ಕುಡಿದ ಮತ್ತಿನಲ್ಲಿ ಬಸವೇಶ್ವರ ಪ್ರತಿಮೆಗೆ ಅಪಮಾನ

  • Zee Media Bureau
  • Jun 24, 2022, 11:03 AM IST

ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿರುವ ಬಸವೇಶ್ವರ ಮೂರ್ತಿಗೆ ಯುವಕನೊಬ್ಬ ಅಪಮಾನ ಮಾಡಿದ್ದಾನೆ. ಅನ್ಯ ಧರ್ಮದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ಬಸವೇಶ್ವರ ಪ್ರತಿಮೆಯ ಮುಖಕ್ಕೆ ಬಟ್ಟೆ ಮುಚ್ಚಿದ್ದಾನೆ. ಈ ಹಿನ್ನೆಲೆಯಲ್ಲಿ ಲಿಂಗಾಯತ ಸಮುದಾಯ ಆಕ್ರೋಶ ವ್ಯಕ್ತಪಡಿಸಿದ್ದು, ಚಿತ್ತಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Trending News