ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ನಾಲ್ವರು ನ್ಯಾಯಾಧೀಶರ ಹೆಸರನ್ನು ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.ಸದ್ಯ 27 ನ್ಯಾಯಾಧೀಶರನ್ನು ಒಳಗೊಂಡಿರುವ ಸುಪ್ರೀಂಕೋರ್ಟ್ ಈ ನಾಲ್ವರ ನೇಮಕಕ್ಕೆ ಅಧಿಕೃತ ಮುದ್ರೆ ಬಿದ್ದರೆ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ 31 ಸದಸ್ಯರನ್ನು ಒಳಗೊಳ್ಳಲಿದೆ ಎನ್ನಲಾಗಿದೆ.
ಇವಿಎಂ ಮತಗಳ ಜೊತೆಗೆ ಶೇ.100 ವಿವಿಪ್ಯಾಟ್ ಹೊಂದಾಣಿಕೆ ಕೋರಿ ತಂತ್ರಜ್ಞರ ತಂಡವೊಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸರ್ವೋಚ್ಚ ನ್ಯಾಯಾಲಯದ ರಜಾ ಕಾಲದ ಪೀಠ ಅರ್ಜಿಯನ್ನು ವಜಾಗೊಳಿಸಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ(ಎಸ್ಪಿ)ದ ವರಿಷ್ಠ ನಾಯಕ ಮುಲಾಯಂ ಸಿಂಗ್ ಯಾದವ್ ಮತ್ತು ಎಸ್ಪಿ ನಾಯಕ ಅಖಿಲೇಶ್ ಯಾದವ್ ಅವರಿಗ ಸಿಬಿಐ ಕ್ಲೀನ್ ಚಿಟ್ ನೀಡಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಅವರ ಆಕ್ಷೇಪಣಾ ಚಿತ್ರವನ್ನು ಶೇರ್ ಮಾಡಿರುವ ಹಿನ್ನಲೆಯಲ್ಲಿ ಬಂಧಿಸಲಾಗಿದ್ದ ಬಿಜೆಪಿ ನಾಯಕಿ ಪ್ರಿಯಾಂಕಾ ಶರ್ಮಾ ಅವರಿಗೆ ಸುಪ್ರೀಂಕೋರ್ಟ್ ಈಗ ಕರಾರು ರಹಿತ ಜಾಮೀನು ನೀಡಿದೆ.
"ಸಂಧಾನ ಸಮಿತಿಯಿಂದ ವರದಿಯನ್ನು ಸ್ವೀಕರಿಸಲಾಗಿದ್ದು, ಸಮಿತಿಯು ಆಗಸ್ಟ್ 15ರ ವರೆಗೆ ಹೆಚ್ಚುವರಿ ಕಾಲಾವಕಾಶವನ್ನು ಕೋರಿದೆ" ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠವು ತಿಳಿಸಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬುಧವಾರದಂದು ರಫೇಲ್ ಪ್ರಕರಣದ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ನೀಡಿದ ಚೌಕಿದಾರ್ ಚೌರ್ ಹೈ ಹೇಳಿಕೆಗೆ ಈಗ ಸುಪ್ರೀಂಕೋರ್ಟ್ ಎದುರು ಬೇಷರತ್ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ಈಗ ಹೊಸದಾಗಿ ಸಲ್ಲಿಸಿರುವ ಅಫಿದಾವಿತ್ತನಲ್ಲಿ ಮೀನಾಕ್ಷಿ ಲೇಖಿ ದೂರಿಗೆ ಮುಕ್ತಿ ಹಾಡುವಂತೆ ರಾಹುಲ್ ಮನವಿ ಮಾಡಿಕೊಂಡಿದ್ದಾರೆ.
