ಮದ್ಯ ದೊರೆ ವಿಜಯ್ ಮಲ್ಯ ಅವರು ಬ್ಯಾಂಕ್ ಗಳಿಂದ ಪಡೆದ ಎಲ್ಲಾ ಹಣವನ್ನು ಹಿಂದಿರುಗಿಸಲು ತಾವು ಬಯಸುತ್ತಿರುವುದಾಗಿ ಮತ್ತೊಮ್ಮೆ ಟ್ವೀಟ್ ಮಾಡಿದ್ದಾರೆ. ಕರೋನಾ ಬಿಕ್ಕಟ್ಟಿನ ಹಿನ್ನೆಲೆ ಘೋಷಿಸಲಾಗಿರುವ ಆರ್ಥಿಕ ಪ್ಯಾಕೇಜ್ ಕುರಿತು ಮಲ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಲಾಕ್ಡೌನ್ನಿಂದಾಗಿ ರೈತರು ಕೈಗೆ ಬಂದ ಬೆಳೆ ಕಳೆದುಕೊಂಡು ನಷ್ಟದಲ್ಲಿದ್ದಾರೆ, ಲಕ್ಷಾಂತರ ಜನರ ಉದ್ಯೋಗ ನಷ್ಟವಾಗಿದೆ, ಸಂಬಳವಿಲ್ಲದೆ ಅದೆಷ್ಟೋ ಕುಟುಂಬಗಳು ಪರಿತಪಿಸುತ್ತಿವೆ. ಕೆಲವರು ಆಹಾರವಿಲ್ಲದೇ, ಇನ್ನು ಕೆಲವರು ದೂರದೂರುಗಳಿಗೆ ನಡೆದು ಕೊನೆಯುಸಿರೆಳೆದಿದ್ದಾರೆ' ಎಂದು ಎಚ್.ಡಿ. ಕುಮಾರಸ್ವಾಮಿ ಗಮನಸೆಳೆದಿದ್ದಾರೆ.
ಭಾರತಕ್ಕೆ ಹಸ್ತಾಂತರಿಸುವಂತೆ ಬ್ರಿಟನ್ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ವಾಣಿಜ್ಯೋದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ಬ್ರಿಟನ್ ಹೈಕೋರ್ಟ್ ವಜಾಗೊಳಿಸಿದೆ.
ಭಾರತದಿಂದ ತಲೆಮರಿಸಿಕೊಂಡು ಮಾರ್ಚ್ 2016ರಿಂದ ಬ್ರಿಟನ್ ನಲ್ಲಿ ನೆಲೆಸಿರುವ 61 ವರ್ಷ ವಯಸ್ಸಿನ ಉದ್ಯಮಿ, ಕಿಂಗ್ ಫಿಶರ್ ಏರ್ಲೈನ್ಸ್ಗೆ ಒಡೆಯ, ಮಧ್ಯದ ದೊರೆ ಮಲ್ಯ ವಿವಿಧ ಭಾರತೀಯ ಬ್ಯಾಂಕುಗಳಲ್ಲಿ ರೂ. 9,000 ಕೋಟಿ ಸಾಲಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಬೇಕಾಗಿರುವ ಪ್ರಮುಖ ವ್ಯಕ್ತಿಯಾಗಿದ್ದಾರೆ.
9000 ಕೋಟಿ ವಂಚನೆ ಪ್ರಕರಣದಲ್ಲಿ ಸಿಲುಕಿರುವ ಉದ್ಯಮಿ ವಿಜಯ್ ಮಲ್ಯ ಭಾರತದಿಂದ ಇಂಗ್ಲೆಂಡ್ ಗೆ ಹೊರಡುವ ಮೊದಲು ಹಣಕಾಸು ಸಚಿವ ಅರುಣ್ ಜೈಟ್ಲಿ ಜೊತೆ ತಮ್ಮ ಕೇಸಿಗೆ ಮುಕ್ತಿ ಹಾಡಲು ಹಲವು ಬಾರಿ ತಾವು ಆಫರ್ ಕುರಿತಾಗಿ ಮಾತುಕತೆ ನಡೆಸಿದ್ದಾಗಿ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಎಂ.ಜೆ. ಅಕ್ಬರ್ ಲೋಕಸಭೆಯಲ್ಲಿ ಮಾತನಾಡುತ್ತಾ, ವಿಜಯ್ ಮಲ್ಯ, ನಿರಾವ್ ಮೋದಿ, ಮೆಹುಲ್ ಚೋಕ್ಸಿ ಸೇರಿದಂತೆ 31 ಉದ್ಯಮಿಗಳು ಸಿಬಿಐ ಸಂಬಂಧಿಸಿದ ವಿಷಯಗಳಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.