ಮತದಾನಕ್ಕೂ ಮುನ್ನ ಸಿಎಂ ಬೊಮ್ಮಾಯಿ ಪೂಜೆ. ಗಾಯತ್ರಿ ತಪೋಭೂಮಿಗೆ ಬೊಮ್ಮಾಯಿ ಭೇಟಿ. ಶಿಗ್ಗಾವಿ ತಾ. ತಡಸ ಗ್ರಾಮದಲ್ಲಿರುವ ತಪೋಭೂಮಿ. ಗಾಯತ್ರಿ ದೇವಿ, ಆಂಜನೇಯನ ದರ್ಶನ ಪಡೆದ ಸಿಎಂ. ಪುತ್ರ ಭರತ್, ಪತ್ನಿ ಚೆನ್ನಮ್ಮ, ಮಗಳು ಅದಿತಿ ಸಾಥ್.
ಮತ ಜಾತ್ರೆಯಲ್ಲಿ ಸ್ಟಾರ್ ನಟರ ವೋಟಿಂಗ್. ನಾವು ಮತ ಹಾಕಿದ್ದೇವೆ.. ನೀವೂ ಮತ ಹಾಕಿ, ಹಾಕಿಸಿ. ಯಾರು ಅಭಿವೃದ್ಧಿ ಮಾಡಿದ್ದಾರೆ ಅವರಿಗೆ ಮತ ಹಾಕಿ. ವೋಟಿಂಗ್ ಮಾಡಿ ಎಂದು ನಟ ಗಣೇಶ್ ಮನವಿ.
ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತದಾನ. ಕುಟುಂಬಸ್ಥರ ಜೊತೆ ಬಂದು ಲಕ್ಷ್ಮೀ ಮತ ಚಲಾವಣೆ. ವಿಜಯನಗರದ ಮರಾಠಿ ಶಾಲೆಯ ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ. ಹೆಬ್ಬಾಳ್ಕರ್ಗೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಸಾಥ್. ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿ ಗ್ರಾಮೀಣ ಶಾಸಕಿ.
Karnataka Assembly Elections 2023: ಮತದಾನ ಮುಗಿಯುವ ಒಂದೂವರೆ ಗಂಟೆ ಮುಂಚಿತವಾಗಿ ಮತದಾನ ಕೇಂದ್ರಕ್ಕೆ ಆಗಮಿಸಿದ ಯಶ್ ತಮ್ಮ ಹಕ್ಕು ಚಲಾಯಿಸಿದರು. ಪತ್ನಿ ರಾಧಿಕಾ ಪಂಡಿತ್ ಬೇರೆ ಕೇಂದ್ರದಲ್ಲಿ ಮತದಾನ ಮಾಡಿದ್ದರಿಂದ ಯಶ್ ಒಬ್ಬರೇ ಬಂದು ವೋಟ್ ಮಾಡಿದರು.
ಬಿರುಸಿನ ಮತದಾನದ ನಡುವೆ ಕೈ ಕೊಟ್ಟ EVM. ಚಾಮರಾಜನಗರ ಮತಗಟ್ಟೆಯ ಇವಿಎಂನಲ್ಲಿ ದೋಷ. ಸಂತೇಮರಹಳ್ಳಿ ವೃತ್ತ ಸಮೀಪದ ಮತಗಟ್ಟೆಯಲ್ಲಿ ಘಟನೆ. ಉಪ್ಪಾರ ಬೀದಿಯ ಮತಗಟ್ಟೆ 69ರಲ್ಲಿ ತಾಂತ್ರಿಕ ದೋಷ. ಬಳಿಕ ಅಧಿಕಾರಿಗಳಿಂದ ಸರಿಪಡಿಸುವ ಕಾರ್ಯ ಪೂರ್ಣ. ಮತದಾರರು ಅರ್ಧ ಗಂಟೆ ಕಾದು ಕಾದು ಅಸಮಾಧಾನ. ಚಾಮರಾಜನಗರದ ಉಳಿದೆಲ್ಲೆಡೆ ಬಿರುಸಿನ ಮತದಾನ.
ಶಿಕಾರಿಪುರದಲ್ಲಿ ಮತದಾನ ಮಾಡುವ ಮೊದಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿವೈ ವಿಜಯೇಂದ್ರ ತಮ್ಮ ಮನೆ ದೇವರಾದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು.
ಬೆಂಗಳೂರಲ್ಲಿ ಸಚಿವ ಭೈರತಿ ಬಸವರಾಜ್ ಮತದಾನ. ಕೆ.ಆರ್.ಪುರ ಕ್ಷೇತ್ರದ ಮೇಡಹಳ್ಳಿಯಲ್ಲಿ ಮತದಾನ. ಪತ್ನಿ ಪದ್ಮವತಿಯೊಂದಿಗೆ ಆಗಮಿಸಿ ಸಚಿವರ ವೋಟಿಂಗ್. ಮತ ಚಲಾವಣೆಗೂ ಮುನ್ನ ಗೋಪೂಜೆ ಸಲ್ಲಿಕೆ. ಎಲ್ಲರೂ ಮತದಾನ ಮಾಡುವಂತೆ ಭೈರತಿ ಮನವಿ.
