ಶ್ರೀಲಂಕಾ ಸರ್ಕಾರದ ವಿರುದ್ಧ ಕ್ರಿಕೆಟರ್ ಸನತ್ ಜಯಸೂರ್ಯ ಪ್ರತಿಭಟನೆ

Written by - Zee Kannada News Desk | Last Updated : Jul 9, 2022, 07:16 PM IST
  • 70 ವರ್ಷಗಳಲ್ಲಿ ದೇಶದ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ರಾಜಪಕ್ಸೆ ರಾಜೀನಾಮೆಗೆ ಕರೆ ನೀಡುತ್ತಿದ್ದಂತೆ ಅನೇಕ ಪ್ರತಿಭಟನಾಕಾರರು ಅಧ್ಯಕ್ಷರ ನಿವಾಸಕ್ಕೆ ನುಗ್ಗಿದರು.
ಶ್ರೀಲಂಕಾ ಸರ್ಕಾರದ ವಿರುದ್ಧ ಕ್ರಿಕೆಟರ್ ಸನತ್ ಜಯಸೂರ್ಯ ಪ್ರತಿಭಟನೆ title=

ನವದೆಹಲಿ: ಶ್ರೀಲಂಕಾದ ನಡೆಯುತ್ತಿರುವ ಆರ್ಥಿಕ ಬಿಕ್ಕಟ್ಟಿನ ಮಧ್ಯೆ, ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ಅವರು ಇತ್ತೀಚೆಗೆ ಕೊಲಂಬೊದ ಬೀದಿಗಳಲ್ಲಿ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

70 ವರ್ಷಗಳಲ್ಲಿ ದೇಶದ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ರಾಜಪಕ್ಸೆ ರಾಜೀನಾಮೆಗೆ ಕರೆ ನೀಡುತ್ತಿದ್ದಂತೆ ಅನೇಕ ಪ್ರತಿಭಟನಾಕಾರರು ಅಧ್ಯಕ್ಷರ ನಿವಾಸಕ್ಕೆ ನುಗ್ಗಿದರು.

ಇದನ್ನೂ ಓದಿ : ಅಮರನಾಥದಲ್ಲಿ ಮೇಘಸ್ಪೋಟ: ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ, ಹೆಲ್ಪ್‌ಲೈನ್‌ ಬಿಡುಗಡೆ

ಇದನ್ನೂ ಓದಿ : ಸಿಎಂ ಆದ ಒಂದೇ ವರ್ಷಕ್ಕೆ ಸಿದ್ದರಾಮಯ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿತ್ತು: ಬಿಜೆಪಿ

ಸನತ್ ಜಯಸೂರ್ಯ ಅವರು ತಮ್ಮ ಚಿತ್ರಗಳ ಜೊತೆಗೆ ಸರಣಿ ಟ್ವೀಟ್‌ಗಳನ್ನು ಪೋಸ್ಟ್ ಮಾಡಿ, ಅದರಲ್ಲಿ ಅವರು ಪ್ರತಿಭಟನಾಕಾರರ ಜೊತೆಗೆ ಚಿತ್ರಗಳಿಗೆ ಪೋಸ್ ನೀಡುವುದನ್ನು ಕಾಣಬಹುದು.

'ನನ್ನ ಇಡೀ ಜೀವನದಲ್ಲಿ ನಾನು ವಿಫಲ ನಾಯಕನನ್ನು ಹೊರಹಾಕುವ ಏಕೈಕ ಗುರಿಯೊಂದಿಗೆ ಒಗ್ಗೂಡಿರುವುದನ್ನು ಹಿಂದೆಂದೂ ನೋಡಿಲ್ಲ.ನಾನು ಯಾವಾಗಲೂ ಶ್ರೀಲಂಕಾದ ಜನರೊಂದಿಗೆ ನಿಲ್ಲುತ್ತೇನೆ. ಮತ್ತು ಶೀಘ್ರದಲ್ಲೇ ವಿಜಯವನ್ನು ಆಚರಿಸುತ್ತೇನೆ. ಇದು ಯಾವುದೇ ಉಲ್ಲಂಘನೆಯಿಲ್ಲದೆ ಮುಂದುವರಿಯಬೇಕು" ಎಂದು ಬರೆದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News