ಪ್ರಧಾನಿ ಮೋದಿಯವರ ಭದ್ರತೆಗೆ ಸಂಬಂಧಿಸಿದಂತೆ ಈ ಸಂಪೂರ್ಣ ನಿರ್ಲಕ್ಷ್ಯ ಪ್ರಕರಣದಲ್ಲಿ ಪಂಜಾಬ್ ಪೊಲೀಸ್ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ.
ನ್ಯಾಯಾಲಯವು ಒಂದು ವಾರ ಕಾಲಾವಕಾಶ ನೀಡುವ ಮೂಲಕ ಚುನಾವಣಾ ಪ್ರಕ್ರಿಯೆಯನ್ನು ಮತ್ತೆ ನಡೆಸುವಂತೆ ಸೂಚಿಸಿದೆ, ನಾಮನಿರ್ದೇಶನ ಪ್ರಕ್ರಿಯೆಯಲ್ಲಿ ಪ್ರಸ್ತಾಪಿಸಲಾದ ಬದಲಾವಣೆಗಳಿಂದಾಗಿ ಆಗಸ್ಟ್ 28 ರಂದು ನಿಗದಿಯಾಗಿದ್ದ ಎಐಎಫ್ಎಫ್ ಚುನಾವಣೆಗಳನ್ನು ಒಂದು ವಾರದವರೆಗೆ ಮುಂದೂಡಲು ಕೇಂದ್ರವು ಪ್ರಸ್ತಾಪಿಸಿತ್ತು.
75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿಯೇ ಪ್ರಕರಣದ 11 ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ. ಇದಕ್ಕೆ ವಿರೋಧ ಪಕ್ಷಗಳು ಸೇರಿದಂತೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಈ ಹಿಂದೆ ಕರ್ನಾಟಕ ಹೈಕೋರ್ಟ್, ಮೋಟಾರ್ ಅಪಘಾತ ಕ್ಲೇಮ್ಸ್ ಟ್ರಿಬ್ಯೂಲನ್ ನೀಡಿದ್ದ ಪರಿಹಾರ ಮೊತ್ತವನ್ನು 8.9 ಲಕ್ಷ ರೂ.ದಿಂದ ಶೇ.6ರ ಬಡ್ಡಿ ಸೇರಿ 13.65 ಲಕ್ಷ ರೂ.ಗೆ ಹೆಚ್ಚಿಸಿತ್ತು.
ನವದೆಹಲಿ: ಜನರು ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಕಳೆದುಕೊಂಡರೆ ಮತ್ತು ನ್ಯಾಯಾಂಗ ಕುಸಿದರೆ, ಪ್ರಜಾಪ್ರಭುತ್ವದ ಉಳಿವು ಅಪಾಯದಲ್ಲಿದೆ ಎಂದರ್ಥ ಎಂದು ಮುಂದಿನ ವಾರ ನಿವೃತ್ತಿಯಾಗಲಿರುವ ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದ್ದಾರೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಆಂಧ್ರಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ, ಹೈಕೋರ್ಟ್ ಮತ್ತು ಇತರ ನ್ಯಾಯಾಲಯಗಳ ನ್ಯಾಯಾಧೀಶರರ ಸಮ್ಮುಖದಲ್ಲಿ ವಿಜಯವಾಡ ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಎನ್ಆರ್ಐಗಳಿಗೆ ಮತದಾನದ ಹಕ್ಕು ನೀಡುವಂತೆ ಕೇರಳ ಪ್ರವಾಸಿ ಅಸೋಸಿಯೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಜೆ ಕೆ ಮಹೇಶ್ವರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿದೆ.
ಚುನಾವಣೆಯಲ್ಲಿ ಉಚಿತ ಸೌಲಭ್ಯಗಳ ಭರವಸೆ ನೀಡುವ ರಾಜಕೀಯ ಪಕ್ಷಗಳ ಮಾನ್ಯತೆ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಮುಂದಿನ ವಿಚಾರಣೆಯನ್ನು ಆಗಸ್ಟ್ 17 ರಂದು ನಡೆಸಲಾಗುವುದು ಎಂದು ತಿಳಿಸಿದೆ.
