ತಮಿಳುನಾಡಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ

  • Zee Media Bureau
  • Oct 23, 2023, 10:59 PM IST

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ತಮಿಳುನಾಡಿಗೆ ಭೇಟಿ ನೀಡಲು ನಾಲ್ವರು ಸದಸ್ಯರ ನಿಯೋಗವನ್ನು ನಾಮನಿರ್ದೇಶನ ಮಾಡಿದ್ದಾರೆ.  ಅಲ್ಲಿ ಬಿಜೆಪಿ ಕಾರ್ಯಕರ್ತರು ತಮಿಳುನಾಡು ಸರ್ಕಾರದಿಂದ ಅನುಭವಿಸುತ್ತಿರುವ ದೌರ್ಜನ್ಯವನ್ನು ಪರಿಶೀಲಿಸಲು ಹಾಗೂ ಅದರ ವರದಿ ನೀಡಲು ನಿಯೋಗ ನೇಮಿಸಿದ್ದಾರೆ. ಶೀಘ್ರದಲ್ಲಿ ನಿಯೋಗ ತಮಿಳು ನಾಡಿಗೆ ಭೇಟಿ ನೀಡಲಿದ್ದು, ಅದರ  ವರದಿ ನೀಡಲಿದೆ ಎಂದು ನಡ್ಡಾ ಪತ್ರಿಕಾ ಪ್ರಕಟನೆ ಹೊರಡಿಸಿದ್ದಾರೆ. ನಿಯೋಗದಲ್ಲಿ ಕರ್ನಾಟಕದಿಂದ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಕೂಡಾ ಇರಲಿದ್ದಾರೆ.

Trending News