ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮೇ 4, 2016 ರಂದು ಕೆರೆ ಹಾಗೂ ನೀರಿನ ಸುತ್ತಲಿನ ಬಫರ್ ವಲಯಗಳನ್ನು ವಿಸ್ತ್ರರಿಸಬೇಕೆಂದು ನೀಡಿದ್ದ ತೀರ್ಪನ್ನು ವಜಾಗೊಳಿಸಬೇಕೆಂದು ಸಲ್ಲಿಸಿದ್ದ ಕರ್ನಾಟಕದ ಮನವಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ಪುರಸ್ಕರಿಸಿದೆ.
ಸುಪ್ರೀಂಕೋರ್ಟ್ ಮಂಗಳವಾರದಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮೇ 4 2016 ರಂದು ಕೆರೆ ಹಾಗೂ ನೀರಿನ ಸುತ್ತಲಿನ ಬಫರ್ ವಲಯಗಳನ್ನು ವಿಸ್ತ್ರರಿಸಬೇಕೆಂದು ನೀಡಿದ್ದ ತೀರ್ಪನ್ನು ವಜಾಗೊಳಿಸಬೇಕೆಂದು ಸಲ್ಲಿಸಿದ್ದ ಕರ್ನಾಟಕದ ಮನವಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರಿಗೆ ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ತಂದು ರಾಜ್ಯ ಸರ್ಕಾರ ಫೆ.27ರಂದು ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಅರಾವಳಿ ಕಾಡಿನಲ್ಲಿ ಸಾವಿರಾರು ಎಕರೆ ಅರಣ್ಯ ಭೂಪ್ರದೇಶದಲ್ಲಿ ರಿಯಲ್ ಎಸ್ಟೇಟ್ ನಿರ್ಮಾಣಕ್ಕೆ ಅವಕಾಶ ನೀಡಕೂಡದು ಎಂದು ಸುಪ್ರೀಂಕೋರ್ಟ್ ಶುಕ್ರವಾರದಂದು ಆದೇಶ ನೀಡಿದೆ.ಅರಾವಳಿ ಅರಣ್ಯದಲ್ಲಿ ರಿಯಲ್ ಎಸ್ಟೇಟ್ ನಿಂದಾಗಿ ನಾಶವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್ "ಇದು ನಿಜವಾಗಿಯೂ ಆಘಾತಕಾರಿ. ನೀವು ಅರಣ್ಯವನ್ನು ನಾಶ ಮಾಡುತ್ತಿದ್ದೀರಿ. ಇದಕ್ಕೆ ಅನುಮತಿ ಇಲ್ಲ ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಪುಲ್ವಾಮ ದಾಳಿ ಬಳಿಕ ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸುಪ್ರೀಂಕೋರ್ಟ್ ಹಲ್ಲೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು 11 ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿತ್ತು.
ಇದು ಖಾಸಗಿ ಆಸ್ತಿಯ ಪರಭಾರೆ ವಿಷಯವಲ್ಲ. ಮಧ್ಯಸ್ಥಿಕೆ ಮಾತುಕತೆ ಮೂಲಕ ಪಾಲುದಾರರು ಪರಿಹಾರ ಕಂಡುಕೊಳ್ಳುವ ಶೇ1ರಷ್ಟು ಅವಕಾಶ ಸಿಕ್ಕರೂ ನೀಡಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಈಗಾಗಲೇ ನಡೆದಿರುವ ಕಾಶ್ಮೀರಿಗಳ ಹಲ್ಲೆ ಕುರಿತಾದ ವರದಿಗಳ ಬಗ್ಗೆ ರಾಜ್ಯಗಳ ಪ್ರತಿಕ್ರಿಯೆಯನ್ನು ಬಯಸುವ ಮೂಲಕ ಈ ವಿಚಾರದಲ್ಲಿ ಕೋರ್ಟ್ ಮಧ್ಯ ಪ್ರವೇಶಿಸಬೇಕು ಎಂಬ ಕೇಂದ್ರದ ಮನವಿಯನ್ನು ಕೋರ್ಟ್ ಪುರಸ್ಕರಿಸಿದೆ.
ಫ್ರಾನ್ಸ್ ನಿಂದ 36 ರಫೇಲ್ ಯುದ್ಧ ವಿಮಾನಗಳ ಖರೀದಿ ಒಪ್ಪಂದ ಪ್ರಕರಣ ಕುರಿತು ನೀಡಿರುವ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೇಂದ್ರದ ಮಾಜಿ ಸಚಿವರಾದ ಯಶ್ವಂತ್ ಸಿನ್ಹಾ ಮತ್ತು ಅರುಣ್ ಶೌರಿ ಹಾಗೂ ಹಿರಿಯ ವಕೀಲ ಪ್ರಶಾಂತ್ ಭೂಷನ್ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಿದ್ದರು.
ಬಿಹಾರದ ಬಾಲಿಕಾಗೃಹಗಳ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದ್ದ ಎ.ಕೆ.ಶರ್ಮಾ ಅವರನ್ನು ಸಿಬಿಐನ ಅಂದಿನ ಹಂಗಾಮಿ ನಿರ್ದೇಶಕ ನಾಗೇಶ್ವರ ರಾವ್ ವರ್ಗಾವಣೆ ಮಾಡಿದ್ದರು.
'ಜಂಟಿ ನಿರ್ದೇಶಕ ಎ.ಕೆ.ಶರ್ಮಾ ಅವರನ್ನು ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದ್ದರೂ, ಕೇಂದ್ರ ಸರ್ಕಾರ ಅವರನ್ನು ಹೇಗೆ ವರ್ಗಾವಣೆ ಮಾಡುತ್ತದೆ' ಎಂದು ಮುಖ್ಯ ನ್ಯಾಯಮೂರ್ತಿ ಪ್ರಶ್ನಿಸಿದ್ದಾರೆ.
ಮಹಿಳೆಯರಿಗೂ ಕೂಡ ಪ್ರವೇಶದ ಅವಕಾಶ ನೀಡಿ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ಮುಂದೆ ಹಲವು ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು.ಆದ್ದರಿಂದ ಈ ವಿಚಾರವಾಗಿ ಸುಪ್ರೀಂಕೋರ್ಟ್ ಇಂದು ಈ ಎಲ್ಲ ಅರ್ಜಿಗಳ ವಿಚಾರಣೆಯನ್ನು ನಡೆಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.