ಜರ್ಮನ್ ಮೂಲದ ಕಾರು ಉತ್ಪಾದಕ ಕಂಪನಿ ವೋಕ್ಸ್ ವ್ಯಾಗನ್ ಗೆ ಈಗ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ವಿಧಿಸಿದ್ದ 500 ಕೋಟಿ ದಂಡದ ವಿಚಾರವಾಗಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಪ್ರಕರಣದ ಸಂಪೂರ್ಣ ವಿಚಾರಣೆ ಮುಗಿಯುವವರೆಗೂ ಯಾವುದೇ ರೀತಿಯ ಹಣ ವಸೂಲಿ ಮಾಡಲು ಒತ್ತಡ ಹೇರುವಂತಿಲ್ಲ ಎಂದು ಆದೇಶಿಸಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆರೋಪದ ವಿಚಾರವಾಗಿ ಅವರ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಮೇ 8 ರವರೆಗೆ ಸುಪ್ರೀಂ ಕೋರ್ಟ್ ಮುಂದೂಡಿದೆ.
ರಫೇಲ್ ಒಪ್ಪಂದದ ವಿಚಾರವಾಗಿ ಪ್ರಧಾನಿ ಕಚೇರಿಯ ಪ್ರಗತಿ ಮೇಲ್ವಿಚಾರಣೆಯನ್ನು ಹಸ್ತಕ್ಷೇಪ ಅಥವಾ ಪ್ರತ್ಯೇಕ ಮಾತುಕತೆ ಎಂದು ಪರಿಗಣಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಬಿಜೆಪಿ ಸಮಾವೇಶಗಳಲ್ಲಿ ಸೇನೆಯ ಬಗ್ಗೆ ಹೇಳಿಕೆಗಳನ್ನು ನೀಡುವುದು ಮತ್ತು ದ್ವೇಷಪೂರಿತ ಭಾಷಣ ಮಾಡುವ ಮೂಲಕ ನೀತಿ ಸಂಹಿತಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದೆ ಸುಶ್ಮಿತಾ ದೇವ್ ಸೋಮವಾರ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ರಾಹುಲ್ ಗಾಂಧಿ ವಿರುದ್ಧ ಇಂದು ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿರುವ ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಏಪ್ರಿಲ್ 30ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಸಂತ್ರಸ್ತ ಮಹಿಳೆ ಅಲೆಮಾರಿ ಜೀವನ ನಡೆಸುತ್ತಿದ್ದಾಳೆ ಎಂಬುದನ್ನು ಮನಗಂಡ ಸುಪ್ರೀಂ ಕೋರ್ಟ್, ಆಕೆಗೆ ಸರ್ಕಾರಿ ಉದ್ಯೋಗ ಹಾಗೂ ವಾಸಿಸಲು ಮನೆಯನ್ನೂ ನೀಡುವಂತೆ ಸರ್ಕಾರಕ್ಕೆ ತಾಕೀತು ಮಾಡಿದೆ.
ರಾಹುಲ್ ಗಾಂಧಿ ತಮ್ಮ ವೈಯಕ್ತಿಕ ಹೇಳಿಕೆಯನ್ನು ಸುಪ್ರೀಂಕೋರ್ಟ್ ಆದೇಶ ಎಂದು ಬಿಂಬಿಸಲು ಯತ್ನಿಸಿದ್ದಾರೆ. ಕೋರ್ಟ್ ತೀರ್ಪಿನಲ್ಲಿ ಇಲ್ಲದ ಅಂಶಗಳನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಮಾಡಿ ಟೀಕೆಯಿಂದ ನ್ಯಾಯಾಂಗ ನಿಂದನೆಯಾದಂತಾಗಿದೆ ಎಂದು ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.
ಪುಣೆ ಮೂಲದ ದಂಪತಿಗಳು ಮುಸ್ಲಿಂ ಮಹಿಳೆಯರಿಗೆ ಮಸೀದಿಯೊಳಗೆ ಪ್ರವೇಶಿಸಲು ಮತ್ತು ಪ್ರಾರ್ಥನೆಗೆ ಅವಕಾಶ ಕಲ್ಪಿಸಲು ಅನುಮತಿ ಕೇಳಿದ ನಂತರ ಸುಪ್ರೀಂ ಕೋರ್ಟ್ ರಾಷ್ಟ್ರೀಯ ಮಹಿಳಾ ಆಯೋಗ, ಕೇಂದ್ರ ವಕ್ಫ್ ಕೌನ್ಸಿಲ್ ಮತ್ತು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಗೆ ನೋಟಿಸ್ ಜಾರಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.