ರಾಜ್ಯಸಭೆಗೆ ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ

  • Zee Media Bureau
  • Jul 7, 2022, 06:33 PM IST

ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ನಾಮನಿರ್ದೇಶಿತರಾಗಿದ್ದಾರೆ.. ಈ ಹಿನ್ನೆಲೆಯಲ್ಲಿ ವೀರೇಂದ್ರ ಹೆಗ್ಗಡೆ ಪ್ರಧಾನಿ ಮೋದಿಗೆ ಧನ್ಯವಾದ ಸಲ್ಲಿಸಿದ್ದಾರೆ. ರಾಜ್ಯಸಭೆ ಎಂದರೆ ಹಿರಿಯ ವೇದಿಕೆ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಚಾರ. ನಾವು ಸೀಮಿತ ಪ್ರದೇಶಗಳಲ್ಲಿ ಮಾಡುತ್ತಿದ್ದ ಸೇವೆಗಳನ್ನು ಈ ಮೂಲಕ ದೇಶವ್ಯಾಪಿ ಮಾಡಲು ಅವಕಾಶ ಸಿಕ್ಕಿದೆ. ಈ ಸ್ಥಾನಕ್ಕೆ ನನ್ನನ್ನು ಆಯ್ದುಕೊಂಡಿದ್ದಕ್ಕೆ ಧನ್ಯವಾದ ಎಂದಿದ್ದಾರೆ.

Trending News