ಉತ್ತರಪ್ರದೇಶ ರಾಜ್ಯಪಾಲ ರಾಮ್ ನಾಯಕ್ ಅವರು ಸಿಎಂ ಯೋಗಿ ಆದಿತ್ಯನಾಥ್ ಮನವಿಯನ್ನು ಅಂಗೀಕರಿಸಿದ್ದು, ಸುಹೆಲ್ದೇವ್ ಭಾರತೀಯ ಸಮಾಜ ಪಕ್ಷದ ನಾಯಕ ಹಾಗೂ ಸಚಿವ ಓಂ ಪ್ರಕಾಶ್ ರಾಜ್ಬರ್ ಅವರನ್ನು ಈ ಕ್ಷಣದಿಂದಲೇ ಸಚಿವ ಸ್ಥಾನದಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಗೋರಖ್ಪುರದಲ್ಲಿ ಸಾಮಾಜವಾದಿ ಪಕ್ಷದ(ಎಸ್ಪಿ) ಅಭ್ಯರ್ಥಿಯನ್ನು ಸೋಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶಿಸಿದ್ದಾರೆ ಎಂದು ಮೇ 16 ರಂದು ಅಖಿಲೇಶ್ ಯಾದವ್ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಪತ್ರವನ್ನು ಕಳುಹಿಸಿದ್ದಾರೆ ಎಂದು ಎಸ್ಪಿ ಮುಖ್ಯ ವಕ್ತಾರ ರಾಜೇಂದ್ರ ಚೌಧರಿ ತಿಳಿಸಿದ್ದಾರೆ.
ಬಡಜನರಿಗೆ ಶೌಚಾಲಯ ಮತ್ತು ಇಂಧನ ಅವಶ್ಯಕತೆ ಪೂರೈಕೆಗೆ ಪ್ರಧಾನಿ ನರೇಂದ್ರ ಮೋದಿ ಆದ್ಯತೆ ನೀಡುತ್ತಿದ್ದಾರೆ. ಈ ಕಾರಣಕ್ಕಾಗಿಯೇ ಮೋದಿ ಅವರು ಮತ್ತಷ್ಟು ವರ್ಷ ದೇಶದ ಆಡಳಿತ ನಡೆಸಲಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ನಾನು ಪ್ರಧಾನಿ ಹುದ್ದೆಗೆ ಸ್ಪರ್ಧೆಯಲ್ಲಿ ಇಲ್ಲ. ಜನ ನನ್ನನ್ನು ಹಿಂದುತ್ವದ 'ಪೋಸ್ಟರ್ ಬಾಯ್' ಎಂದು ಉಲ್ಲೇಖಿಸಲ್ಪಡುವಲ್ಲಿ ನನಗೆ ಯಾವುದೇ ಆಕ್ಷೇಪಗಳಿಲ್ಲ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಅಜಂ ಖಾನ್ ಎಪ್ರಿಲ್ 05 ರಂದು ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಪ್ರಧಾನಿ ಮೋದಿ, ಸಿಎಂ ಯೋಗಿ ಸೇರಿದಂತೆ ಹಲವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ರಾಂಪುರದ ಟಂಡಾದಲ್ಲಿ ಅಜಂ ಖಾನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಮೋದಿ ಜಿ ಕಿ ಸೇನಾ ಎಂದು ಕರೆದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆ ವಿಚಾರವಾಗಿ ಈಗ ಘಾಜಿಯಾಬಾದ್ ಜಿಲ್ಲೆಯ ಮ್ಯಾಜಿಸ್ಟ್ರೇಟ್ ನಿಂದ ಚುನಾವಣಾ ಆಯೋಗ ವರದಿ ಕೇಳಿದೆ.ಸಿಎಂ ಯೋಗಿ ಹೇಳಿಕೆಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿ ವರದಿಯಾದ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಸಂಪೂರ್ಣವಾದ ವರದಿ ನೀಡುವಂತೆ ಸೂಚನೆ ನೀಡಿದೆ ಎನ್ನಲಾಗಿದೆ.
ಮಾರ್ಚ್ 19, 2017ರಲ್ಲಿ ಉತ್ತರಪ್ರದೇಶದ ಜನತೆ ಸೇವೆ ಮಾಡಲು ನಮಗೆ ಅವಕಾಶ ದೊರೆಯಿತು. ಅಲ್ಲಿಂದ ಇಲ್ಲಿಯವರೆಗೆ ಹದಗೆಟ್ಟಿದ್ದ ಉತ್ತರಪ್ರದೇಶದ ಪರಿಸ್ಥಿತಿಯನ್ನು ಬದಲಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ನೂತನವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ರಾಜಕೀಯ ಪ್ರವೇಶ ಉತ್ತರ ಪ್ರದೇಶದ ರಾಜಕೀಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಫೆಬ್ರವರಿ 26 ರಂದು ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಐಎಎಫ್ ವಾಯುಪಡೆ ದಾಳಿ ನರೇಂದ್ರ ಮೋದಿಯವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಲು ಸಹಾಯ ಮಾಡುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.