ವಿವಾದಿತ ರಾಮಜನ್ಮ ಭೂಮಿ ಪ್ರಕರಣ ಕುರಿತಂತೆ ಅಂತಿಮ ಗಡುವು ನೀಡಿರುವ ಸುಪ್ರೀಂಕೋರ್ಟ್, ಅಗತ್ಯವಿದ್ದರೆ ಪ್ರತಿದಿನ ಮತ್ತು ಪ್ರತಿ ಶನಿವಾರ ಒಂದು ಗಂಟೆ ಹೆಚ್ಚುವರಿ ವಿಚಾರಣೆ ನಡೆಸಲು ಸಿದ್ಧ ಎಂದು ತಿಳಿಸಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಬಂಧನದ ನಿಬಂಧನೆಗಳನ್ನು ವಾಸ್ತವಿಕವಾಗಿ ದುರ್ಬಲಗೊಳಿಸಿದ ತನ್ನ ಮಾರ್ಚ್ 2018 ರ ತೀರ್ಪಿನ ಪರಿಶೀಲನೆಗಾಗಿ ಕೇಂದ್ರದ ಮನವಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ಉಲ್ಲೇಖಿಸಿದೆ.
ಸುಪ್ರೀಂ ಕೋರ್ಟ್ ಪ್ರಕಾರ, ಇಲ್ತಿಜಾ ಅವರು ಶ್ರೀನಗರಕ್ಕೆ ಯಾವಾಗ ಬೇಕಾದರೂ ಭೇಟಿ ನೀಡಬಹುದು ಮತ್ತು ಆಡಳಿತದ ಅನುಮತಿಯ ನಂತರ ತಾಯಿ ಮೆಹಬೂಬಾ ಮುಫ್ತಿ ಅವರನ್ನು ಭೇಟಿ ಮಾಡಬಹುದು. ಕಳೆದ ವಾರದ ಆರಂಭದಲ್ಲಿ, ಮೆಹಬೂಬಾ ಮುಫ್ತಿ ಅವರ ತಾಯಿ ಮತ್ತು ಸಹೋದರಿ ಅವರನ್ನು ಭೇಟಿಯಾಗಿದ್ದರು.
ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ದೊಡ್ಡ ಹಿನ್ನಡೆಯಾಗಿ, ಜಾರಿ ನಿರ್ದೇಶನಾಲಯ (ಇಡಿ) ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ 370 ನೇ ವಿಧಿಯನ್ನು ರದ್ದುಪಡಿಸುವ ವಿಷಯದ ಕುರಿತು ಮನವಿಗಳನ್ನು ಸಂವಿಧಾನ ಪೀಠವು ಆಲಿಸಲಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ನಿರ್ಧರಿಸಿದೆ.
ರಾಮ್ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದ 10 ನೇ ದಿನದ ಸುಪ್ರೀಂ ಕೋರ್ಟ್ ವಿಚಾರಣೆ ಗುರುವಾರ ಪ್ರಾರಂಭವಾಗಿದೆ, ವಿವಾದಿತ ಸ್ಥಳದಲ್ಲಿ ಪೂಜಿಸುವ ಹಕ್ಕುಗಳನ್ನು ಜಾರಿಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಕುರಿತು ಕೋರ್ಟ್ ವಿಚಾರಣೆ ನಡೆಸುತ್ತಿದೆ.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ಬಂಧನಕ್ಕೆ ತಡೆಯಾಜ್ಞೆ ನೀಡಲು ಭಾರತದ ಮುಖ್ಯ ನ್ಯಾಯಮೂರ್ತಿ ಬುಧವಾರದಂದು ನಿರಾಕರಿಸಿದ್ದಾರೆ.ಈಗ ಬಂಧನದ ವಿರುದ್ಧ ರಕ್ಷಣೆ ನೀಡುವಂತೆ ಚಿದಂಬರಂ ಅವರ ಮನವಿಯ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಶುಕ್ರವಾರಕ್ಕೆ ಮುಂದೂಡಲಾಗಿದೆ.
ಫೇಸ್ಬುಕ್ ಅನ್ನು ಆಧಾರ್ಗೆ ಲಿಂಕ್ ಮಾಡುವ ವಿಷಯ ಪ್ರಸ್ತುತ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್ಗಳಲ್ಲಿ ಬಾಕಿ ಇದೆ. ಫೇಸ್ಬುಕ್ ಖಾತೆಯನ್ನು ಆಧಾರ್ಗೆ ಲಿಂಕ್ ಮಾದಬೇಕು ಎಂಬ ನಿಯಮ ಫೇಸ್ಬುಕ್ ಪರವಾಗಿ ನೀಡಲಾಗಿಲ್ಲ.
