ನಾನು ಸ್ಪೀಕರ್ ಪೀಠಕ್ಕೆ ನಮಸ್ಕರಿಸಿ ಗೌರವ ನೀಡುತ್ತೇನೆ. ಅಂತಹ ಉನ್ನತ ಹುದ್ದೆ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ನೀಡಿದೆ ಎಂದು ಹೇಳಿದ್ದೇನೆ. ಇದರಲ್ಲಿ ತಪ್ಪೇನು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಪೊಲೀಸ್ ಕ್ವಾಟ್ರಸ್ ವಾಸ ಮಾಡಲು ಯೋಗ್ಯವಿಲ್ಲ ವಿಚಾರ
2015-2023ರವರೆಗೆ 2 ಲಕ್ಷ 38 ಸಾವಿರ ಮನೆ ಘೋಷಣೆ ಆಗಿದ್ದವು
ಸ್ಲಂಬೋರ್ಡಲ್ಲಿ 1 ಲಕ್ಷ 80 ಸಾವಿರದ 200 ಮನೆ ಘೋಷಣೆ
ರಾಜೀವಗಾಂಧಿ ಯೋಜನೆಯಡಿ 50 ಸಾವಿರ ಮನೆ ಘೋಷಣೆ
ಬಿಜೆಪಿ ಅವಧಿಯಲ್ಲಿ 4 ವರ್ಷದಲ್ಲಿ ಒಂದು ಮನೆನೂ ಕೊಡಕ್ಕಾಗಿಲ್ಲ
ಚಿತ್ರದುರ್ಗದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ
Zameer Ahmed Khan: ಮುಸ್ಲಿಂ ಸಮುದಾಯದ ಜತೆ ನಾನು ನಿಂತಿದ್ದೆ ಆದರೆ ಆ ಸಮುದಾಯ ಜೆಡಿಎಸ್ ಜತೆ ನಿಲ್ಲಲಿಲ್ಲ ಎಂದು ಹೇಳುವ ಎಚ್. ಡಿ. ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದರು ಎಂಬುದು ಹೇಳಲಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅಗ್ರಹಿಸಿದ್ದಾರೆ.
ರಾಜ್ಯದಲ್ಲಿ ಬರಗಾಲ ಬಂದಿದೆ ಕುಡಿಯಲು ನೀರಿಲ್ಲ, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದ್ಯಾವುದರ ಚಿಂತೆ ಇಲ್ಲದ #ATMSarkara ಸಂತೆಯಲ್ಲಿ ಬೀದಿ ಜಗಳ ಮಾಡುತ್ತಾ ಕರ್ನಾಟಕವನ್ನು ಬಲಿಕೊಡುತ್ತಿದೆ. ಸಿಎಂ-ಡಿಸಿಎಂ ಅವರ ವೈಯಕ್ತಿಕ ಹಿತಾಸಕ್ತಿಯ ಮೇಲಾಟದಲ್ಲಿ ರಾಜ್ಯದ ರೈತರ ಬದುಕು ದುರ್ಬರವಾಗುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಪ್ರಸ್ತುತ ಕೆಎಂಡಿಸಿ ವತಿಯಿಂದ ಸರ್ಕಾರಿ ಕೋಟಾ ದಡಿ ಸೀಟು ಪಡೆಯುವ ಮೆರಿಟ್ ವಿದ್ಯಾರ್ಥಿಗಳಿಗೆ ಮೂರು ಲಕ್ಷ ರೂ. ಸಾಲ ನೀಡಲಾಗುತ್ತಿದ್ದು, ಬೇಡಿಕೆ ಮೇರೆಗೆ ಅದನ್ನು ಐದು ಲಕ್ಷ ರೂ. ಗಳಿಗೆ ಏರಿಸುವ ಬಗ್ಗೆ ಚಿಂತನೆ ನಡೆಸಿದ್ದು ಬಡ ಕುಟುಂಬಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಇದರಿಂದ ಅನುಕೂಲವಾಗಲಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ನಲ್ಲಿ ಚಾಮರಾಜ್ ಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಗೆ ಈಗ ಹಿನ್ನೆಡೆಯಾಗಿದೆ.ಹೌದು, ತಮ್ಮ ವಿರುದ್ಧದ ಪ್ರಕರಣ ತಡೆಗೆ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಈಗ ಹೈಕೋರ್ಟ್ನ ಏಕಸದಸ್ಯ ಪೀಠ ವಜಾಗೊಳಿಸಿದೆ.
ಅರಮನೆಯಂಥ ವಿಲಾಸಿ ಭವನದಲ್ಲಿ ಐಷಾರಾಮಿ ಜೀವನ ನಡೆಸುವ ನಿಮಗೆ, ನಿಮ್ಮದೇ ಕ್ಷೇತ್ರದ ಗೌರಿಪಾಳ್ಯ, ಪಾದರಾಯನಪುರದ ಬಡ ಮುಸ್ಲಿಂ ಬಂಧುಗಳು ಎಂಥ ಕಷ್ಟದ ಸ್ಥಿತಿಯಲ್ಲಿದ್ದಾರೆ ಎನ್ನುವುದು ಗೊತ್ತಾ? ಕಾಮಾಲೆ ಕಣ್ಣಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಹಾಕುವ ನಿಮಗೆ ಮುಸ್ಲಿಮರ ನೈಜಸ್ಥಿತಿಯ ಬಗ್ಗೆ ಅರಿವಿದೆಯಾ? ಎಂದು ಜೆಡಿಎಸ್ ಪ್ರಶ್ನಿಸಿದೆ.
ಮೊದಲ ಸಿನಿಮಾದಲ್ಲಿಯೇ ಝೈದ್ ಖಾನ್ ಅನುಭವಿ ಹೀರೋ ರೀತಿ ನಟಿಸಿದ್ದಾರೆ. ಅವರ ಮತ್ತು ಸೋನಲ್ ಮಂಥೆರೋ ಜೋಡಿ ಚೆನ್ನಾಗಿದೆ. ಸಿನಿಮಾ ಎಲ್ಲಿಯೂ ಬೋರ್ ಆಗಲ್ಲವೆಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್ ಅವರು ನಮ್ಮ ಅಧ್ಯಕ್ಷರು. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾನು ಒಕ್ಕಲಿಗರ ಬಗ್ಗೆ ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ನನಗೂ ಒಕ್ಕಲಿಗ ಸಮುದಾಯದಲ್ಲಿ ಬಹಳಷ್ಟು ಆತ್ಮಿಯರಿದ್ದಾರೆ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವರಾದ ಶ್ರೀ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ಖಾನ್ಗೆ ಎಸಿಬಿ ಶಾಕ್ ನೀಡಿದೆ. ನಿನ್ನೆ ಜಮೀರ್ ಮನೆಯ ಮೇಲೆ ಎಸಿಬಿ ದಾಳಿ ಮಾಡಿದ್ದು ಮನೆಯ ಮೂಲೆ ಮೂಲೆ ತಡಕಾಡಿದ್ದಾರೆ. ದಾಳಿ ವೇಳೆ ಹಲವು ದಾಖಲೆ ವಶಪಡಿಸಿಕೊಂಡಿದ್ದಾರೆ... ಇನ್ನೊಂದೆಡೆ ದಾಳಿ ಖಂಡಿಸಿ ಜಮೀರ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.