ಕರಾವಳಿಯಲ್ಲಿ ತಣ್ಣಗಾಗಿದ್ದ ಹಿಜಾಬ್ ವಿವಾದ ಮತ್ತೆ ಶುರು

  • Zee Media Bureau
  • May 27, 2022, 02:04 PM IST

ರಾಜ್ಯವಲ್ಲದೆ ಇಡೀ ವಿಶ್ವದಲ್ಲೇ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್‌ ವಿವಾದ ಮುಗಿಯುವಂತೆ ಕಾಣುತ್ತಿಲ್ಲ. ಹೈಕೋರ್ಟ್‌ ತೀರ್ಪಿನ ಬಳಿಕ ತಣ್ಣಗಾಗಿದ್ದ ಹಿಜಾಬ್‌ ಇದೀಗ ಮತ್ತೆ ಶುರುವಾಗಿದೆ. ಮಂಗಳೂರಿನ  ಯೂನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ಹಾಕಲು ಕೆಲ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಿದ್ದಾರೆಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ  ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮಂಗಳೂರಿನ ಹಂಪನಕಟ್ಟೆಯ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಮಗೂ ಕೂಡ ಕಾಲೇಜಿಗೆ ಬರುವಾಗ ಕೇಸರಿ ಶಾಲು ಧರಿಸಲು ಅವಕಾಶ ನೀಡಿಬೇಕೆಂದು ಆಗ್ರಹಿಸಿದ್ದಾರೆ. 

Trending News