ಪ್ರವಾದಿ ಮೊಹಮ್ಮದ್ ಕುರಿತು ಹೇಳಿಕೆ ನೀಡಿ ವಿವಾದ ಸೃಷ್ಟಿಸಿಕೊಂಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಇದೀಗ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಈಗ ಅವರ ವಿರುದ್ಧ ದಾಖಲಾಗಿರುವ ಎಲ್ಲ ಎಫ್ಐಆರ್ಗಳನ್ನು ದೆಹಲಿಗೆ ವರ್ಗಾಯಿಸಲಾಗುತ್ತದೆ. ತಮ್ಮ ವಿರುದ್ಧ ದಾಖಲಾಗಿರುವ ದೂರುಗಳನ್ನು ದೆಹಲಿಗೆ ವರ್ಗಾಯಿಸಬೇಕು ಎಂದು ಸ್ವತಃ ನೂಪುರ್ ಶರ್ಮಾ ಅವರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು ಎಂದು ತಿಳಿಸೋಣ, ಇದೀಗ ನ್ಯಾಯಾಲಯವೂ ಅದೇ ದಿಕ್ಕಿನಲ್ಲಿ ತೀರ್ಪು ನೀಡಿದೆ.
ದೀರ್ಘಕಾಲದವರೆಗೆ ಕ್ರಿಮಿನಲ್ ಪ್ರಕರಣಗಳಲ್ಲಿ ಬಾಕಿ ಉಳಿದಿರುವ ಮೇಲ್ಮನವಿಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿಗಳಾದ ಎಸ್ಕೆ ಕೌಲ್ ಮತ್ತು ಎಂಎಂ ಸುಂದರೇಶ್ ಅವರ ಪೀಠ, ಕ್ರಿಮಿನಲ್ ಪ್ರಕರಣಗಳಿಂದ ಕೆಳ ನ್ಯಾಯಾಲಯಗಳನ್ನು ಮುಕ್ತಗೊಳಿಸುವುದು ಅಗತ್ಯ ಎಂದು ಹೇಳಿದೆ.
2017ರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದಿಂದ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ಸೋಮವಾರ ನಾಲ್ಕು ತಿಂಗಳ ಜೈಲು ಶಿಕ್ಷೆ ಮತ್ತು 2,000 ರುಪಾಯಿ ದಂಡ ವಿಧಿಸಿದೆ.
Vijay Mallya case: ವಿದೇಶಕ್ಕೆ ವರ್ಗಾವಣೆಗೊಂಡ 40 ಮಿಲಿಯನ್ ಡಾಲರ್ ಹಣವನ್ನು 4 ವಾರದೊಳಗೆ ಮರುಪಾವತಿಸುವಂತೆ ವಿಜಯ್ ಮಲ್ಯಗೆ ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದೆ. ದೇಶದ ವಿವಿಧ ಬ್ಯಾಂಕುಗಳಲ್ಲಿ 9000 ಕೋಟಿ ರೂ. ಸಾಲ ಮಾಡಿ ವಿದೇಶದಲ್ಲಿ ನೆಲಸಿರುವ ಮಲ್ಯನನ್ನು ಪರಾರಿ ಎಂದು ಘೋಷಿಸಲಾಗಿದೆ.
ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಬಿಜೆಪಿ ನಾಯಕರು ಸಂಭ್ರಮಾಚರಣೆ ನಡೆಸಿದ್ದಾರೆ.. ಉದ್ಧವ್ ರಾಜೀನಾಮೆ ಬೆನ್ನಲ್ಲೇ ಕಮಲ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಖಾಸಗಿ ಹೋಟೆಲ್ನಲ್ಲಿ ಮಾಜಿ ಸಿಎಂ ಫಡ್ನವೀಸ್ಗೆ ಸಿಹಿ ತಿನ್ನಿಸಿ ಬಿಜೆಪಿ ನಾಯಕರು ಶುಭ ಕೋರಿದ್ದಾರೆ.
15 ದಿನಗಳ ಹೈಡ್ರಾಮಾದ ಬಳಿಕ ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನವಾಗಿದೆ.. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಉದ್ಧವ್ ಫೇಸ್ಬುಕ್ ಲೈವ್ನಲ್ಲಿ ರಾಜೀನಾಮೆ ಘೋಷಿಸಿದ್ದಾರೆ. ಇಂದು ವಿಶ್ವಾಸಮತ ಯಾಚಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ವಿಶ್ವಾಸಮತ ಯಾಚನೆಗೂ ಮೊದಲೇ ರಾಜೀನಾಮೆ ಘೋಷಣೆ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.