ಸುರೇಶ್ ರೈನಾರ ಈ ಐಷಾರಾಮಿ ಬಂಗಲೆ ಉತ್ತರ ಪ್ರದೇಶದ ಘಜಿಯಾಬಾದ್ನ ರಾಜ್ ನಗರದಲ್ಲಿದೆ. ರೈನಾ ತನ್ನ ತಂದೆ ತಾಯಿ, ಪತ್ನಿ ಪ್ರಿಯಾಂಕಾ ಮತ್ತು ಮಕ್ಕಳಾದ ಗ್ರೇಸಿಯಾ ಮತ್ತು ವಿರಾಯ್ ಜೊತೆ ವಾಸಿಸುತ್ತಿದ್ದಾರೆ.
ಕ್ರಿಕೆಟಿಗ ಸುರೇಶ್ ರೈನಾ ತನ್ನ ಚಿಕ್ಕಮ್ಮನಿಗೆ ಆಕ್ಸಿಜನ್ ಸಿಲಿಂಡರ್ ನೀಡುವಂತೆ ಕೋರಿದ ನಂತರ ಬಾಲಿವುಡ್ ನಟ ಸೋನು ಸೂನ್ ರೈನಾ ಅವರ ಸಹಾಯಕ್ಕೆ ಬಂದಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ರೈನಾ ಹಿಂದಿನ ದಿನ ರೋಗಿಯ ವೈದ್ಯಕೀಯ ವಿವರಗಳನ್ನು ಹಂಚಿಕೊಂಡು ಸಹಾಯ ಕೋರಿದ್ದರು.
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅತ್ಯುತ್ತಮ ಫಾರ್ಮ್ ಮೂಲಕ ಭಾರತಕ್ಕೆ ಗೆಲುವನ್ನು ತಂದುಕೊಟ್ಟಿರುವ ಹಾರ್ದಿಕ್ ಪಾಂಡ್ಯ ಶಸ್ತ್ರ ಚಿಕಿತ್ಸೆಯ ನಂತರ ತಂಡಕ್ಕೆ ಆರನೇ ಬೌಲರ್ ಕೊರತೆ ಎದುರಾಗಿದೆ.ಈಗ ಈ ವಿಚಾರವಾಗಿ ಸುದೀರ್ಘವಾಗಿ ಮಾತನಾಡಿರುವ ಸುರೇಶ ರೈನಾ ಈ ಹಿಂದೆ ಭಾರತ ತಂಡಕ್ಕೆ ಅನೇಕ ಅರೆಕಾಲಿಕ ಬೌಲಿಂಗ್ ಆಯ್ಕೆ ಸಾಕಷ್ಟು ಅನುಕೂಲವನ್ನು ಒದಗಿಸುತ್ತಿತ್ತು, ಆದರೆ ಅದು ಇತ್ತೀಚಿನ ದಿನಗಳಲ್ಲಿ ಕಾಣುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರಿಕೆಟ್ ಅಕಾಡೆಮಿ ತೆರೆಯಲು ಮುಂದಾಗಿದ್ದು ಕ್ರಿಕೆಟಿಗರಾಗಲು ಬಯಸುವವರಿಗೆ ವಿಶೇಷವಾಗಿ ದೂರದ ಪ್ರದೇಶಗಳ ಯುವಕರಿಗೆ ತರಬೇತಿ ನೀಡಲು ಬಯಸಿದ್ದಾರೆ ಎಂದು ಅಧಿಕೃತ ವಕ್ತಾರರು ಮಾಹಿತಿ ನೀಡಿದರು.
ಭಾರತೀಯ ಕ್ರಿಕೆಟಿಗ ಸುರೇಶ್ ರೈನಾ ಶುಕ್ರವಾರ ಶ್ರೀನಗರದ ಜಮ್ಮು ಮತ್ತು ಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ಅವರನ್ನು ಭೇಟಿ ಮಾಡಿ ಸ್ಥಳೀಯ ಕಾಶ್ಮೀರಿ ಯುವಕರ ಕ್ರೀಡಾ ಕೌಶಲ್ಯವನ್ನು ಗೌರವಿಸುವ ರಾಜ್ಯ ಪೊಲೀಸರ ಸರಣಿ ಯೋಜನೆಗಳ ಬಗ್ಗೆ ಚರ್ಚಿಸಿದರು.
ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ ಭಾರತದ ಮಾಜಿ ಬ್ಯಾಟ್ಸ್ಮನ್ ಸುರೇಶ್ ರೈನಾ ಅವರು ಈ ವರ್ಷದ ಐಪಿಎಲ್ನಿಂದ ವೈಯಕ್ತಿಕ ಕಾರಣಗಳಿಂದಾಗಿ ಹಿಂದೆ ಸರಿದಿದ್ದಾರೆ.