ಮುಂದಿನ ಕೆಲವೇ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಸುಧಾರಿಸುತ್ತದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.ಜಮ್ಮು ಮತ್ತು ಕಾಶ್ಮೀರದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಸುಧಾರಿಸುತ್ತಿದೆ. ನಿರ್ಬಂಧಗಳನ್ನು ಕ್ರಮೇಣ ತೆಗೆದು ಹಾಕಲಾಗುತ್ತಿದೆ ಎಂದು ಹೇಳಿದೆ.10 ದಿನಗಳಿಗಿಂತ ಹೆಚ್ಚು ಕಾಲ ಕಣಿವೆಯಲ್ಲಿನ ನಿರ್ಬಂಧಗಳನ್ನು ತಕ್ಷಣವೇ ತೆಗೆದುಹಾಕುವಂತೆ ಕೋರಿ ಸಲ್ಲಿಸಿದ ಅರ್ಜಿಯೊಂದಕ್ಕೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದೆ.
ಅಯೋಧ್ಯೆ ಭಗವಾನ್ ರಾಮನ ಜನ್ಮಸ್ಥಳ ಎಂಬುದು ಹಿಂದೂಗಳ ನಂಬಿಕೆಯಾಗಿದೆ ಮತ್ತು ಅದು ಎಷ್ಟು ತರ್ಕಬದ್ಧವಾಗಿದೆ ಎಂಬುದನ್ನು ಒರೆಗೆ ಹಚ್ಚಲು ಹೋಗಬಾರದು ಎಂದು ರಾಮ್ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದ ವಿಚಾರಣೆ ವೇಳೆ ರಾಮ್ ಲಲ್ಲಾ ವಿರಾಜ್ಮನ್ ಸುಪ್ರೀಂಕೋರ್ಟ್ ಗೆ ಸಲಹೆ ನೀಡಿದೆ.
ಅಯೋಧ್ಯೆಯಲ್ಲಿರುವ ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ಪ್ರತಿದಿನವೂ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಸುನ್ನಿ ವಕ್ಫ್ ಮಂಡಳಿ ಶುಕ್ರವಾರದಂದು ಸುಪ್ರೀಂಕೋರ್ಟ್ಗೆ ತಿಳಿಸಿದೆ. ಈ ವಿಷಯವನ್ನು ಈ ರೀತಿ ತ್ವರಿತಗೊಳಿಸಬಾರದು ಎಂದು ಸುನ್ನಿ ವಕ್ಫ್ ಮಂಡಳಿ ಮನವಿ ಮಾಡಿಕೊಂಡಿದೆ.
ಪ್ರಸ್ತುತ ಕಾಲಘಟ್ಟವು ಕೆಲವು ವ್ಯಕ್ತಿ ಮತ್ತು ಗುಂಪುಗಳಿಂದಾಗಿ ಯುದ್ಧೋನ್ಮಾದಕ್ಕೆ ಸಾಕ್ಷಿಯಾಗುತ್ತಿದೆ ಎಂದು ಭಾರತದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಕಳವಳ ವ್ಯಕ್ತ ಪಡಿಸಿದರು. ಆದರೆ ಇಂತಹ ಬೆಳವಣಿಗೆಗಳು ದೇಶದ ಕಾನೂನು ಸಂಸ್ಥೆಗಳ ಶಕ್ತಿಯುತ ಸಂಪ್ರದಾಯಗಳಿಂದ ಸೋಲಿಸಲ್ಪಡುತ್ತವೆ ಎನ್ನುವ ಆಶಾವಾದವನ್ನು ಅವರು ವ್ಯಕ್ತಪಡಿಸಿದರು.
ಅಯೋಧ್ಯೆ ವಿವಾದ ಪ್ರಕರಣದಲ್ಲಿ ಮೂವರು ಸದಸ್ಯರ ಸಮಿತಿಯ ಸಂಧಾನ ಪ್ರಕ್ರಿಯೆ ವಿಫಲವಾಗಿದೆ ಎಂದು ಸುಪ್ರೀಕೋರ್ಟ್ ತಿಳಿಸಿದ್ದು, ಈ ಹಿನ್ನಲೆಯಲ್ಲಿ ಆಗಸ್ಟ್ 6 ರಂದು ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದದ ವಿಚಾರಣೆಯನ್ನು ಪ್ರಾರಂಭಿಸುವುದಾಗಿ ಸುಪ್ರೀಂಕೋರ್ಟ್ನ ಐದು ನ್ಯಾಯಾಧೀಶರ ನ್ಯಾಯಪೀಠ ಶುಕ್ರವಾರ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.