ಸುಪ್ರೀಂಕೋರ್ಟ್ ನೀಡಿರುವ ಅಯೋಧ್ಯೆಯ ತೀರ್ಪುನ್ನು ಪ್ರಧಾನಿ ಮೋದಿ ಸ್ವಾಗತಿಸಿ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಜನರ ನಂಬಿಕೆಯನ್ನು ಪುನರುಚ್ಚರಿಸುತ್ತದೆ' ಎಂದು ಹೇಳಿದ್ದಾರೆ. ಇದೆ ವೇಳೆ ಅವರು ಜನರಲ್ಲಿ ಶಾಂತಿ ಮತ್ತು ಐಕ್ಯತೆಗಾಗಿ ಮನವಿ ಮಾಡಿದ್ದಾರೆ.
ಅಯೋಧ್ಯೆ ಭೂ ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಂದು (ನವೆಂಬರ್ 9) ಬೆಳಿಗ್ಗೆ 10: 30 ಕ್ಕೆ ತೀರ್ಪು ನೀಡಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐದು ನ್ಯಾಯಾಧೀಶರ ಪೀಠವು ತೀರ್ಪು ನೀಡಲಿದೆ.
ಅಯೋಧ್ಯೆ ಪ್ರಕರಣಕ್ಕೆ(Ayodhya case) ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು ಇಂದು ಬೆಳಿಗ್ಗೆ 10: 30 ಕ್ಕೆ ತೀರ್ಪು ನೀಡಲಿದೆ. ತೀರ್ಪು ಬರುವ ಮೊದಲು ಪ್ರಧಾನಿ ನರೇಂದ್ರ ಮೋದಿ (Narendra modi) ಮೂರು ಸರಣಿ ಟ್ವೀಟ್ಗಳನ್ನು ಮಾಡಿದ್ದು, ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂದು ದೇಶವಾಸಿಗಳಿಗೆ ಮನವಿ ಮಾಡಿದ್ದಾರೆ. 'ಅಯೋಧ್ಯೆ ಕುರಿತು ಶನಿವಾರ ಸುಪ್ರೀಂ ಕೋರ್ಟ್ನ(Supreme Court) ತೀರ್ಪು ಬರಲಿದೆ' ಎಂದು ಪಿಎಂ ಮೋದಿ ಮೊದಲ ಟ್ವೀಟ್ನಲ್ಲಿ ಬರೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ನಿರಂತರವಾಗಿ ವಿಚಾರಣೆ ನಡೆಸುತ್ತಿತ್ತು, ಇಡೀ ದೇಶವು ಕುತೂಹಲದಿಂದ ಇದರ ತೀರ್ಪಿಗಾಗಿ ಎದುರು ನೋಡುತ್ತಿತ್ತು. ಈ ಸಮಯದಲ್ಲಿ, ಸಮಾಜದ ಎಲ್ಲಾ ವರ್ಗದವರು ಸದ್ಭಾವನೆಯ ವಾತಾವರಣವನ್ನು
ಅಯೋಧ್ಯೆ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸುವ ಮೊದಲು, ಶಾಂತಿ ಮತ್ತು ಸೌಹಾರ್ದತೆಯ ವಾತಾವರಣವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಚಿವರಿಗೆ ಸಲಹೆ ನೀಡಿದ್ದಾರೆ.
ತೀವ್ರ ವಾಯುಮಾಲಿನ್ಯವನ್ನು ಎದುರಿಸುತ್ತಿರುವ ದೆಹಲಿ-ಎನ್ಸಿಆರ್ ಪ್ರದೇಶದ ಕೋಟ್ಯಂತರ ಜನರ ಜೀವನದ ಪ್ರಶ್ನೆಯಾಗಿದೆ ಮತ್ತು ಅದನ್ನು ತಡೆಯುವಲ್ಲಿ ವಿಫಲವಾದ ಕಾರಣ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕಾಗಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.
ಈ ವರ್ಷದ ಫೆಬ್ರವರಿಯಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ, ಒಡಿಶಾ, ತೆಲಂಗಾಣ, ಪಶ್ಚಿಮ ಬಂಗಾಳ, ಗುಜರಾತ್, ಕೇರಳ, ಕರ್ನಾಟಕ ಮತ್ತು ಕೇಂದ್ರ ಸರ್ಕಾರಕ್ಕೆ ಖಾಲಿ ಇರುವ ಮುಖ್ಯ ಮತ್ತು ರಾಜ್ಯ ಮಾಹಿತಿ ಆಯುಕ್ತರ ಹುದ್ದೆಗಳನ್ನು ಆರು ತಿಂಗಳಲ್ಲಿ ಭರ್ತಿ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ಪಿ.ಚಿದಂಬರಂ ಅವರು ಪ್ರಕರಣದ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವರಿಗೆ ನೀಡಲಾಗಿರುವ ಜಾಮೀನನ್ನು ರದ್ದುಪಡಿಸುವಂತೆ ಸಿಬಿಐ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದೆ.
370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಿರ್ಬಂಧ ಇನ್ನೂ ಎಷ್ಟು ದಿನಗಳ ಕಾಲ ಮುಂದುವರೆಯಲಿದೆ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.
ನ್ಯಾಯಮೂರ್ತಿ ಆರ್.ಬಾನುಮತಿ, ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮತ್ತು ನ್ಯಾಯಮೂರ್ತಿ ಹೃಷಿಕೇಶ ರಾಯ್ ಅವರಿದ್ದ ತ್ರಿಸದಸ್ಯ ಪೀಠ ಜಾಮೀನು ನೀಡಿ ಆದೇಶ ಹೊರಡಿಸಿದ್ದು, 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮತ್ತು ಪ್ರತಿ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಷರತ್ತು ವಿಧಿಸಿದೆ.
ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ದ್ವೇಷದ ಮಾತು, ನಕಲಿ ಸುದ್ದಿ, ಮಾನಹಾನಿ ಬಗೆಗಿನ ಪೋಸ್ಟ್ಗಳು ಮತ್ತು ರಾಷ್ಟ್ರ ವಿರೋಧಿ ಚಟುವಟಿಕೆ ಕಾರ್ಯಗಳ ನಿಯಂತ್ರಣಕ್ಕೆ ನಿಯಮಗಳನ್ನು ರೂಪಿಸಲು ಕೇಂದ್ರ ಸರ್ಕಾರ ಸುಪ್ರೀಂಕೋರ್ಟಗೆ ಮೂರು ತಿಂಗಳ ಹೆಚ್ಚಿನ ಕಾಲಾವಕಾಶ ಕೇಳಿದೆ.
ನ್ಯಾಯಾಲಯದ ಆದೇಶದ ಮೇರೆಗೆ ಆಗಸ್ಟ್ನಲ್ಲಿ ಗುರು ರವಿದಾಸ್ ದೇವಾಲಯವನ್ನು ನೆಲಸಮಗೊಳಿಸಿದ ಸ್ಥಳದಲ್ಲಿ 200 ಚದರ ಮೀಟರ್ ವಿಸ್ತೀರ್ಣ ಭೂಮಿಯನ್ನು ಹಸ್ತಾಂತರಿಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಶುಕ್ರವಾರದಂದು ಸುಪ್ರೀಂಕೋರ್ಟ್ಗೆ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.