ಎಲೆಕ್ಟೋರಲ್ ಬಾಂಡ್ ಯೋಜನೆಯ ಕುರಿತಾಗಿ ಕೆಲವೊಂದು ಆಕ್ಷೇಪಗಳನ್ನು ವ್ಯಕ್ತಪಡಿಸಿ ಸರಕಾರೇತರ (ಎ.ಡಿ.ಆರ್.) ಸಂಘಟನೆಯಾದ 'ಪ್ರಜಾಪ್ರಭುತ್ವ ಸುಧಾರಣಾ ಸಂಘ' ಸುಪ್ರಿಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಇನ್ನೂ ಪ್ರಮಾಣಪತ್ರ ದೊರೆತಿಲ್ಲ. ಹಾಗಾಗಿ ಚಿತ್ರ ಬಿಡುಗಡೆಯ ವಿಚಾರವಾಗಿ ನ್ಯಾಯಾಲಯ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಭಾರತದ ಚುನಾವಣಾ ಆಯೋಗವು ಗೌರವಾನ್ವಿತ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಕಾರ್ಯಗತಗೊಳಿಸಲು ಮತ್ತು ಕಾರ್ಯರೂಪಕ್ಕೆ ತರಲು ಎಲ್ಲ ಪ್ರಯತ್ನಗಳನ್ನು ನಡೆಸಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.
2015ರಲ್ಲಿ ಗುಜರಾತ್ನಲ್ಲಿ ಪಾಟೀದಾರ್ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ವೇಳೆ ಮೆಹಸಾನಾದಲ್ಲಿ ನಡೆದ ದೊಂಬಿ ಪ್ರಕರಣದಲ್ಲಿ ಹಾರ್ದಿಕ್ಗೆ ಮೆಹಸಾನಾ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ರಾಮ್ ಕಿ ಜನ್ಮಭೂಮಿ ಚಿತ್ರದ ಬಿಡುಗಡೆಯನ್ನು ತಡೆ ಹಿಡಿಯಲು ಸುಪ್ರೀಂ ಕೋರ್ಟ್ ಗುರುವಾರದಂದು ನಿರಾಕರಿಸಿತು.ಈಗ ಇದೇ ಮಾರ್ಚ್ 29ರಂದು ದೇಶದಾದ್ಯಂತದ ಬಿಡುಗಡೆಯಾಗಲು ಸನ್ನಿತವಾಗಿದ್ಧ ಸಂದರ್ಭದಲ್ಲಿ ಈ ಸುಪ್ರೀಂಕೋರ್ಟ್ ನ ತೀರ್ಪು ಬಂದಿದೆ.
40 ಕೋಟಿ ರೂಗಳ ಬಾಕಿ ಹಣವನ್ನು ಅಮ್ರಾಪಾಲಿ ಗ್ರೂಪ್ ಗೆ ಪಾವತಿ ಮಾಡುವಂತೆ ನಿರ್ದೇಶನ ನೀಡಲು ಭಾರತದ ಕ್ರಿಕೆಟ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಈಗ ಸುಪ್ರೀಂಕೋರ್ಟ್ ಗೆ ಮನವಿ ಮಾಡಿಕೊಂಡಿದ್ದಾರೆ.
ಗೌಪ್ಯ ದಾಖಲೆಗಳನ್ನು ಎವಿಡೆನ್ಸ್ ಆಕ್ಟ್ ಅಡಿಯಲ್ಲಿ ಸಾಕ್ಷಿಯಾಗಿ ಸ್ವೀಕರಿಸಲಾಗುವುದಿಲ್ಲ ಮತ್ತು ಅಂತಹ ದಾಖಲೆಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲಾಗುವುದಿಲ್ಲ ಎಂದು ಅಟಾರ್ನಿ ಜನರಲ್ ಹೇಳಿದರು.
ಸುಪ್ರೀಂಕೋರ್ಟ್ ನ ಕೊಲಿಜಿಯಂ ಬಾಂಬೆ, ಮದ್ರಾಸ್ ಹಾಗೂ ಪಟ್ನಾ ಹೈಕೋರ್ಟ್ ಗಳ ಹೆಚ್ಚುವರಿ ನ್ಯಾಯಾಧೀಶರನ್ನು ಕಾಯಂಗೊಳಿಸಲು ಶಿಫಾರಸ್ಸು ಮಾಡಿದೆ. ಇದರಲ್ಲಿ ಬಾಂಬೆ ಹೈಕೋರ್ಟ್ ನಿಂದ 14 ಮದ್ರಾಸ್ ಹೈಕೋರ್ಟ್ ನಿಂದ 6 ಹಾಗೂ ಪಾಟ್ನಾ ಹೈಕೋರ್ಟ್ ನಿಂದ 6 ಹೆಚ್ಚುವರಿ ನ್ಯಾಯಾಧೀಶರನ್ನು ಕೊಲಿಜಿಯಂ ಶಿಫಾರಸ್ಸು ಮಾಡಿದೆ.
