ ಸ್ವಾಧೀನಪಡಿಸಿಕೊಂಡಿರುವ 67 ಎಕರೆ ಭೂಮಿಯಲ್ಲಿರಬೇಕು, ಈ ಪ್ರಕರಣದ ಪ್ರಮುಖ ದಾವೆದಾರ ಇಕ್ಬಾಲ್ ಅನ್ಸಾರಿ ಮತ್ತು ಹಲವಾರು ಸ್ಥಳೀಯ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.
ಮಾಹಿತಿ ಹಕ್ಕು (ಆರ್ಟಿಐ) ಕಾಯ್ದೆಯ ವ್ಯಾಪ್ತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕಚೇರಿಯನ್ನು ತರುವ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಲಿದೆ.
ವಿಧಾನಸಭೆ ಚುನಾವಣಾ ಫಲಿತಾಂಶ ಮುಗಿದ ಸುಮಾರು 20 ದಿನಗಳ ನಂತರ ಯಾವುದೇ ಸರ್ಕಾರ ರಚನೆಯಾಗದಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟವು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿಗಳ ಆಡಳಿತಕ್ಕೆ ಶಿಫಾರಸು ಮಾಡಿದೆ ಎಂಬ ವರದಿಗಳ ನಂತರ ಶಿವಸೇನೆ ಇಂದು ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದೆ.
ವಿಧಾನಸಭೆ ಚುನಾವಣಾ ಫಲಿತಾಂಶ ಮುಗಿದ ಸುಮಾರು 20 ದಿನಗಳ ನಂತರ ಯಾವುದೇ ಸರ್ಕಾರ ರಚನೆಯಾಗದಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟವು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿಗಳ ಆಡಳಿತಕ್ಕೆ ಶಿಫಾರಸು ಮಾಡಿದೆ ಎಂಬ ವರದಿಗಳ ನಂತರ ಶಿವಸೇನೆ ಇಂದು ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದೆ.
ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲು ಐದು ಎಕರೆ ಭೂಮಿಯನ್ನು ಸ್ವೀಕರಿಸಬೇಕೆ ಎಂಬ ಬಗ್ಗೆ ನವೆಂಬರ್ 26 ರಂದು ನಡೆಯುವ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸುನ್ನಿ ಕೇಂದ್ರ ವಕ್ಫ್ ಮಂಡಳಿ ಭಾನುವಾರ ತಿಳಿಸಿದೆ.
ಶತಮಾನಗಳಷ್ಟು ಹಳೆಯದಾದ ಅಯೋಧ್ಯೆಯ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ನ ಐತಿಹಾಸಿಕ ತೀರ್ಪಿನ ಕೆಲವೇ ಗಂಟೆಗಳ ನಂತರ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ನವ ಭಾರತದಲ್ಲಿ ಭಯ, ಕಹಿ ಮತ್ತು ನಕಾರಾತ್ಮಕತೆಗೆ ಸ್ಥಾನವಿಲ್ಲ ಎಂದು ಹೇಳಿದರು.
ರಾಜಕೀಯವಾಗಿ ಮತ್ತು ಧಾರ್ಮಿಕವಾಗಿ ದಶಕಗಳಷ್ಟು ಹಳೆಯದಾದ ಅಯೋಧ್ಯೆಯಲ್ಲಿನ ದೇವಾಲಯ-ಮಸೀದಿ ಭೂ ವಿವಾದದ ವಿಚಾರಣೆಯು ಸುಪ್ರೀಂಕೋರ್ಟ್ನ ಇತಿಹಾಸದಲ್ಲಿ 40 ದಿನಗಳ ಕಾಲ ನಡೆದ ಎರಡನೇ ಅತಿ ಸುಧೀರ್ಘ ವಿಚಾರಣೆಯಾಗಿದೆ.
ಅಯೋಧ್ಯೆಯಲ್ಲಿರುವ ವಿವಾದಿತ ಸ್ಥಳವನ್ನು ಷರತ್ತುಗಳಿಗೆ ಒಳಪಟ್ಟು ದೇವಾಲಯದ ನಿರ್ಮಾಣದ ಮೇಲ್ವಿಚಾರಣೆಯನ್ನು ಟ್ರಸ್ಟ್ಗೆ ಹಸ್ತಾಂತರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿದೆ.
ಅಯೋಧ್ಯ ಪ್ರಕರಣದಲ್ಲಿ ಶನಿವಾರ ಸುಪ್ರೀಂ ಕೋರ್ಟ್ ರಾಮ ಮಂದಿರದ ಪರವಾಗಿ ತೀರ್ಪು ನೀಡುದ್ದು, ಮೂರು ತಿಂಗಳೊಳಗೆ ನಿರ್ಮಾಣದ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ. ಕೇಂದ್ರ ಸರ್ಕಾರವು ಟ್ರಸ್ಟ್ ನಿರ್ಮಿಸುವ ಮೂಲಕ ದೇವಾಲಯವನ್ನು ನಿರ್ಮಿಸಬೇಕು ಎಂದು ನ್ಯಾಯಾಲಯ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.