ಪಂಜಾಬ್ನ ಪಠಾಣ್ಕೋಟ್ ಜಿಲ್ಲೆಯಲ್ಲಿ ಸಶಸ್ತ್ರ ದರೋಡೆಕೋರರು ನಡೆಸಿದ ದಾಳಿಯಲ್ಲಿ ಕ್ರಿಕೆಟಿಗ ಸುರೇಶ್ ರೈನಾ ಅವರ 58 ವರ್ಷದ ಚಿಕ್ಕಪ್ಪ ಸಾವನ್ನಪ್ಪಿದ್ದರೆ, ಅವರ ಕುಟುಂಬದ ನಾಲ್ವರು ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಸರ್ಕಾರಿ ಗುತ್ತಿಗೆದಾರ ಅಶೋಕ್ ಕುಮಾರ್ ಎಂದು ಗುರುತಿಸಲಾಗಿದೆ.
ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಚೆನ್ನೈ ಸೂಪರ್ ಕಿಂಗ್ಸ್ ಕ್ರಿಕೆಟಿಗ ಸುರೇಶ್ ರೈನಾ ಶನಿವಾರ ಐಪಿಎಲ್ 2020 ರಿಂದ ಹೊರಬಂದಿದ್ದಾರೆ.ಯುಎಇಯಿಂದ ಮನೆಗೆ ಮರಳಲು ರೈನಾ ನಿರ್ಧರಿಸಿದ್ದಾರೆ.ಸಿಎಸ್ಕೆ ರೈನಾ ನಿರ್ಧಾರದ ಬಗ್ಗೆ ಟ್ವಿಟ್ಟರ್ ನಲ್ಲಿ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದ ಸುರೇಶ್ ರೈನಾ, ರಾಯುಡು ನಾಲ್ಕನೇ ಸ್ಥಾನದಲ್ಲಿರುವ ಭಾರತಕ್ಕೆ ಅತ್ಯುತ್ತಮ ಆಯ್ಕೆಯಾಗಿದ್ದರು,ಅವರು ವಿಶ್ವಕಪ್ ತಂಡದಲ್ಲಿ ಇದ್ದಿದ್ದರೆ ಭಾರತ ಟ್ರೋಫಿಯನ್ನು ಗೆದ್ದಿರುತ್ತಿತ್ತು ಎಂದು ಹೇಳಿದ್ದಾರೆ.
ಎಂ.ಎಸ್ ಧೋನಿ ಮತ್ತು ಸುರೇಶ್ ರೈನಾ ಒಂದೇ ದಿನ ನಿವೃತ್ತಿ ಘೋಷಿಸಿರುವುದು ಕ್ರಿಕೆಟ್ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ.ಸಾಮಾಜಿಕ ಜಾಲತಾಣಗಳಲ್ಲಿ ಎಂ.ಎಸ್ ಧೋನಿ ಮತ್ತು ಸುರೇಶ್ ರೈನಾ ಒಟ್ಟಿಗೆ ನಿವೃತ್ತಿ ಹೊಂದಲು ಕಾರಣವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರುವ ಟ್ವೀಟ್ ಈಗ ವೈರಲ್ ಆಗಿದೆ.
ಎಂಎಸ್ ಧೋನಿ ಮತ್ತು ಸುರೇಶ್ ರೈನಾ ಅವರು ಏಕದಿನ ಪಂದ್ಯಗಳಲ್ಲಿ ಭಾರತದ ಮಧ್ಯಮ ಕ್ರಮಾಂಕದಲ್ಲಿ ಇಬ್ಬರು ಸ್ಥಿರರಾಗಿದ್ದರು. ಈ ಅಪ್ರತಿಮ ಜೋಡಿ ಅನೇಕ ಪಂದ್ಯಗಳನ್ನು ಗೆಲ್ಲುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದೆ.
ಎಂ.ಎಸ್.ಧೋನಿ 16 ವರ್ಷಗಳ ಸುದೀರ್ಘ ಅಂತರರಾಷ್ಟ್ರೀಯ ವೃತ್ತಿಜೀವನವನ್ನು ಕೊನೆಗೊಳಿಸಿದರು. ಧೋನಿ ಈಗಾಗಲೇ ಡಿಸೆಂಬರ್ 2014 ರಲ್ಲಿ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾಗಿದ್ದರು. ಧೋನಿ, ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ತಮ್ಮ ಆಟವನ್ನು ಮುಂದುವರೆಸಲಿದ್ದಾರೆ. ಪಂದ್ಯಾವಳಿಯ 13 ನೇ ಆವೃತ್ತಿಯು ಸೆಪ್ಟೆಂಬರ್ 19 ರಿಂದ ಯುಎಇಯಲ್ಲಿ ನಡೆಯಲಿದೆ.
ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರ ನಿವೃತಿ ಬೆನ್ನಲ್ಲೇ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದರು. ಧೋನಿ ಹಾಗೆ ರೈನಾ ಕೂಡ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ನಿವೃತ್ತಿಯನ್ನು ಅಧಿಕೃತಗೊಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.