ಕಂದಕಕ್ಕೆ ಉರುಳಿ ಬಿದ್ದ 50 ಪ್ರಯಾಣಿಕರಿದ್ದ ಬಸ್ : 35 ಜನರ ದಾರುಣ ಸಾವು

  • Zee Media Bureau
  • Oct 7, 2022, 01:12 PM IST

ಉತ್ತರಾಖಂಡದ ಪೌರಿ ಗರ್ವಾಲ್‌ಜಿಲ್ಲೆಯಲ್ಲಿ ಭಾರಿ ದುರಂತವೊಂದು ಸಂಭವಿಸಿದೆ. ಸುಮಾರು 45 ರಿಂದ 50 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಂದಕಕ್ಕೆ ಬಿದ್ದಿದೆ. ಈ ಘಟನೆ ಮಂಗಳವಾರ ರಾತ್ರಿ ರಿಖ್ನಿಖಾಲ್-ಬಿರೋಖಾಲ್ ರಸ್ತೆಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ 35 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಬಸ್ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಇನ್ನು ಈ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ಟೀಟ್‌ ಮಾಡುವ ಮೂಲಕ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Trending News