ಕರ್ನಾಟಕ ಚುನಾವಣೆ 2023: ಹುಬ್ಬಳ್ಳಿಯಲ್ಲಿ ಮತದಾರರ ಜೊತೆಗೆ ಬೆಕ್ಕು ಕೂಡ ಮತಗಟ್ಟೆಗೆ ಬಂದಿರುವ ಘಟನೆ ನಡೆದಿದೆ. ಈ ಬೆಕ್ಕನ್ನು ಕಂಡು ಮತಗಟ್ಟೆ ಸಿಬ್ಬಂದಿ ಅಚ್ಚರಿ ಗೊಂಡಿದ್ದು, ಅದನ್ನು ದೂರ ಕಳುಹಿಸಲು ಕೂಡ ಪ್ರಯತ್ನಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಒಂದು ದಿನ ಬಾಕಿ ಇದೆ. ಮತದಾನ ದಿನದಂದು ರಾಜ್ಯದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಂದೋಬಸ್ತ್ ಗಾಗಿ ಬರೋಬ್ಬರಿ 1.56 ಲಕ್ಷ ಪೊಲೀಸರ ನಿಯೋಜನೆ ಮಾಡಲಾಗಿದೆ. ರಾಜ್ಯದ 84,119 ಸಾವಿರ ಪೊಲೀಸರು, 304 ಡಿವೈಎಸ್ಪಿ, 991 ಇನ್ಸ್ಪೆಕ್ಟರ್, 20610 ಪಿಎಸ್ಐ ಹಾಗೂ ಹೊರರಾಜ್ಯದಿಂದ 8,500 ಪೊಲೀಸರು, 650 ಸಿಎಪಿಎಫ್ ತುಕಡಿಗಳು ನಿಯೋಜನೆ ಮಾಡಲಾಗಿದೆ. ಒಟ್ಟು 1.56 ಲಕ್ಷ ಪೊಲೀಸರಿಂದ ಮತದಾನದಿಂದು ಬಂದೋಬಸ್ತ್ ಏರ್ಪಡಿಸಲಾಗಿದೆ.
Karnataka Assembly Elections: ಇನ್ನು ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕಾಗಿ ಒಟ್ಟು 58, 282 ಮತಗಟ್ಟೆಗಳ ನಿರ್ಮಾಣ ಮಾಡಲಾಗಿದ್ದು, ಇದರಲ್ಲಿ 11,617 ಸೂಕ್ಷ್ಮ ಮತಗಟ್ಟೆಗಳ ನಿರ್ಮಾಣ ಮಾಡಲಾಗಿದೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಎಪಿಎಫ್ ಹಾಗೂ ಪೊಲೀಸರಿಂದ ಭದ್ರತೆ ನಿಯೋಜನೆ ಮಾಡಲಾಗಿದೆ.
Karnataka Assembly Elections: ನಗರದ 4 ಅಪರ ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿರುವ ಮಸ್ಟರಿಂಗ್ ಕೇಂದ್ರಗಳಿಗೆ ಎಲ್ಲಾ ಮತಗಟ್ಟೆ ಅಧಿಕಾರಿಗಳು ಬಂದು ಮತಗಟ್ಟೆಗಳಿಗೆ ಅಗತ್ಯವಿರುವ ಇವಿಎಂ, ಕಂಟ್ರೋಲ್ ಯುನಿಟ್, ವಿವಿ ಪ್ಯಾಟ್, ಎಲ್ಲಾ ಸಾಮಗ್ರಿಗಳನ್ನು ತೆಗೆದುಕೊಂಡು ಬಿ.ಎಂ.ಟಿ.ಸಿ, ಕೆ.ಎಸ್.ಆರ್.ಟಿ.ಸಿ, ಇತರೆ ವಾಹನಗಳ ಮೂಲಕ ಮತಗಟ್ಟೆಗಳಿಗೆ ತೆರಳಲಿದ್ದಾರೆ. ಎಲ್ಲಾ ಮತಗಟ್ಟೆಗಳಲ್ಲೂ ವಸತಿ, ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆಯ ನಡೆಯಲಿದ್ದು, ಮೇ 13 ರಂದು ಅಂತಿಮ ಫಲಿತಾಂಶ ಪ್ರಕಟವಾಗಲಿದೆ.ಈ ಹಿನ್ನೆಲೆಯಲ್ಲಿ ನಾವು ನಿಮಗೆ ನಿಮ್ಮ ನೆಚ್ಚಿನ ಸ್ಟಾರ್ ನಟ ನಟಿಯರು ಮತದಾನ ಮಾಡುವ ಕ್ಷೇತ್ರಗಳ ವಿವರವನ್ನು ತಿಳಿಸುತ್ತೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.