ಮಳೆ ಹಿನ್ನೆಲೆ ಶಾಲೆ, ಕಾಲೇಜುಗಳಿಗೆ ರಜೆ

  • Zee Media Bureau
  • Jul 7, 2022, 06:28 PM IST

ಶಿವಮೊಗ್ಗದಲ್ಲಿ ಮಳೆ ಮುಂದುವರಿದಿದೆ. ನಿನ್ನೆ ರಾತ್ರಿಯಿಂದಲೂ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸದ್ಯ ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ತಾಲೂಕಿನಲ್ಲಿ ಈಗಾಗಲೇ ರಜೆ ಘೋಷಿಸಲಾಗಿದ್ದು, ಇವತ್ತು ಕೂಡ ರಜೆ ಮುಂದುವರಿಯಲಿದೆ. ಇವತ್ತು ಶಿವಮೊಗ್ಗ, ಸೊರಬ, ಶಿಕಾರಿಪುರ ಮತ್ತು ಭದ್ರಾವತಿಯಲ್ಲಿ ರಜೆ ಘೋಷಿಸಲಾಗಿದೆ.

Trending News