ಚುನಾವಣಾ ಪ್ರಚಾರದ ವೇಳೆ ರೋಡ್ ಶೋ ಹಾಗೂ ಬೈಕ್ ರ್ರ್ಯಾಲಿ ಯನ್ನು ನಿಷೇಧಗೊಳಿಸಬೇಕೆಂದು ಉತ್ತರ ಪ್ರದೇಶದ ಮಾಜಿ ಡಿಜಿಪಿ ವಿಕ್ರಂ ಸಿಂಗ್ ಹಾಗೂ ಪರಿಸರ ಹೋರಾಟಗಾರ್ತಿ ಶೈವಿಕಾ ಅಗರವಾಲ್ ಅವರು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್ ) ಸಲ್ಲಿಸಿದ್ದಾರೆ.
ಎಐಡಿಎಂಕೆ ಇಪಿಎಸ್(ಇ.ಕೆ ಪಳನಿಸ್ವಾಮಿ) -ಓಪಿಎಸ್(ಓ.ಪನ್ನೀರಸೆಲ್ವಂ) ಬಣಕ್ಕೆ ದೆಹಲಿ ಹೈಕೋರ್ಟ್ ಎರಡೆಲೆ ಚಿಹ್ನೆ ನೀಡಿರುವ ನಿರ್ಧಾರವನ್ನು ಪ್ರಶ್ನಿಸಿ ಈಗ ಸುಪ್ರೀಂ ಕೋರ್ಟ್ ನ ಮೊರೆ ಹೋಗಿದ್ದಾರೆ.
ಕೇಂದ್ರ ಸರ್ಕಾರವು ಮೇಲ್ಜಾತಿ ಬಡವರಿಗೆ ನೀಡಿರುವ ಶೇ 10ರಷ್ಟು ಮೀಸಲಾತಿ ನಿರ್ಧಾರಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ನಿರಾಕರಿಸಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್ 28 ಕ್ಕೆ ಮುಂದೂಡಿದೆ.
ದೇಶದ ರಾಜಕಾರಣಿಗಳು, ಆಡಳಿತಗಾರರು ಮತ್ತು ಸುಪ್ರೀಂ ಕೋರ್ಟ್ ನಿಂದ ಸಹ ಇದುವರೆಗೂ ಈ ವಿವಾದವನ್ನು ಬಗೆಹರಿಸಲು ಸಾಧ್ಯವಾಗಿಲ್ಲ. ಹೀಗಿರುವಾಗ ಮೂವರು ಸಂಧಾನಕಾರರಿಂದ ಅದು ಹೇಗೆ ಸಾಧ್ಯ? ಎಂದು ಶಿವಸೇನೆ ಪ್ರಶ್ನಿಸಿದೆ.
ಅಯೋಧ್ಯ ವಿವಾದದಲ್ಲಿ ಅರ್ಜಿದಾರರಲ್ಲಿ ಒಬ್ಬರಾಗಿರುವ ಹಿಂದೂ ಮಹಾಸಭಾ "ಸಾರ್ವಜನಿಕರು ಮಧ್ಯಸ್ಥಿಕೆಗೆ ಒಪ್ಪುವುದಿಲ್ಲ" ಎಂದು ವಾದಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಜಸ್ಟೀಸ್ ಬಾಬ್ಡೆ" ಇದು ವಿಫಲವಾಗಿದೆ ಎಂದು ನೀವು ಹೇಳುತ್ತಿದ್ದೀರಿ, ಎಲ್ಲವನ್ನು ಪೂರ್ವಾಗ್ರಹ ಪೀಡಿತರಾಗಿ ನೋಡಬೇಡಿ, ಮಧ್ಯಸ್ಥಿಕೆ ನಡೆಸಲು ನಾವು ಪ್ರಯತ್ನಿಸುತ್ತೇವೆ" ಎಂದರು.
ಈಗಾಗಲೇ ಮೂರು ಮಂಡಳಿಗಳಿಗೆ ಹೆಸರುಗಳನ್ನು ಅಂತಿಮಗೊಳಿಸಿದೆ ಎಂದು ಆಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠಕ್ಕೆ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.